LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Bangalore Urban

ಅಪ್ರಾಪ್ತೆಯೊಂದಿಗೆ ಲೈಂಗಿಕ ಸಂಬಂಧ: ಬಾಲಕಿಗೆ ಮಗು ಜನಿಸಿದ ನಂತರ ದೂರು ಕೊಟ್ಟ ತಂದೆ!

ಬೆಂಗಳೂರು: ಮದುವೆಯಾಗುವುದಾಗಿ ನಂಬಿಸಿ ಅಪ್ರಾಪ್ತ ಬಾಲಕಿಯೊಂದಿಗೆ ಲೈಂಗಿಕ ಸಂಬಂಧ ಹೊಂದಿದ ಆರೋಪದ ಮೇಲೆ ಬೆಂಗಳೂರು ವಿಮಾನ ನಿಲ್ದಾಣದ ಡ್ಯೂಟಿ ಫ್ರೀ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ 20 ವರ್ಷದ ಎಲ್ ವಿಜಯ್ ಕುಮಾರ್ ವಿರುದ್ಧ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.

ವಿಜಯ್ ಕುಮಾರ್ ಮದುವೆಯಾಗುವುದಾಗಿ ಭರವಸೆ ನೀಡಿ ಅಪ್ರಾಪ್ತೆಯೊಂದಿಗೆ ಲೈಂಗಿಕ ಸಂಬಂಧ ಹೊಂದಿದ್ದರು. ಡಿಸೆಂಬರ್ 10 ರಂದು ಬಾಲಕಿ ಗಂಡು ಮಗುವಿಗೆ ಜನ್ಮ ನೀಡಿದ ನಂತರ ಪ್ರಕರಣ ಬೆಳಕಿಗೆ ಬಂದಿದ್ದು, ಆಕೆಯ ತಂದೆ ಕೆಂಪೇಗೌಡ ವಿಮಾನ ನಿಲ್ದಾಣದ ಪೊಲೀಸರಿಗೆ ದೂರು ನೀಡಿದ್ದಾರೆ.

ಎಫ್‌ಐಆರ್ ಪ್ರಕಾರ, ಬಾಲಕಿ ಮನೆಯಲ್ಲಿ ಒಬ್ಬಳೇ ಇದ್ದಾಗ ವಿಜಯ್ ಕುಮಾರ್ ಲೈಂಗಿಕವಾಗಿ ಬಳಸಿಕೊಂಡಿದ್ದಾನೆ. ಮೂರು ಹೆಣ್ಣು ಮಕ್ಕಳಲ್ಲಿ ಎರಡನೆಯವಳಾದ ಈ ಬಾಲಕಿ ಇತ್ತೀಚೆಗೆ ದೇವನಹಳ್ಳಿಯ ಸ್ಥಳೀಯ ಕಾಲೇಜಿನಲ್ಲಿ ಪ್ರಥಮ ವರ್ಷದ ಪಿಯು ಮುಗಿಸಿದ್ದಳು.

“ಕಳೆದ ಕೆಲವು ದಿನಗಳಿಂದ ತನ್ನ ಮಗಳು ಹೊಟ್ಟೆ ನೋವು ಎಂದು ಹೇಳುತ್ತಿದ್ದಳು. ಡಿಸೆಂಬರ್ 9 ರಂದು ನೋವು ಉಲ್ಬಣಗೊಂಡ ನಂತರ ಮನೆಯವರು ಚಿಕ್ಕಬಳ್ಳಾಪುರ ಜಿಲ್ಲಾ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಗೆ ಕರೆದೊಯ್ದರು. ಈ ವೇಳೆ ಮಗಳು ಗರ್ಭಿಣಿಯಾಗಿರುವುದಾಗಿ ವೈದ್ಯರು ತಿಳಿಸಿದ್ದಾರೆ ಎಂದು ಎಫ್‌ಐಆರ್‌ನಲ್ಲಿ ತಂದೆ ಹೇಳಿದ್ದಾರೆ.

ಇದರಿಂದ ಗಾಬರಿಗೊಂಡ ಪೋಷಕರು ಮಗಳನ್ನು ವಿಚಾರಿಸಿದಾಗ ಆಕೆ ಒಬ್ಬಳೇ ಇದ್ದಾಗ ವಿಜಯ್ ಕುಮಾರ್ ತನ್ನನ್ನು ಲೈಂಗಿಕವಾಗಿ ಬಳಸಿಕೊಂಡಿದ್ದಾನೆ ಎಂದು ಹೇಳಿದ್ದಾರೆ. “ತನ್ನ ವಿರೋಧದ ಹೊರತಾಗಿಯೂ, ಕುಮಾರ್ ಮದುವೆಯಾಗುವುದಾಗಿ ಭರವಸೆ ನೀಡಿ ತನ್ನೊಂದಿಗೆ ದೈಹಿಕ ಸಂಬಂಧವನ್ನು ಹೊಂದುವಂತೆ ಮನವೊಲಿಸಿದ್ದ ಎಂದು ಬಾಲಕಿ ಹೇಳಿದ್ದಾಳೆ.

ಬಾಲಕಿಯನ್ನು ದೇವನಹಳ್ಳಿಯ ಯರ್ತಿಗಾನಹಳ್ಳಿಯಲ್ಲಿರುವ ಓಂ ಶಕ್ತಿ ದೇವಸ್ಥಾನದ ಬಳಿಯ ಶೆಡ್‌ಗೆ ಕರೆದೊಯ್ದು ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಈ ವರ್ಷದ ಫೆಬ್ರವರಿ 10 ರಂದು ಈ ಘಟನೆ ನಡೆದಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಆರೋಪಿ ಕುಮಾರ್ ವಿರುದ್ಧ ಪೋಸ್ಕೊ ಕಾಯಿದೆಯ ಸೆಕ್ಷನ್ 4 ಮತ್ತು 6 ಮತ್ತು ಐಪಿಸಿ ಸೆಕ್ಷನ್ 376 (2) (ಎನ್) ಅಡಿಯಲ್ಲಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು