LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Entertainment News

"ಅಪ್ಪು ಕಪ್ ಸೀಸನ್ 2" ಅಪ್ಪು ಸಂಭ್ರಮಕ್ಕೆ ಚಾಲನೆ

ಅಶ್ವಿನಿ ಪುನೀತ್ ರಾಜಕುಮಾರ್ ಹಾಗೂ ಶ್ರೀಮುರಳಿ ಅವರಿಂದ ಅಪ್ಪು ಬೆಳ್ಳಿ ಟ್ರೋಫಿ ಅನಾವರಣಓರಾಯನ್ ಮಾಲ್ ನ ಹೊರಾಂಗಣದಲ್ಲಿ ತಣ್ಣನೆ ಬೀಸುತ್ತಿದ್ದ ಗಾಳಿ. ಪಕ್ಕದಲ್ಲೊಂದು ಕೆರೆ. ಆ ಸುಂದರ ಪರಿಸರದಲ್ಲೊಂದು ವರ್ಣರಂಜಿತ ವೇದಿಕೆ. ಆ ವೇದಿಕೆಯಲ್ಲಿ ಚೇತನ್ ಸೂರ್ಯ ಅವರ STELLER STUDIO & EVENT MANAGEMENT ಸಂಸ್ಥೆ, PRK Audio ಸಂಸ್ಥೆಯ ಸಹಯೋಗದೊಂದಿಗೆ ಆಯೋಜಿಸಿರುವ " ಅಪ್ಪು ಕಪ್ ಸೀಸನ್ 2"(ಶಟಲ್ ಬ್ಯಾಡ್ಮಿಂಟನ್ ಟೂರ್ನಿ) ಅಪ್ಪು ಸಂಭ್ರಮ ಸಮಾರಂಭ ಅದ್ದೂರಿಯಾಗಿ ನಡೆಯಿತು.

ಸಾಯಿ ಗೋಲ್ಡ್ ಪ್ಯಾಲೆಸ್ ನ ಶರವಣ ಅವರು ನಿರ್ಮಿಸಿರುವ ಐದು ಕೆಜಿ ತೂಕದ ಅಪ್ಪು ಭಾವಚಿತ್ರವುಳ್ಳ ಬೆಳ್ಳಿ ಕಪ್ ಅಶ್ವಿನಿ ಪುನೀತ್ ರಾಜ್‍ಕುಮಾರ್ ಹಾಗೂ ಶ್ರೀಮುರಳಿ ಅವರಿಂದ ಅನಾವರಣವಾಯಿತು. ರಾಮನಗರ ಜಿಲ್ಲಾಧಿಕಾರಿ ಯಶವಂತ್ ವಿ ಗುರುಕರ್, ಸಾ.ರಾ.ಗೋವಿಂದು ಮುಂತಾದವರು ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು.

ಟ್ರೋಫಿ ಅನಾವರಣಗೊಳಿಸಿ ಮಾತನಾಡಿದ ಅಶ್ವಿನಿ ಪುನೀತ್ ರಾಜಕುಮಾರ್, ಶೆಟಲ್ ಆಟ, ಅಪ್ಪು ಅವರ ಮೆಚ್ಚಿನ ಆಟ. ಕಳೆದವರ್ಷದಿಂದ ಅಪ್ಪು ಕಪ್ ಟೂರ್ನಿಯನ್ನು ಚೇತನ್ ಅವರು ಚೆನ್ನಾಗಿ ಆಯೋಜಿಸಿಕೊಂಡು ಬರುತ್ತಿದ್ದಾರೆ. ಅವರಿಗೆ ಹಾಗೂ ಭಾಗವಹಿಸಿರುವ ಎಲ್ಲರಿಗೂ ಒಳ್ಳೆಯದಾಗಲಿ ಎಂದರು. 'ಯಾವುದಾದರೂ ಆಟದ ನೆಪದಲ್ಲಿ ಕಲಾವಿದರನ್ನು ಒಟ್ಟಾಗಿ ಸೇರಿಸುವ ಆಸೆ ಅಪ್ಪು ಅವರಿಗಿತ್ತು. ಅದು ಹೊರದೇಶದಲ್ಲಿ ಅದನ್ನು ನಡೆಸಬೇಕೆಂಬುದು ಅವರ ಯೋಚನೆಯಾಗಿತ್ತು. ಸದಾ ಒಬ್ಬರಿಗೆ ಒಳೆಯದನ್ನೇ ಬಯಸುವ ಹೃದಯ ಅವರಿಗಿತ್ತು. ಅಂತಹ ಪುನೀತ್ ರಾಜಕುಮಾರ್ ಅವರ ನೆನಪಿನಲ್ಲಿ ನಡೆಯುತ್ತಿರುವ "ಅಪ್ಪು ಕಪ್ ಸೀಸನ್ 2" ಯಶಸ್ವಿಯಾಗಲಿ' ಎಂದು ಶ್ರೀಮುರಳಿ ಹಾರೈಸಿದರು.

'ನಾಡು ಕಂಡ ಶ್ರೇಷ್ಠ ನಟ ಪುನೀತ್ ರಾಜಕುಮಾರ್ ಅವರ ಹೆಸರಿನಲ್ಲಿ ನಡೆಯುತ್ತಿರುವ ಈ "ಅಪ್ಪು ಕಪ್" ಶೆಟಲ್ ಬ್ಯಾಡ್ಮಿಂಟನ್ ಟೂರ್ನಿಯ ಬಗ್ಗೆ ಚೇತನ್ ಸೂರ್ಯ ಅವರು ಹೇಳಿದಾಗ ಬಹಳ ಸಂತೋಷವಾಯಿತು. ನಾನು ಮೊದಲೇ ತಿಳಿಸಿದಂತೆ ಈ ಟೂರ್ನಿಯ ಮೊದಲ ವಿಜೇತರಿಗೆ ನೂರು ಗ್ರಾಮ್ ಬಂಗಾರ, ದ್ವಿತೀಯ ವಿಜೇತರಿಗೆ ಐವತ್ತು ಗ್ರಾಮ್ ಬಂಗಾರ ಹಾಗೂ ಮೂರನೇ ವಿಜೇತರಿಗೆ ಇಪ್ಪತ್ತೈದು ಗ್ರಾಮ್ ಬಂಗಾರವನ್ನು ಬಹುಮಾನ ನೀಡುವುದಾಗಿ ಸಾಯಿ ಗೋಲ್ಡ್ ಪ್ಯಾಲೆಸ್ ನ ಶರವಣ ತಿಳಿಸಿದರು.

ನಾವು ಕಳೆದ ವರ್ಷದಿಂದ ಆಯೋಜಿಸುತ್ತಿರುವ "ಅಪ್ಪು ಕಪ್" ಗೆ ಅಶ್ವಿನಿ ಪುನೀತ್ ರಾಜ್‍ಕುಮಾರ್ ಅವರು ಸಹಕಾರ ನೀಡಿರುವುದು ಬಹಳ ಖುಷಿಯಾಗಿದೆ. ಶ್ರೀಮುರಳಿ ಅವರು ಹೇಳಿದಂತೆ ಮುಂದಿನ ವರ್ಷ ಹೊರದೇಶದಲ್ಲಿ ಈ ಟೂರ್ನಿಯ ಸೆಮಿಫೈನಲ್ ಹಾಗೂ ಫೈನಲ್ ಆಯೋಜಿಸಲು ಪ್ರಯತ್ನ ಪಡುತ್ತೇನೆ. ಈ ಬಾರಿ ಟೂರ್ನಿಯಲ್ಲಿ ಹತ್ತು ತಂಡಗಳಿದೆ. ಹತ್ತು ತಂಡಗಳ ಮಾಲೀಕರಿಗೆ, ಸಾಯಿ ಗೋಲ್ಡ್ ಪ್ಯಾಲೆಸ್ ನ ಶರವಣ ಅವರಿಗೆ ಹಾಗೂ ಎಲ್ಲಾ ತಂಡಗಳ ಮಾಲೀಕರಿಗೆ, ಆಟಗಾರರಿಗೆ ಧನ್ಯವಾದ ತಿಳಿಸಿದ "ಅಪ್ಪು ಕಪ್" ನ ರುವಾರಿ ಚೇತನ್ ಸೂರ್ಯ, ಜುಲೈ 26, 27, 28 ಬೆಂಗಳೂರಿನಲ್ಲಿ ಅಶ್ವಿನಿ ಪುನೀತ್ ರಾಜಕುಮಾರ್ ಅವರ ಉಪಸ್ಥಿತಿಯಲ್ಲಿ ನಡೆಯಲಿದೆ ಎಂದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು