LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Bangalore Urban

ಅನಧಿಕೃತ ಕಟ್ಟಡಗಳ ವಿರುದ್ಧ ಕ್ರಮ ಕೈಗೊಳ್ಳದ ಇಬ್ಬರು ಎಇಇಗಳಿಗೆ ನೋಟಿಸ್

ಬೆಂಗಳೂರು: ನಗರದ ಪೂರ್ವ ವಲಯದಲ್ಲಿ ಅನಧಿಕೃತ ಕಟ್ಟಡಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಪೂರ್ವ ವಲಯದಲ್ಲಿ ಬುಧವಾರ ನಡೆದ ವಲಯದ ಕಡೆಗೆ ಮುಖ್ಯ ಆಯುಕ್ತರ ನಡಿಗೆ ಕಾರ್ಯಕ್ರಮದಲ್ಲಿ ಸಾರ್ವಜನಿಕರಿಂದ ದೂರು ಸ್ವೀಕರಿಸಿದ ಅವರು, ಅನಧಿಕೃತ ಕಟ್ಟಡಗಳನ್ನು ನಿರ್ಮಿಸುತ್ತಿರುವವರಿಗೆ ನೋಟಿಸ್ ಜಾರಿಗೊಳಿಸಿ, ಅವುಗಳನ್ನು ಮತ್ತು ಕಟ್ಟಡಗಳ ಅಕ್ಕಪಕ್ಕದ ಭಾಗಗಳನ್ನು ಕಾಲಮಿತಿಯೊಳಗೆ ತೆರವುಗೊಳಿಸುವಂತೆ ನಿರ್ದೇಶಿಸಿದರು.

ಅನಧಿಕೃತ ಕಟ್ಟಡಗಳ ನಿರ್ಮಾಣ ತಡೆಯುವಲ್ಲಿ ಸಹಾಯಕ ಕಾರ್ಯಪಾಲಕ ಎಂಜಿನಿಯರ್ (ಎಇಇ) ವಿಫಲರಾಗಿದ್ದಾರೆ ಎಂದು ಹೆಬ್ಬಾಳ ಮತ್ತು ಪುಲಕೇಶಿನಗರ ವಿಧಾನಸಭಾ ಕ್ಷೇತ್ರಗಳ ನಿವಾಸಿಗಳ ದೂರಿನ ಹಿನ್ನೆಲೆಯಲ್ಲಿ ಹೆಬ್ಬಾಳ ಉಪವಿಭಾಗದ ಎಇಇ ಮಾಧವ್ ರಾವ್ ಮತ್ತು ಪುಲಕೇಶಿನಗರ ಉಪವಿಭಾಗದ ರವಿ ವಿರುದ್ಧ ಶೋಕಾಸ್ ನೋಟಿಸ್ ನೀಡುವಂತೆ ವಲಯ ಆಯುಕ್ತರಿಗೆ ತುಷಾರ್ ಗಿರಿನಾಥ್ ಸೂಚಿಸಿದರು.

ಸಿ.ವಿ.ರಾಮನ್ ನಗರದ ಕಸ್ತೂರಿ ನಗರದಲ್ಲಿ ಪಾದಚಾರಿ ಮಾರ್ಗ ಒತ್ತುವರಿ ಕುರಿತ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಪಾಲಿಕೆ ವತಿಯಿಂದ ಪಾದಚಾರಿ ಮಾರ್ಗಗಳ ಒತ್ತುವರಿ ತೆರವುಗೊಳಿಸಲಾಗುತ್ತಿದ್ದು, ಶಾಶ್ವತ ಕಟ್ಟಡಗಳು ಇಲ್ಲದಂತೆ ಸೂಕ್ತ ಕ್ರಮ ಕೈಗೊಳ್ಳುವಂತೆ ತಿಳಿಸಿದರು. ಹೊಸ ತಿಪ್ಪಸಂದ್ರದ ವೆಂಕಟೇಶ್ವರ ಕಾಲೋನಿ ರಸ್ತೆಯನ್ನು ಚರಂಡಿ ಕಾಮಗಾರಿಗಾಗಿ ಮಧ್ಯದಲ್ಲಿಯೇ ಅಗೆದು ಆರು ತಿಂಗಳು ಕಳೆದರೂ ದುರಸ್ತಿ ಮಾಡದಿರುವುದು ಏಕೆ ಎಂಬ ಪ್ರಶ್ನೆಗೆ ಅಗೆದ ರಸ್ತೆ ಭಾಗವನ್ನು ಕೂಡಲೇ ಮುಚ್ಚುವಂತೆ ಹೇಳಿದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು