LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts

ಅಕ್ರಮ ನಾಡ ಬಂದೂಕು ತಯಾರಿಕಾ ಜಾಲ ಪತ್ತೆ

ತುಮಕೂರು: ಅಕ್ರಮವಾಗಿ ನಾಡ ಬಂದೂಕುಗಳನ್ನು ತಯಾರಿಸಿ ಮಾರಾಟ ಮಾಡುತ್ತಿದ್ದ ಜಾಲವನ್ನು ಪತ್ತೆ ಹಚ್ಚಿರುವ ತುಮಕೂರು ಜಿಲ್ಲಾ ಪೊಲೀಸರು ಆರು ಮಂದಿ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಗುಬ್ಬಿ ತಾಲೂಕಿನ ತಿಪ್ಪೂರಿನ ಟಿ.ಆರ್.ಮಧುಚಂದ್ರ (29), ಎಸ್.ಶಿವಕುಮಾರ್ (24), ಉದ್ದೆ ಹೊಸಕೆರೆಯ ಮಂಜುನಾಥ್ (39), ಹಂದನಕೆರೆಯ ತಿಮ್ಮರಾಜು (45) ಮತ್ತು ರವೀಶ್ (50), ತುಮಕೂರು ಪಟ್ಟಣದ ಇಮ್ರಾನ್ ಪಾಷಾ (40) ಬಂಧಿತ ಆರೋಪಿಗಳು. ಆಗಸ್ಟ್ 12ರಂದು ಗುಬ್ಬಿ ತಾಲೂಕಿನ ತಿಪೂರು ಗ್ರಾಮದ ಆರೋಪಿ ಮಧುಚಂದ್ರ ಎಂಬಾತ ಅಕ್ರಮವಾಗಿ ಯಾವುದೇ ಲೈಸೆನ್ಸ್ ಇಲ್ಲದೆ ನಾಡ ಬಂದೂಕಿನೊಂದಿಗೆ ಮೀಸಲು ಅರಣ್ಯ ಪ್ರದೇಶದಲ್ಲಿ ಬೇಟೆಯಾಡುತ್ತಿದ್ದನು. ಇದನ್ನು ಆಕ್ಷೇಪಿಸಿದ ದರ್ಶನ್ ಎಂಬುವರ ಜೊತೆ ಮಾತಿಗೆ ಮಾತು ಬೆಳೆಯುತ್ತಿದ್ದ ಸಂದರ್ಭದಲ್ಲಿ ಆಕಸ್ಮಿಕವಾಗಿ ಬಂದೂಕು ಕೆಳಗೆ ಬಿದ್ದು ಸ್ಥಳದಲ್ಲಿಯೇ ಇದ್ದ ಚೈತ್ರ ಎಂಬುವರಿಗೆ ಗಾಯವಾಗಿತ್ತು. ಈ ಸಂಬಂಧ ಗುಬ್ಬಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ಕೂಡ ದಾಖಲಾಗಿತ್ತು.

ಆರೋಪಿ ಹೊಂದಿದ್ದ ಲೈಸೆನ್ಸ್ ಇಲ್ಲದ ಬಂದೂಕಿನ ಬಗ್ಗೆ ತನಿಖೆ ನಡೆಸಿದಾಗ ಜಿಲ್ಲೆಯಲ್ಲಿ ನಾಡ ಬಂದೂಕುಗಳನ್ನು ತಯಾರಿಸಿ 25,000 ರಿಂದ 30,000 ರೂ. ಗಳಿಗೆ ಮಾರಾಟ ಮಾಡುತ್ತಿರುವ ಜಾಲ ಬೆಳಕಿಗೆ ಬಂದಿದೆ. ಬಂಧಿತ ಆರು ಮಂದಿ ಆರೋಪಿಗಳಿಂದ ಒಟ್ಟು ನಾಲ್ಕು ಬಂದೂಕುಗಳನ್ನು, ಬಿಡಿ ಭಾಗಗಳನ್ನು ಹಾಗೂ ಇದಕ್ಕೆ ತಯಾರಿಸಲು ಬಳಸಲಾಗಿದ್ದ ಕಚ್ಚಾ ಸಾಮಗ್ರಿಗಳನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ. ಹಂದನಕೆರೆಯ ಫಾರ್ಮ್‌ಹೌಸ್‌ನಲ್ಲಿ ಗನ್‌ಗಳನ್ನು ಜೋಡಿಸಿ, ಅರಣ್ಯದಲ್ಲಿ ಪ್ರಾಣಿಗಳನ್ನು ಬೇಟೆಯಾಡಲು ಬಳಸುತ್ತಿದ್ದರು. ಈ ರೀತಿ ನಾಡ ಬಂದೂಕುಗಳನ್ನು ಖರೀದಿ ಮಾಡಿರುವವರು ಕಾಡು ಪ್ರಾಣಿಗಳನ್ನು ಬೇಟೆಯಾಡಲು ಉಪಯೋಗಿಸುತ್ತಿದ್ದರು ಎಂದು ಮಾಹಿತಿ ಲಭ್ಯವಾಗಿದೆ. ಇದಲ್ಲದೆ ಅನೇಕರ ಬಳಿ ಅಕ್ರಮವಾಗಿ ನಾಡ ಬಂದೂಕು ಇರುವ ಬಗ್ಗೆ ಮಾಹಿತಿ ಲಭ್ಯವಾಗಿದ್ದು, ಪೊಲೀಸರು ಅದನ್ನು ವಶಕ್ಕೆ ಪಡೆಯುವ ಕಾರ್ಯದಲ್ಲಿದ್ದಾರೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಶೋಕ್ ತಿಳಿಸಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು