LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಅದಾನಿ ಲಂಚ ಪ್ರಕರಣ ಗದ್ದಲ: ಸತತ ನಾಲ್ಕನೇ ದಿನ ಸಂಸತ್ತು ಕಲಾಪ ಮುಂದೂಡಿಕೆ

ನವದೆಹಲಿ: ಗೌತಮ್ ಅದಾನಿ ಲಂಚದ ಆರೋಪ ಮತ್ತು ಇತರ ವಿಷಯಗಳ ಕುರಿತು ವಿರೋಧ ಪಕ್ಷದ ಸದಸ್ಯರು ಇಂದು ಶುಕ್ರವಾರವೂ ಪ್ರತಿಭಟನೆಯನ್ನು ಮುಂದುವರೆಸಿದ್ದರಿಂದ ಸಂಸತ್ತಿನ ಉಭಯ ಸದನಗಳಲ್ಲಿ ಚಳಿಗಾಲದ ಅಧಿವೇಶನದ ಕಲಾಪ ಸತತ ನಾಲ್ಕನೇ ದಿನವೂ ಸ್ಥಗಿತಗೊಂಡಿದೆ.

ರಾಜ್ಯಸಭೆಯ ಕಲಾಪವನ್ನು ದಿನದ ಮಟ್ಟಿಗೆ ಮುಂದೂಡಲಾಯಿತು, ಆದರೆ ಪ್ರತಿಪಕ್ಷಗಳ ಸಂಸದರು ಸಮಸ್ಯೆಗಳ ಬಗ್ಗೆ ಚರ್ಚೆಗೆ ಒತ್ತಾಯಿಸಿ ಪ್ರತಿಭಟನೆಯನ್ನು ಮುಂದುವರೆಸಿದ್ದರಿಂದ ಲೋಕಸಭೆಯನ್ನು ಮಧ್ಯಾಹ್ನದವರೆಗೆ ಮುಂದೂಡಲಾಯಿತು.

ಇಂದು ಬೆಳಗ್ಗೆ ರಾಜ್ಯಸಭೆ ಕಲಾಪ ಆರಂಭಗೊಂಡಾಗ ಸಭಾಪತಿ ಜಗದೀಪ್ ಧನಕರ್ ಅವರು ಸದನದ ನಿಯಮ 267 ರ ಅಡಿಯಲ್ಲಿ ನಿಗದಿತ ವ್ಯವಹಾರವನ್ನು ಮುಂದೂಡಲು 17 ಸೂಚನೆಗಳನ್ನು ಸ್ವೀಕರಿಸಿದ್ದಾರೆ ಎಂದು ಹೇಳಿದರು.

ಅದಾನಿ ಗ್ರೂಪ್ ವಿರುದ್ಧದ ಭ್ರಷ್ಟಾಚಾರ ಮತ್ತು ಅಕ್ರಮಗಳ ಆರೋಪಗಳು, ಉತ್ತರ ಪ್ರದೇಶದ ಸಂಭಾಲ್‌ನಲ್ಲಿ ನಡೆದ ಕೋಮು ಹಿಂಸಾಚಾರ ಮತ್ತು ಮಣಿಪುರದಲ್ಲಿ ಜನಾಂಗೀಯ ಘರ್ಷಣೆಗಳ ಕುರಿತು ಚರ್ಚೆಗಾಗಿ ಪ್ರತಿಪಕ್ಷಗಳ ಸಂಸದರು ನೊಟೀಸ್ ಜಾರಿ ಮಾಡಿದರು. ಎಲ್ಲಾ ನೋಟಿಸ್‌ಗಳನ್ನು ತಿರಸ್ಕರಿಸುತ್ತಿರುವುದಾಗಿ ಸಭಾಪತಿ ಹೇಳಿದರು. ಇದು ಹಲವು ವಿರೋಧ ಪಕ್ಷದ ಸಂಸದರ ಪ್ರತಿಭಟನೆಗೆ ಕಾರಣವಾಗಿ ಅವರು ಘೋಷಣೆಗಳನ್ನು ಎತ್ತಲು ಪ್ರಾರಂಭಿಸಿದರು.

ನೀವು ಕಲಾಪ ಸುಗಮವಾಗಿ ನಡೆಯಲು ಬಿಡದಿದ್ದರೆ ನಿಯಮ 267 ನ್ನು ಅಡ್ಡಿಪಡಿಸುವ ಕಾರ್ಯವಿಧಾನವಾಗಿ ಅಸ್ತ್ರಗೊಳಿಸಲಾಗತ್ತದೆ ಎಂದು ಸಭಾಪತಿಗಳು ಹೇಳಿದರು. ಈ ಹೇಳಿಕೆಗೆ ಕಾಂಗ್ರೆಸ್ ಸೇರಿದಂತೆ ವಿಪಕ್ಷ ಸಂಸದರು ವಿರೋಧ ವ್ಯಕ್ತಪಡಿಸಿದರು. ಕಲಾಪ ಮುಂದುವರಿಸಲಾಗದೆ ಸಭಾಧ್ಯಕ್ಷರು ಸದನದ ಕಲಾಪವನ್ನು ಡಿಸೆಂಬರ್ 2ಕ್ಕೆ ಮುಂದೂಡಿದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು