LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Entertainment News

ಅಪ್ಪನ ನೆನಪಿನ ಸಂಭ್ರಮ...

ಮೈಸೂರಿನಲ್ಲಿ ಫಾದರ್ ಬಗ್ಗೆ ಮೆಚ್ಚುಗೆಕನ್ನಡದ ಪ್ರತಿಷ್ಠಿತ ಆರ್ ಸಿ ಸ್ಟುಡಿಯೋಸ್ ನಿರ್ಮಾಣದ ಫಾದರ್ ಚಿತ್ರೀಕರಣ ಅದ್ಧೂರಿಯಾಗಿ ಸಾಂಸ್ಕೃತಿಕ ನಗರಿ ಮೈಸೂರಲ್ಲಿ ಸಾಗುತ್ತಿದೆ.ಫಾದರ್ ಸಿನಿಮಾದ ಶೂಟಿಂಗ್ ಸೆಟ್ ಗೆ ಸಿನಿಮಾ ಪತ್ರಕರ್ತರು ಭೇಟಿ ನೀಡಿದ ವೇಳೆ ಚಿತ್ರತಂಡ ಮಾತಿಗಿಳಿಯಿತು. ಪ್ರಕಾಶ್ ರೈ ಮತ್ತು ಡಾರ್ಲಿಂಗ್ ಕೃಷ್ಣ ತಂದೆ-ಮಗನಾಗಿ ಅಭಿನಯಿಸುತ್ತಿರುವ ಫಾದರ್ ಚಿತ್ರದ ಚಿತ್ರೀಕರಣ ಮೈಸೂರಿನ ಸುಮಾರು ನೂರು ವರ್ಷಗಳ ಹಳೆಯ ಮನೆಯಲ್ಲಿ ಕಲರ್ ಫುಲ್ ಆಗಿ ನಡೆಯುತ್ತಿದೆ. ಈ ವೇಳೆ ಸಿನಿಮಾ ತಂಡ ಹೇಳಿಕೊಂಡಿದ್ದು ಹೀಗೆ.

ನಟ ಡಾರ್ಲಿಂಗ್ ಕೃಷ್ಣ ಮಾತನಾಡಿ, ನಾನು ನಿಜಕ್ಕೂ ಲಕ್ಕಿ ಮ್ಯಾನ್. ಯಾಕೆಂದರೆ ಒಳ್ಳೆಯ ಕಥೆಗಳೇ ನನ್ನ ಪಾಲಾಗುತ್ತಿವೆ. ನಾನು ಈ ಕಥೆ ಕೇಳಿದಾಗ, ಮೊದಲು ಇಷ್ಟಪಟ್ಟಿದ್ದು ಪತ್ನಿ ಮಿಲನಾ. ಕಥೆ ಚೆನ್ನಾಗಿದೆ. ನೀವು ಮಾಡಲೇಬೇಕೆಂದು ಹೇಳಿದರು. ಇನ್ನು, ಭಾರತೀಯ ಚಿತ್ರರಂಗ ಕಂಡ ಅದ್ಭುತ ನಟ ಪ್ರಕಾಶ್ ರೈ ಅವರ ಜೊತೆ ನಟಿಸುವ ಆಸೆಯಿತ್ತು. ಅವರ ಜೊತೆ ಅಭಿನಯಿಸುವಾಗ ಭಯ ಆಗುತ್ತಿತ್ತು. ಎಷ್ಟೋ ಬಾರಿ ಅವರು ಅಭಿನಯಿಸುವುದನ್ನು ನೋಡುತ್ತಾ, ಪ್ರತಿಕ್ರಿಯೆ ಕೊಡುವುದನ್ನೇ ಮರೆಯುತ್ತಿದ್ದೆ. ಫಾದರ್ ಜನರ ಮನಸಿನಲ್ಲಿ ಉಳಿಯುವಂತಹ ಚಿತ್ರವಾಗುತ್ತದೆ' ಎಂದರು ಡಾರ್ಲಿಂಗ್ ಕೃಷ್ಣ.

ಸಿನಿಮಾದ ಆಕರ್ಷಣೆ ಪ್ರಕಾಶ್ ರೈ ಮಾತನಾಡಿ, ಚಂದ್ರು ಜೊತೆಗೆ ನಾನು ಮೊದಲು ಕಬ್ಜ ಚಿತ್ರ ಮಾಡಬೇಕಿತ್ತು. ಆದರೆ, ಕಾರಣಾಂತರಗಳಿಂದ ಅದು ಸಾಧ್ಯವಾಗಲಿಲ್ಲ. ಈಗ "ಫಾದರ್" ಚಿತ್ರದಲ್ಲಿ ಅಭಿನಯಿಸುತ್ತಿದ್ದೇನೆ. ಇದೊಂದು ಮನಸ್ಸಿಗೆ ಹತ್ತಿರವಾಗುವ ಕಥೆ. ತಂದೆ-ಮಗನ ಪ್ರೀತಿಯ ಜೊತೆಗೆ, ಇವತ್ತಿನ ತಂದೆ ಮಕ್ಕಳ ಸಂಬಂಧದ ಬಗ್ಗೆ ಹೇಳಲಾಗಿದೆ.

ಕಥೆ ಕೇಳಿದಾಗ ನನಗೆ ಇದು ಇಂದಿಗೆ ಮುಖ್ಯವಾಗಿ ಬೇಕಾಗಿರುವ ಸಿನಿಮಾ ಎಂದೆನಿಸಿತು. ಇದೊಂದು ಕಾಡುವಂತಹ ಚಿತ್ರ. ಆರ್ ಚಂದ್ರು ಆರ್ ಸಿ ಸ್ಟುಡಿಯೋಸ್ ಮೂಲಕ ಐದು ಚಿತ್ರಗಳನ್ನು ನಿರ್ಮಿಸುತ್ತಿರುವುದು ಖುಷಿಯ ವಿಚಾರ. ನಾನು ಕೂಡ ನಿರ್ಮಾಪಕನಾಗಿ ಹಲವು ಚಿತ್ರಗಳನ್ನು ನಿರ್ಮಿಸಿದ್ದೇನೆ. ಈ ಚಿತ್ರದಲ್ಲಿ ಅಭಿನಯಿಸುತ್ತಿರುವುದು ಹಾಗೂ ನಾನು ಬಹಳ ಇಷ್ಟೊಡುವ ಮೈಸೂರಿನಲ್ಲಿ ಚಿತ್ರೀಕರಣವಾಗುತ್ತಿರುವುದು ಖುಷಿಯಾಗಿದೆ. ಇಂತಹ ನಿರ್ಮಾಣ ಸಂಸ್ಥೆಗಳು ಕನ್ನಡಕ್ಕೆ ಬೇಕು. ಕನ್ನಡ ಸಿನಿಮಾ ರಂಗಕ್ಕೆ ಚಂದ್ರು ಅವರ ಕೊಡುಗೆ ಇದೆ. ಇಂತಹವರು ಇಂಡಸ್ಟ್ರಿಗೆ ಬೇಕು ಎಂಬುದನ್ನು ಒತ್ತಿ ಹೇಳಿದರು ಪ್ರಕಾಶ್ ರೈ.

ಸದಾ ಸಿನಿಮಾ ಧ್ಯಾನಿಯಾಗಿರುವ ಆರ್. ಚಂದ್ರ, ತಮ್ಮ ಫಾದರ್ ಬಗ್ಗೆ ಹೇಳಿದ್ದು ಹೀಗೆ. ' ನನ್ನ ಆರ್ ಸಿ ಸ್ಟುಡಿಯೋಸ್ ಸಂಸ್ಥೆ ಮೂಲಕ ಐದು ಬಿಗ್ ಬಜೆಟ್ ಸಿನಿಮಾ ನಿರ್ಮಾಣ ಮಾಡುತ್ತಿದ್ದೇನೆ. ಇದು ಸುಲಭವಲ್ಲ. ಸಿನಿಮಾ ಪ್ರೀತಿಯೇ ಇದಕ್ಕೆ ಕಾರಣ. ಫಾದರ್ ಒಂದು ಅದ್ಭುತ ಕಥೆ. ಪ್ರತಿತೊಬ್ಬ ತಂದೆ ಮಗನ ಬಾಂಧವ್ಯಬಿಲ್ಲಿ ಹೇಳಲಾಗುತ್ತಿದೆ. ಇಂಥದ್ದೊಂದು ಕಂಟೆಂಟ್ ಸಿನಿಮಾ ಮಾಡೋಕೆ ಹೆಮ್ಮೆ ಎನಿಸುತ್ತಿದೆ. ಆರ್.ಸಿ ಸ್ಟುಡಿಯೋಸ್ ಬ್ಯಾನರ್ ನಿರ್ಮಾಣದ ಮೊದಲ ಸಿನಿಮಾ ಅನ್ನೋದು ಹೆಗ್ಗಳಿಕೆ. ಈ ಚಿತ್ರಕ್ಕೆ ಗ್ರಾಂಡ್ ಫಾದರ್ ಅಂದರೆ ಅದು ಪ್ರಕಾಶ್ ರಾಜ್ ಎನ್ನಬಹುದು.

ಕೃಷ್ಣ ಅವರ ಜೊತೆಗೆ ಈ ಮೊದಲೇ ಸಿನಿಮಾ ಮಾಡಬೇಕಿತ್ತು. ಫಾದರ್ ಚ ಎಲ್ಲರಿಗೂ ಇಷ್ಟವಾಗುತ್ತದೆ ಎಂಬ ನಂಬಿಕೆ ಇದೆ. ತಂದೆಯ ಪಾತ್ರದ ಬಗ್ಗೆ ಕೇಳುತ್ತಿದ್ದಂತೆಯೇ, ಈ ಪಾತ್ರವನ್ನು ಪ್ರಕಾಶ್ ರೈ ಮಾಡಿದರೆ ಚೆನ್ನಾಗಿರುತ್ತದೆ ಎಂದೆನಿಸಿತು. ಅವರು ಈ ಚಿತ್ರದಲ್ಲಿ ಅಭಿನಯಿಸಲು ಪ್ರೀತಿಯಿಂದ ಒಪ್ಪಿಕೊಂಡಿದ್ದಾರೆ. ಚಿತ್ರವನ್ನು ಒಂದೇ ಹಂತದಲ್ಲಿ ಮೈಸೂರು, ವಾರಣಾಸಿ, ಮಂಗಳೂರಿನಲ್ಲಿ ಚಿತ್ರೀಕರಿಸುವ ಯೋಜನೆಇದೆ ಎಂದರು ಆರ್.ಚಂದ್ರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು