LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಅಧಿಕಾರಿಗಳಿಗೆ ಸಿಎಂ ಎಚ್ಚರಿಕೆ ಕಾನೂನು ಬಾಹಿರ ಕಟ್ಟಡಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮಕ್ಕೆ ಸೂಚನೆ

ಬೆಂಗಳೂರು: ಕಾನೂನು ಬಾಹಿರ ಕಟ್ಟಡ ನಿರ್ಮಾಣ ಕಾಮಗಾರಿಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮ ಜರುಗಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.ಬೆಂಗಳೂರಿನ ಬಾಬುಸಾಬ್ ಪಾಳ್ಯ ದಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿತ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಿಯಮಬಾಹಿರವಾಗಿ, ಸೂಕ್ತ ಅನುಮತಿ ಪರವಾನಗಿ ಪಡೆಯದೆ ಕಟ್ಟಡ ನಿರ್ಮಾಣಕ್ಕೆ ಮುಂದಾಗುವವರ ವಿರುದ್ಧ ನಿರ್ಧಾಕ್ಷಿಣ್ಯ ಕ್ರಮ ಕೈಗೊಳ್ಳಬೇಕು.

ವಿಭಾಗೀಯ ಅಧಿಕಾರಿಗೂ ನೋಟಿಸ್ ನೀಡಿ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿರುವುದಾಗಿ ತಿಳಿಸಿದ್ದಾರೆ.ಅನಧಿಕೃತ ನಿರ್ಮಾಣ ನಿಲ್ಲಿಸುವಂತೆ ನೋಟಿಸ್ ನೀಡಿದ್ದರೂ ನಿರ್ಮಾಣ ಮುಂದುವರೆಸಿದ ಮಾಲೀಕರು, ಗುತ್ತಿಗೆದಾರ, ಎಂಜಿನಿಯರ್ ಎಲ್ಲರ ವಿರುದ್ಧವೂ ಕಠಿಣ ಕಾನೂನು ಕ್ರಮ ಆಗಬೇಕು ಎಂದು ಬಿಬಿಎಂಪಿ ಆಯುಕ್ತ ತುಷಾರ ಗಿರಿನಾಥ್ ಅವರಿಗೆ ಸಿಎಂ ಸೂಚನೆ ನೀಡಿದರು.

ಈಗಾಗಲೇ ಬಾಬುಸಾಬ್ ಪಾಳ್ಯದಲ್ಲಿ ಕುಸಿತಗೊಂಡಿರುವ ಕಟ್ಟಡ ದುರಂತ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಅವರನ್ನು ಸೇವೆಯಿಂದ ಅಮನತು ಮಾಡಲಾಗಿದೆ. ಕಾರ್ಯಪಾಲಕ ಇಂಜಿನಿಯರ್ ವಲಯ ಆಯುಕ್ತರಿಗೆ ನೋಟಿಸ್ ನೀಡಲು ಆದೇಶಿಸಲಾಗಿದೆ. ನಿಯಮ ಅನುಸರಿಸದೆ ಕರ್ತವ್ಯ ಲೋಪವೆಸಗುವ ಅಧಿಕಾರಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಲಾಗುವುದು ಎಂಬ ಎಚ್ಚರಿಕೆಯನ್ನು ನೀಡಿದರು.

ಬಾಬುಸಾಬ್ ಪಾಳ್ಯದಲ್ಲಿ ಸಂಭವಿಸಿದ ಕಟ್ಟಡ ದುರಂತದಲ್ಲಿ 8 ಮಂದಿ ಸಾವನ್ನಪ್ಪಿದ್ದಾರೆ. 8 ಮಂದಿಯನ್ನು ರಕ್ಷಿಸಲಾಗಿದೆ. 6 ಮಂದಿ ಗಾಯಗೊಂಡಿದ್ದಾರೆ. ಈ ಪೈಕಿ ಮೂವರ ಸ್ಥಿತಿ ಗಂಭೀರವಾಗಿದೆ. ಗಾಯಾಳುಗಳಿಗೆ ಚಿಕಿತ್ಸಾ ವೆಚ್ಚವನ್ನು ಸರ್ಕಾರವೇ ಭರಿಸಲಿದೆ. ಮೃತರ ಕುಟುಂಬಕ್ಕೆ ಬಿಬಿಎಂಪಿ ವತಿಯಿಂದ ಮೂರು ಲಕ್ಷ್ ಹಾಗೂ ಕಾರ್ಮಿಕ ಇಲಾಖೆ ವತಿಯಿಂದ 2 ಲಕ್ಷ ಸೇರಿದಂತೆ ಒಟ್ಟು 5 ಲಕ್ಷ ರೂಪಾಯಿ ಪರಿಹಾಗ ನೀಡಲಾಗುವುದು. ಸರ್ಕಾರ ನೀಡುವ ಪರಿಹಾರ ಸಾವಿಗೆ ಸಮವಲ್ಲವಾದರೂ ಮಾನವೀಯತೆ ದೃಷ್ಟಿಯಿಂದ ಬಡ ಕುಟುಂಬಗಳಿಗೆ ನೆರವು ನೀಡಲಾಗುತ್ತಿದೆ ಎಂದರು.

ಮುಂದಿನ ದಿನಗಳಲ್ಲಿ ವಿಪತ್ತು ನಿರ್ವಹಣೆಗಾಗಿ ಮೂರು ಕೋಟಿ ರೂಪಾಯಿ ಮೀಸಲಿರಿಸಲು ತೀರ್ಮಾನಿಸಲಾಗುವುದು ಎಂದರು.ಯಲಹಂಕ ಪ್ರದೇಶದಲ್ಲಿ ಈ ಹಿಂದೆ ಎಂದೂ ಕಾಣದಂತಹ 170 ಮಿಮೀನಷ್ಟು ಭಾರೀ ಪ್ರಮಾಣದ ಮಳೆ ಬಿದ್ದಿದೆ. ರಾಜಕಾಲುವೆಗಳ ಒತ್ತುವರಿ ತೆರವಿಗೆ ಕಟ್ಟುನಿಟ್ಟಿನ ಕ್ರಮ ಜರುಗಿಸುವುದಾಗಿ ಹೇಳಿದರು.ಈ ಸಂದರ್ಭದಲ್ಲಿ ಸಚಿವರಾದ ಬೈರತಿ ಸುರೇಶ್, ಎಂ.ಸಿ.ಸುಧಾಕರ್, ಶಾಸಕ ಬೈರತಿ ಬಸವರಾಜ್ ಹಾಗೂ ಬಿಬಿಎಂಪಿ ಆಯುಕ್ತರು ಮತ್ತು ಅಧಿಕಾರಿಗಳು ಉಪಸ್ಥಿತರಿದ್ದರು.ಘಟನಾ ಸ್ಥಳ ಪರಿಶೀಲನೆ ಬಳಿಕ ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಆರೋಗ್ಯ ವಿಚಾರಿಸಿದರು. ಅಗತ್ಯ ಇರುವ ಎಲ್ಲಾ ಆಧುನಿಕ ವ್ಯವಸ್ಥೆ ಬಳಿಕ ಕಾರ್ಮಿಕರಿಗೆ ಚಿಕಿತ್ಸೆ ನೀಡುವಂತೆ ಸೂಚನೆ ನೀಡಿದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು