LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Bangalore Urban

ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ: ಸಚಿವ ಆರ್.ಬಿ ತಿಮ್ಮಾಪೂರ್ ತಲೆದಂಡ ಸಾಧ್ಯತೆ

ಬೆಂಗಳೂರು: ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ಮದ್ಯ ವ್ಯಾಪಾರಿಗಳು ಗಂಭೀರ ಆರೋಪ ಮಾಡುತ್ತಿರುವ ಹಿನ್ನೆಲೆಯಲ್ಲಿ ಅಬಕಾರಿ ಸಚಿವ ಆರ್.ಬಿ.ತಿಮ್ಮಾಪುರ್ ಅವರು ಸಚಿವ ಸ್ಥಾನದಿಂದ ಕೈ ಬಿಡುವ ಸಾಧ್ಯತೆ ಇದೆ.

ಮಹಾರಾಷ್ಟ್ರ ಚುನಾವಣಾ ಪ್ರಚಾರದ ವೇಳೆ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಬಿಜೆಪಿಯ ಹಿರಿಯ ನಾಯಕರು ಈ ವಿಷಯ ಪ್ರಸ್ತಾಪಿಸಿದ್ದರು. ಇಲಾಖೆಯಲ್ಲಿನ ಬೆಳವಣಿಗೆಗಳ ಬಗ್ಗೆ ಕಾಂಗ್ರೆಸ್ ಕೇಂದ್ರ ನಾಯಕತ್ವ ಅಸಮಾಧಾನ ವ್ಯಕ್ತಪಡಿಸಿದೆ ಎಂದು ಸರ್ಕಾರದ ಮೂಲಗಳು ತಿಳಿಸಿವೆ. ಡಿಸೆಂಬರ್ 9 ರಂದು ಬೆಳಗಾವಿಯಲ್ಲಿ ವಿಧಾನಸಭೆ ಅಧಿವೇಶನ ಪ್ರಾರಂಭವಾಗುವ ಮೊದಲು ತಿಮ್ಮಾಪುರ್ ಅವರ ಖಾತೆಯನ್ನು ಬೇರೆಯವರಿಗೆ ನೀಡುವ ಸಾಧ್ಯತೆಯಿದೆ ಅಥವಾ ಅದಕ್ಕಿಂತ ಮುಂಚೆಯೇ ಅದು ಬದಲಾವಣೆಯಾಗಬಹುದು ಎಂದು ಹೇಳಲಾಗುತ್ತಿದೆ.

ಇಲಾಖೆಯಲ್ಲಿನ ಭ್ರಷ್ಟಾಚಾರವನ್ನು ವಿರೋಧಿಸಿ ಫೆಡರೇಶನ್ ಆಫ್ ವೈನ್ ಮರ್ಚೆಂಟ್ಸ್ ಅಸೋಸಿಯೇಷನ್ ​​ಆಫ್ ಕರ್ನಾಟಕ ಈ ಹಿಂದೆ ಎಲ್ಲಾ ಮದ್ಯದಂಗಡಿಗಳನ್ನು ಮುಚ್ಚಿ ಅಹೋರಾತ್ರಿ ಮುಷ್ಕರಕ್ಕೆ ಕರೆ ನೀಡಿತ್ತು. ಆದರೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಸಭೆ ನಡೆಸಿ ಬೇಡಿಕೆಗಳ ಈಡೇರಿಕೆಗೆ ಭರವಸೆ ನೀಡಿದ ಬಳಿಕ ಧರಣಿ ಹಿಂಪಡೆದರು. ಅಬಕಾರಿ ಇಲಾಖೆಯಲ್ಲಿ 700 ಕೋಟಿ ರೂಪಾಯಿ ಅವ್ಯವಹಾರ ನಡೆದಿದೆ ಎಂದು ಆರೋಪಿಸಿರುವ ಕರ್ನಾಟಕ ಬಿಜೆಪಿ ನಾಯಕರು ಸಚಿವರನ್ನು ಸಂಪುಟದಿಂದ ಕೈಬಿಡಬೇಕು ಎಂದು ಒತ್ತಾಯಿಸಿದ್ದಾರೆ. ರಾಜ್ಯದಲ್ಲಿ ಸಂಗ್ರಹವಾದ ಹಣವನ್ನು ಮಹಾರಾಷ್ಟ್ರದ ಚುನಾವಣೆಯಲ್ಲಿ ಬಳಸಲಾಗಿದೆ ಎಂದು ಬಿಜೆಪಿ ಆರೋಪಿಸಿತ್ತು. ಬಿಜೆಪಿ ವಿಧಾನಸಭೆ ಅಧಿವೇಶನದಲ್ಲಿ ಈ ವಿಷಯ ಪ್ರಸ್ತಾಪಿಸುವ ಸಾಧ್ಯತೆ ಇದೆ. ಆದರೆ, ರಾಜ್ಯದ ಕಾಂಗ್ರೆಸ್ ನಾಯಕರು ಬಿಜೆಪಿಯ ಆರೋಪಗಳನ್ನು ನಿರಾಧಾರ ಎಂದು ತಳ್ಳಿಹಾಕಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು