LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Bangalore Urban

 ‘ಅಕ್ರಮ’ ಕಟ್ಟಡ ತೆರವು ಕಾರ್ಯಾಚರಣೆ ವೇಳೆ ಪೊಲೀಸರು ಹಾಗೂ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ನಡುವೆ ಜಟಾಪಟಿ

ಬೆಂಗಳೂರು: ಒಎಂಬಿಆರ್ ಲೇಔಟ್‌ನಲ್ಲಿರುವ ಮೂರು ಅಂತಸ್ತಿನ ಮನೆ ತೆರವು ಕಾರ್ಯಾಚರಣೆ ವೇಳೆ ಪೊಲೀಸರು ಹಾಗೂ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ನಡುವೆ ವಾಕ್ಸಾಮರ ನಡೆದಿದ್ದು, ದೊಡ್ಡ ಹೈಡ್ರಾಮಾ ನಡೆದ ವಿದ್ಯಾಮಾನ ಶುಕ್ರವಾರ ಕಂಡು ಬಂದಿತು.

ಬಿಡಿಎ ಟಾಸ್ಕ್ ಫೋರ್ಸ್ ಮತ್ತು ಅದರ ಎಂಜಿನಿಯರ್‌ಗಳಿಗೆ ಬೆಂಬಲ ನೀಡಲು ಸ್ಥಳಕ್ಕೆ ಬಂದಿದ್ದ ಬಾಣಸವಾಡಿಯ ಪೊಲೀಸರು, ಇದ್ದಕ್ಕಿದ್ದಂತೆ ಬಿಡಿಎ ವಿರುದ್ಧ ತಿರುಗಿಬಿದ್ದರು. ಇದಕ್ಕೆ ಕಾರಣ ನ್ಯಾಯಾಲಯ ತಡೆಯಾಜ್ಞೆ.

ಬಿಡಿಎ ಕಟ್ಟಡ ತೆರವುಗೊಳಿಸಲು ಮುಂದಾಗುತ್ತಿದ್ದಂತೆಯೇ ಕುಟುಂಬಸ್ಥರು ಪೊಲೀಸರಿಗೆ ನ್ಯಾಯಾಲಯ ತಡೆಯಾಜ್ಞೆ ನೀಡಿದೆ ಎಂದು ಮನವರಿಕೆ ಮಾಡಿಕೊಟ್ಟರು. ಬಳಿಕ ಪೊಲೀಸರು ಬಿಡಿಎ ಅಧಿಕಾರಿಗಳನ್ನು ತಡೆಹಿಡಿದರು.

ಮನೆಯನ್ನು ಪ್ರಭಾಕರ್ ರೆಡ್ಡಿ ಮತ್ತು ಕುಟುಂಬದವರು ಅಕ್ರಮವಾಗಿ ನಿರ್ಮಿಸಿದ್ದಾರೆ. ನಮ್ಮ ಕಾರ್ಯನಿರ್ವಾಹಕ ಇಂಜಿನಿಯರ್ ಮತ್ತು ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಅವರು ಈಗಾಗಲೇ ನಿರ್ಮಾಣವನ್ನು ನಿಲ್ಲಿಸುವಂತೆ ಮೂರು ನೋಟಿಸ್‌ಗಳನ್ನು ನೀಡಿದ್ದಾರೆ. ನೋಟಿಸ್ ಬಳಿಕ ತಾತ್ಕಾಲಿಕವಾಗಿ ನಿರ್ಮಾಣ ಕಾರ್ಯ ನಿಲ್ಲಿಸುತ್ತಿದ್ದ ಅವರು, ಮತ್ತೆ ನಿರ್ಮಾಣವನ್ನು ಮುಂದುವರಿಸಿದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕಟ್ಟಡ ತೆರವಿಗೂ ಮುನ್ನ ಆಸ್ತಿ ವಿವರಗಳನ್ನು ಪರಿಶೀಲನೆ ನಡೆಸಲಾಗಿತ್ತು. ಒಎಂಬಿಆರ್ ಲೇಔಟ್‌ನ ಮತ್ತೊಂದು ಮನೆ ತೆರವಿಗೆ ನ್ಯಾಯಾಲಯ ತಡೆಯಾಜ್ಞೆ ನೀಡಿದೆ. ಆದರೆ, ಕುಟುಂಬವು ತಮ್ಮ ಕಟ್ಟಡಕ್ಕೆ ನೀಡಲಾಗಿದೆ ಎಂದು ಸುಳ್ಳು ಹೇಳಿ, ದಾರಿ ತಪ್ಪಿಸುವ ಕೆಲಸ ಮಾಡುತ್ತಿದೆ ಎಂದು ಹೇಳಿದ್ದಾರೆ.

ಶುಕ್ರವಾರ ಬೆಳಿಗ್ಗೆ 8 ಗಂಟೆಗೆ ಕಾರ್ಯಾಚರಣೆ ಆರಂಭಿಸಲಾಗಿತ್ತು. 2ನೇ ಮಹಡಿಯ ಪಿಲ್ಲರ್ ಗಳನ್ನು ಕೆಡವಲಾಗಿತ್ತು. ಪೊಲೀಸರಿಗೂ 2 ದಿನಗಳ ಮುಂಚೆಯೇ ಮಾಹಿತಿ ನೀಡಲಾಗಿತ್ತು. ಆದರೆ, ಸ್ಥಳಕ್ಕೆ ಬಂದ ಪೊಲೀಸರು ನಮ್ಮನ್ನೇ ತಡೆಹಿಡಿದರು. ಕಟ್ಟಡ ಮಾಲೀಕರ ಇಬ್ಬರು ಪುತ್ರರು ಹಾಗೂ ಅವರ ಕೆಲ ಬೆಂಬಲಿಗರು ಸ್ಥಳಕ್ಕೆ ಬಂದು ವಿರೋಧ ವ್ಯಕ್ತಪಡಿಸಿದ್ದರು. ಬಾಣಸವಾಡಿಯ ಎಸಿಪಿ ಎಂ.ಎಚ್.ಉಮಾ ಶಂಕರ್ ಮಧ್ಯ ಪ್ರವೇಶಿಸಿ ನಮ್ಮ ಇಂಜಿನಿಯರ್‌ಗಳನ್ನು ನಿಂದಿಸಿ, ಬೆಳಗ್ಗೆ 10.30ಕ್ಕೆ ಕಾರ್ಯಾಚರಣೆ ನಿಲ್ಲಿಸುವಂತೆ ಸೂಚಿಸಿದರು ಎಂದು ಆರೋಪಿಸಿದ್ದಾರೆ.

ಬಿಡಿಎ ಕಾರ್ಯಾಚರಣೆ ಆರಂಭಿಸುತ್ತಿದ್ದಂತೆಯೇ ಕುಟುಂಬಸ್ಥರು ನಮ್ಮನ್ನು ಸಂಪರ್ಕಿಸಿದ್ದರು. ನ್ಯಾಯಾಲಯದ ತಡೆಯಾಜ್ಞೆ ನೀಡಿರುವುದನ್ನು ತಿಳಿಸಿದರು. ಅಕ್ರಮವಾಗಿ ತೆರವು ಕಾರ್ಯಾಚರಣೆ ನಡೆಸಲು ಅನುಮತಿ ನೀಡಲು ಸಾಧ್ಯವಿಲ್ಲ. ಅಲ್ಲದೆ, ಬಿಡಿಎ ನಮಗೆ ಮೊದಲೇ ಮಾಹಿತಿಯನ್ನೂ ನೀಡಿರಲಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ಶೇ.20ರಷ್ಟು ತೆರವು ಕಾರ್ಯಾಚರಣೆ ನಡೆಸಿದ್ದಾರೆ. ಠಾಣೆಯಿಂದ ಎಂಜಿನಿಯರ್‌ಗಳು ಮತ್ತು ಟಾಸ್ಕ್ ಫೋರ್ಸ್‌ಗೆ ಪದೇ ಪದೇ ಕರೆ ಮಾಡಿದರೂ ಉತ್ತರ ನೀಡಲಿಲ್ಲ. ಹೀಗಾಗಿ, ಎಸಿಪಿ ಮಧ್ಯಪ್ರವೇಶಿಸಿ, ಕಾರ್ಯಾಚರಣೆ ನಿಲ್ಲಿಸಿದರು ಎಂದು ಹೇಳಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು