LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಅದಾನಿ ವಿರುದ್ಧ ಜಂಟಿ ಸಂಸದೀಯ ತನಿಖೆಗೆ ಒತ್ತಾಯಿಸಿ ಸಂಸತ್ತಿನಲ್ಲಿ ಪ್ರತಿಭಟನೆ

ನವದೆಹಲಿ: ತೀವ್ರ ಪ್ರತಿಭಟನೆಯಲ್ಲಿ, ಹಲವಾರು ಇಂಡಿಯಾ ಬ್ಲಾಕ್‌ ಮೈತ್ರಿಕೂಟದ ನಾಯಕರು ಇಂದು ಗುರುವಾರ "ಮೋದಿ ಅದಾನಿ ಏಕ್ ಹೈ" ಮತ್ತು "ಅದಾನಿ ಸೇಫ್ ಹೈ" ಎಂಬ ಬರಹಗಳನ್ನು ಹೊಂದಿದ ಕಪ್ಪು ಜಾಕೆಟ್ ಗಳನ್ನು ಧರಿಸಿ ಅದಾನಿ ವಿರುದ್ಧ ಜಂಟಿ ಸಂಸದೀಯ ತನಿಖೆಗೆ ಒತ್ತಾಯಿಸಿ ಸಂಸತ್ತಿನ ಆವರಣದಲ್ಲಿ ಘೋಷಣೆಗಳನ್ನು ಕೂಗುತ್ತಾ ಪ್ರತಿಭಟನೆ ನಡೆಸಿದರು.

ತಮ್ಮ ಟ್ರೇಡ್ ಮಾರ್ಕ್ ಬಿಳಿ ಟೀ ಶರ್ಟ್ ಮೇಲೆ ಸ್ಟಿಕ್ಕರ್ ಅಂಟಿಸಿದ ಜಾಕೆಟ್ ಧರಿಸಿ ಬಂದ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಪ್ರಧಾನಿ ನರೇಂದ್ರ ಮೋದಿ ಅವರು ಅದಾನಿ ಗ್ರೂಪ್ ಅಧ್ಯಕ್ಷ ಗೌತಮ್ ಅದಾನಿ ವಿರುದ್ಧ ತನಿಖೆ ನಡೆಸಲು ಸಾಧ್ಯವಿಲ್ಲ ಏಕೆಂದರೆ ಅದು ಅವರ ವಿರುದ್ಧವೇ ತನಿಖೆ ನಡೆಸುವಂತೆ ಮಾಡುತ್ತದೆ ಎಂದರು.

ಪ್ರಿಯಾಂಕಾ ಗಾಂಧಿ ವಾದ್ರಾ ಸೇರಿದಂತೆ ಕಾಂಗ್ರೆಸ್ ಸಂಸದರು, ಆರ್‌ಜೆಡಿ ಮತ್ತು ಎಡಪಕ್ಷಗಳ ಹಲವಾರು ವಿರೋಧ ಪಕ್ಷಗಳ ಸಂಸದರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ಲಂಚ ಮತ್ತು ವಂಚನೆ ಆರೋಪದ ಮೇಲೆ ಅಮೆರಿಕ ನ್ಯಾಯಾಲಯದಲ್ಲಿ ಅದಾನಿ ವಿರುದ್ಧದ ದೋಷಾರೋಪಣೆಯ ಕುರಿತು ಸಂಸತ್ತಿನಲ್ಲಿ ಚರ್ಚೆ ನಡೆಯಬೇಕು. ಪ್ರಧಾನಿ ನರೇಂದ್ರ ಮೋದಿ ಅವರು ಈ ವಿಷಯದ ಬಗ್ಗೆ ಸದನದಲ್ಲಿ ಮಾತನಾಡಬೇಕು ಎಂದು ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ಇಬ್ಬರೂ ಒತ್ತಾಯಿಸಿದರು.

ಸ್ವಲ್ಪ ಸಮಯದ ನಂತರ, ಪ್ರತಿಭಟನಾ ನಿರತ ಸಂಸದರು ಸಂವಿದಾನ ಸದನದ ಮುಂದೆ ಸರತಿ ಸಾಲಿನಲ್ಲಿ ನಿಂತು ಮೋದಿ ಮತ್ತು ಅದಾನಿ ವಿರುದ್ಧ ಘೋಷಣೆಗಳನ್ನು ಕೂಗಿದರು. ಸಂಸತ್ತು ಗೇಟ್ ಮುಂದೆ ಪ್ರತಿಭಟನೆ ನಡೆಸದಂತೆ ಸಂಸದರಿಗೆ ಲೋಕಸಭೆ ಸೆಕ್ರೆಟರಿಯೇಟ್ ನಿನ್ನೆ ಸೂಚಿಸಿದ್ದರು. ಮೊನ್ನೆ ಮತ್ತು ನಿನ್ನೆ ಮಕರ ದ್ವಾರದ ಮೆಟ್ಟಿಲುಗಳ ಮೇಲೆ ವಿರೋಧ ಪಕ್ಷದ ಸಂಸದರು ಪ್ರತಿಭಟನೆ ನಡೆಸಿದ್ದರು.

ಅದಾನಿ ವಿರುದ್ಧದ ಪ್ರತಿಭಟನೆಯಿಂದ ಟಿಎಂಸಿ ದೂರ ಉಳಿದಿದೆ. ಯುಎಸ್ ನ್ಯಾಯಾಲಯದಲ್ಲಿ ಅದಾನಿ ಮತ್ತು ಇತರ ಕಂಪನಿಯ ಅಧಿಕಾರಿಗಳ ವಿರುದ್ಧ ದೋಷಾರೋಪಣೆ ಮಾಡಿದ ನಂತರ ಕಾಂಗ್ರೆಸ್ ಮತ್ತು ಇತರ ಕೆಲವು ವಿರೋಧ ಪಕ್ಷಗಳು ಜಂಟಿ ಸಂಸದೀಯ ಸಮಿತಿ (JPC) ತನಿಖೆಗೆ ಒತ್ತಾಯಿಸುತ್ತಿವೆ. ಗೌತಮ್ ಅದಾನಿಯವರನ್ನು ತಕ್ಷಣ ಬಂಧಿಸುವಂತೆ ರಾಹುಲ್ ಗಾಂಧಿ ಒತ್ತಾಯಿಸಿದ್ದಾರೆ. ಆದರೆ ಅದಾನಿ ಸಮೂಹ ಎಲ್ಲಾ ಆರೋಪಗಳನ್ನು ಆಧಾರರಹಿತ ಎಂದು ತಳ್ಳಿಹಾಕಿದೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು