LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Bangalore Urban

ಅನಧಿಕೃತ ಫ್ಲೆಕ್ಸ್-ಬ್ಯಾನರ್ ಹಾಕುವವರ ವಿರುದ್ಧ FIR ದಾಖಲಿಸಿ: ಅಧಿಕಾರಿಗಳಿಗೆ ತುಷಾರ್ ಗಿರಿನಾಥ್ ಸೂಚನೆ

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಅನಧಿಕೃತ ಜಾಹೀರಾತು ಅಳವಡಿಸಿರುವವರ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ಅಧಿಕಾರಿಗಳಿಗೆ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ಸೋಮವಾರ ಸೂಚನೆ ನೀಡಿದ್ದಾರೆ.

ಬಿಬಿಎಂಪಿ ಪ್ರಧಾನ ಕಚೇರಿಯಲ್ಲಿ ಇಂದು ನಡೆದ ಸಭೆಯಲ್ಲಿ ಮಾತನಾಡಿದ ಅವರು, ಪಾಲಿಕೆಯ 8 ವಲಯಗಳಲ್ಲಿ ಅನಧಿಕೃತ ಜಾಹೀರಾತುಗಳನ್ನು ತೆಗೆದುಹಾಕುವ ಅಗತ್ಯವನ್ನು ಒತ್ತಿ ಹೇಳಿದರು. ಅಲ್ಲದೆ, ಪದೇ ಪದೇ ನಿಯಮ ಉಲ್ಲಂಘಿಸುವವರ ವಿರುದ್ಧ ಕಠಿಣ ಕ್ರಮಗಳನ್ನು ತೆಗೆದುಕೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಆಸ್ಟಿನ್ ಟೌನ್‌ನ ನಂದನ್ ಮೈದಾನ, ಹಲಸೂರು, ಅಶೋಕ್ ನಗರ ಮತ್ತು ಶಾಂತಿ ನಗರದಾದ್ಯಂತ ಬಿಡಿಎ ಅಧ್ಯಕ್ಷ ಮತ್ತು ಶಾಸಕ ಎನ್‌ಎ ಹ್ಯಾರಿಸ್ ಅವರ ಹುಟ್ಟುಹಬ್ಬದ ಆಚರಣೆ ಕುರಿತು ಅನಧಿಕೃತ ಪೋಸ್ಟರ್‌ಗಳು ಮತ್ತು ಬ್ಯಾನರ್‌ಗಳು ಕಂಡು ಬಂದಿತ್ತು.

ಇದನ್ನು ಗಂಭೀರವಾಗಿ ಪರಿಗಣಿಸಿದ ಆಯುಕ್ತರು, ಪಾಲಿಕೆ ವ್ಯಾಪ್ತಿಯಲ್ಲಿ ಎಲ್ಲಿಯೂ ಅನಧಿಕೃತ ಜಾಹೀರಾತು ಇರದಂತೆ ನೋಡಿಕೊಳ್ಳಬೇಕು. ವಲಯಗಳಲ್ಲಿ ಜಾಹೀರಾತುಗಳನ್ನು ತೆರವುಗೊಳಿಸಿ, ಅದನ್ನು ಅಳವಡಿಸಿರುವವರ ವಿರುದ್ಧ ಎಫ್‌ಐಆರ್ ದಾಖಲಿಸಬೇಕು. ಮತ್ತೆ ಯಾವುದೇ ರೀತಿಯ ಅನಧಿಕೃತ ಜಾಹೀರಾತುಗಳನ್ನು ಅಳವಡಿಸದಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಸೂಚನೆ ನೀಡಿದರು.

ಆಸ್ತಿ ವಹಿವಾಟುಗಳಿಗೆ ಇ–ಖಾತಾ ಕಡ್ಡಾಯಗೊಳಿಸಿರುವುದರಿಂದ, ಭದ್ರತೆ, ಪುನರ್‌ನಿರ್ಮಾಣ, ಭದ್ರತೆ ಬಡ್ಡಿ ಜಾರಿ ಕಾಯ್ದೆ 2002 (ಸರ್ಫೇಸಿ ಕಾಯ್ದೆ) ನಿಬಂಧನೆಗಳ ಅಡಿ ಬ್ಯಾಂಕ್‌ಗಳು, ಹಣಕಾಸು ಸಂಸ್ಥೆಗಳು ಆಸ್ತಿಗಳ ಮಾರಾಟ ಪ್ರಮಾಣ ಪತ್ರ ನೋಂದಾಯಿಸಲು ಅನುವಾಗುವಂತೆ, ಬಿಬಿಎಂಪಿ ಇ–ಖಾತಾ ವಿಧಾನವನ್ನು ರಚಿಸಬೇಕು. ಒಂದು ಸ್ವತ್ತನ್ನು ಅಡಮಾನವಿಟ್ಟು ಪಡೆದ ಸಾಲವನ್ನು ಮರು ಪಾವತಿ ಮಾಡಲು ವಿಫಲವಾದಾಗ, ಬ್ಯಾಂಕ್‌ಗಳು ಮಾರಾಟ ಪ್ರಮಾಣದ ಮೂಲಕ ಮಾರಾಟವನ್ನು ಕಾರ್ಯಗತಗೊಳಿಸುತ್ತವೆ. ಎಲ್ಲ ನೋಂದಣಿಗೂ ಇ–ಖಾತಾ ಕಡ್ಡಾಯವಾಗಿರುವುದರಿಂದ ಕೆಲವು ಬಾರಿ ಖಾತಾದಾರ ಸಹಕರಿಸದಿರಬಹುದು. ಆದ್ದರಿಂದ ಹಣಕಾಸು ಸಂಸ್ಥೆಗಳಿಗೆ ಅನುಕೂಲವಾಗಲು ಇ–ಖಾತಾ ಪ್ರಕ್ರಿಯೆಯಲ್ಲಿ ಅವರಿಗೆ ಅವಕಾಶ ಮಾಡಿಕೊಡಲಾಗಿದೆ ಎಂದು ಮಾಹಿತಿ ನೀಡಿದರು.

ಇದಲ್ಲದೆ, ಬಿಬಿಎಂಪಿ ಮಿತಿಯಲ್ಲಿ ಆಸ್ತಿ ತೆರಿಗೆ ತಪ್ಪಿಸುವ ಮಾಲೀಕರು. "ಆಸ್ತಿ ತೆರಿಗೆ ವ್ಯಾಪ್ತಿಯಿಂದ ಹೊರಗಿರುವ ಆಸ್ತಿಗಳ ಸಂಖ್ಯೆಯನ್ನು ಗುರುತಿಸಿ, ಅವುಗಳನ್ನು ತೆರಿಗೆ ವ್ಯಾಪ್ತಿಗೆ ತರಲಾಗಿದೆಯೆ ಎಂಬುದನ್ನು ಖಚಿತಪಡಿಸಿಕೊಳ್ಳುವಂತೆಯೂ ಸೂಚಿಸಿದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು