LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಅಪ್ಪ ನಿಧನರಾದಾಗ ಕಾಂಗ್ರೆಸ್ ಸಂತಾಪ ಸಭೆಯನ್ನೂ ಕರೆಯಲಿಲ್ಲ; ಪ್ರಣಬ್ ಮುಖರ್ಜಿ ಮಗಳ ಬೇಸರ

ನವದೆಹಲಿ: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಗುರುವಾರ ರಾತ್ರಿ ನವದೆಹಲಿಯ ಏಮ್ಸ್ ನಲ್ಲಿ ಕೊನೆಯುಸಿರೆಳೆದಿದ್ದಾರೆ. ಅವರ ಅಂತ್ಯಕ್ರಿಯೆ ನೆರವೇರಿಸಲು ಮತ್ತು ಸ್ಮಾರಕ ನಿರ್ಮಿಸಲು ಕಾಂಗ್ರೆಸ್ ಬಿಜೆಪಿ ಸರ್ಕಾರಕ್ಕೆ ಮನವಿ ಮಾಡಿತ್ತು. ಮನಮೋಹನ್ ಸಿಂಗ್ ಅವರ ಅಂತ್ಯಕ್ರಿಯೆ ನಡೆಯುವ ಸ್ಥಳದಲ್ಲೇ ಸ್ಮಾರಕ ನಿರ್ಮಿಸಲು ಅವಕಾಶ ನೀಡಬೇಕೆಂದು ಮಲ್ಲಿಕಾರ್ಜುನ ಖರ್ಗೆ ಮನವಿ ಮಾಡಿದ್ದರು. ಆದರೆ, ಸ್ಮಾರಕಕ್ಕೆ ಬೇರೆ ಸ್ಥಳ ನಿಗದಿಪಡಿಸಲಾಗುವುದು ಎಂದು ಕೇಂದ್ರ ಸರ್ಕಾರ ಹೇಳಿತ್ತು. ಇದಕ್ಕೆ ಕಾಂಗ್ರೆಸ್ ಆಕ್ಷೇಪ ವ್ಯಕ್ತಪಡಿಸಿತ್ತು. ಆದರೆ, ಇದೀಗ ಕಾಂಗ್ರೆಸ್​ ತನ್ನ ಪಕ್ಷದ ನಾಯಕರ ವಿಚಾರದಲ್ಲಿ ತಳೆಯುವ ಧೋರಣೆಯ ಬಗ್ಗೆ ಸ್ವಪಕ್ಷೀಯರಿಂದಲೇ ಆಕ್ಷೇಪ ವ್ಯಕ್ತವಾಗಿದೆ. ಕಾಂಗ್ರೆಸ್ ನಾಯಕ ಹಾಗೂ ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ನಿಧನರಾದಾಗ ಕಾಂಗ್ರೆಸ್ ಸಿಡಬ್ಲುಸಿ ಸಭೆ ಕರೆದು, ಸಂತಾಪ ಸೂಚಕ ಸಭೆಯನ್ನು ನಡೆಸುವ ಔದಾರ್ಯವನ್ನೂ ತೋರಲಿಲ್ಲ ಎಂದು ಪ್ರಣಬ್ ಮುಖರ್ಜಿಯ ಮಗಳು ಶರ್ಮಿಷ್ಠಾ ಆರೋಪಿಸಿದ್ದಾರೆ.

ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರ ಪುತ್ರಿ ಶರ್ಮಿಷ್ಠಾ ಮುಖರ್ಜಿ ಅವರು ತಮ್ಮ ತಂದೆಯ ನಿಧನದ ನಂತರ ಕಾಂಗ್ರೆಸ್ ಕಾರ್ಯಕಾರಿ ಸಮಿತಿ (ಸಿಡಬ್ಲ್ಯುಸಿ) ಸಭೆಯನ್ನು ಕರೆಯಲು ಕಾಂಗ್ರೆಸ್ ವಿಫಲವಾಗಿತ್ತು ಎಂದು ಟೀಕಿಸಿದ್ದಾರೆ. ತನ್ನ ತಂದೆ ಆಗಸ್ಟ್ 2020ರಲ್ಲಿ ನಿಧನರಾದಾಗ ಕಾಂಗ್ರೆಸ್ ನಾಯಕರು ಕಾಂಗ್ರೆಸ್ ಕಾರ್ಯಕಾರಿ ಸಮಿತಿಯ (CWC) ಸಂತಾಪ ಸೂಚಕ ಸಭೆಯನ್ನು ಕೂಡ ಕರೆಯಲಿಲ್ಲ ಎಂದು ಅವರು ಹೇಳಿದ್ದಾರೆ. ಆ ಸಮಯದಲ್ಲಿ ಕಾಂಗ್ರೆಸ್ ನಾಯಕರು ಈ ವಿಷಯದಲ್ಲಿ ತನ್ನನ್ನು ದಾರಿ ತಪ್ಪಿಸಿದ್ದರು ಎಂದು ಕೂಡ ಅವರು ಆರೋಪಿಸಿದ್ದಾರೆ.

“ಬಾಬಾ ನಿಧನರಾದಾಗ ಕಾಂಗ್ರೆಸ್ ಸಿಡಬ್ಲ್ಯೂಸಿ ಕರೆದು ಸಂತಾಪ ಸೂಚಕ ಸಭೆ ನಡೆಸಲಿಲ್ಲ. ಈ ಬಗ್ಗೆ ಹಿರಿಯ ನಾಯಕರೊಬ್ಬರನ್ನು ಕೇಳಿದಾಗ ರಾಷ್ಟ್ರಪತಿಗಳಿಗೆ ಆ ರೀತಿ ಮಾಡುವುದಿಲ್ಲ ಎಂದು ಹೇಳಿದ್ದರು. ಆದರೆ, ಕೆಆರ್ ನಾರಾಯಣನ್ ಅವರ ನಿಧನದ ನಂತರ ಸಿಡಬ್ಲ್ಯೂಸಿ ಕರೆಯಲಾಗಿತ್ತು ಮತ್ತು ಸಂತಾಪ ಸೂಚಿಸಲಾಗಿತ್ತು ಎಂದು ನನ್ನ ತಂದೆಯ ಡೈರಿಗಳಿಂದ ನನಗೆ ನಂತರ ತಿಳಿಯಿತು. ನನ್ನ ತಂದೆಯವರೇ ಸಂತಾಪ ಸಭೆಯನ್ನು ನಡೆಸಿದ್ದರು” ಎಂದು ಅವರು ಬರೆದಿದ್ದಾರೆ.

ಭಾರತೀಯ ರಾಷ್ಟ್ರಪತಿಗಳಿಗೆ ಸಂತಾಪ ಸೂಚಿಸುವ ಸಭೆಗಳನ್ನು ನಡೆಸುವುದಿಲ್ಲ ಎಂದು ಹಿರಿಯ ಕಾಂಗ್ರೆಸ್ ನಾಯಕರೊಬ್ಬರು ಹೇಳಿದ್ದನ್ನು ಅವರು ನೆನಪಿಸಿಕೊಂಡಿದ್ದಾರೆ. ಈ ಹೇಳಿಕೆಯನ್ನು ಅವರು ಅತ್ಯಂತ ಕೀಳು ಮಟ್ಟದ ಧೋರಣೆ ಎಂದು ಅವರು ಹೇಳಿದ್ದಾರೆ. ಆದರೆ, ತನ್ನ ತಂದೆಗೆ ಆದಂತೆ ಬೇರೆ ನಾಯಕರಿಗೂ ಆಗಬಾರದು ಎಂದಿರುವ ಅವರು 92ನೇ ವಯಸ್ಸಿನಲ್ಲಿ ನಿಧನರಾದ ಮನಮೋಹನ್ ಸಿಂಗ್ ಅವರ ಸ್ಮಾರಕಕ್ಕಾಗಿ ಕೇಂದ್ರಕ್ಕೆ ಕಾಂಗ್ರೆಸ್ ಮಾಡಿದ ಮನವಿಯನ್ನು ಬೆಂಬಲಿಸಿದ್ದಾರೆ.

ನನ್ನ ತಂದೆ ಪ್ರಣಬ್ ಮುಖರ್ಜಿ ಅವರು ಡಾ. ಮನಮೋಹನ್ ಸಿಂಗ್ ಅವರಿಗೆ ಭಾರತ ರತ್ನವನ್ನು ನೀಡಲು ಬಯಸಿದ್ದರು. ಆದರೆ ಅದು ಸಾಧ್ಯವಾಗಲಿಲ್ಲ ಎಂದಿರುವ ಶರ್ಮಿಷ್ಠಾ ಮನಮೋಹನ್ ಸಿಂಗ್ ಅವರಿಗೆ ಸ್ಮಾರಕ ನಿರ್ಮಾಣ ಮಾಡಬೇಕೆಂಬ ಬೇಡಿಕೆಯನ್ನು ಬೆಂಬಲಿಸಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು