LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Bangalore Rural

ಅಮಿತ್ ಷಾ ಸಚಿವ ಸಂಪುಟದಿಂದ ವಜಾಗೊಳಿಸಲು ಒತ್ತಾಯ

ದೊಡ್ಡಬಳ್ಳಾಪುರ: ನಗರದ ಪ್ರವಾಸಿ ಮಂದಿರದಲ್ಲಿಪ್ರಜಾವಿಮೋಚನಾ ಚಳವಳಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಘಟಕ ಹಾಗೂ ದೊಡ್ಡಬಳ್ಳಾಪುರ ತಾಲೂಕು ಘಟಕದ ವತಿಯಿಂದ ಕೇಂದ್ರ ಗೃಹ ಸಚಿವ ಅಮಿತ್ ಷಾ ಲೋಕಸಭೆಯಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಬಗ್ಗೆ ಕೀಳಾಗಿ ನೀಡಿದ ಹೇಳಿಕೆ ಖಂಡಿಸಿ ಪತ್ರಿಕಾ ಗೋಷ್ಠಿ ನಡೆಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಬೆಂಗಳೂರು ಗ್ರಾಮಾಂತರ ಜಿಲ್ಲಾ ಘಟಕದ ಅದ್ಯಕ್ಷ ಹೆಚ್.ರಾಘವೇಂದ್ರ ಅವರು ಅಮಿತ್ ಷಾ ಅವರ ಹೇಳಿಕೆ ಮಹಿಳೆಯರು, ಪರಿಶಿಷ್ಟ ಜಾತಿ, ಪಂಗಡಗಳು, ಒಬಿಸಿ ಇತರೆ ಹಿಂದುಳಿದ ವರ್ಗಗಳಿಗೆ ಘಾಸಿ ಉಂಟುಮಾಡಿದೆ. ಹಾಗಾಗಿ ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರನ್ನು ಸಂಪುಟದಿಂದ ವಜಾ ಮಾಡಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಭಾರತದ ಚರಿತ್ರೆಯಲ್ಲಿ. ವ್ಯವಸ್ಥೆಯಿಂದ ತುಳಿತಕ್ಕೆ ಒಳಗಾದವರ, ನೊಂದವರ ಹಾಗೂ ಶೋಷಿತರ ಧ್ವನಿಯಾಗಿ ಸರ್ವರು ಸಮಾನರು ಎಂದು ಪ್ರತಿವಾದಿಸಿದ ಅಂಬೇಡ್ಕರ್ ಅವರು, ಇಡೀ ಪ್ರಪಂಚವೇ ಮೆಚ್ಚುವ ಸರ್ವರಿಗೂ ಸಮಬಾಳು, ಸರ್ವರಿಗೂ ಸಮಪಾಲು ಎಂಬ ಆಶಯದ ಸಂವಿಧಾನ ರಚಿಸಿ ಕೊಟ್ಟವರು ಅಂತಹ ಮಹಾನ್ ನಾಯಕ ಡಾ.ಬಿ.ಆರ್. ಅಂಬೇಡ್ಕರ್ ಅವರ ಬಗ್ಗೆ ಕೇವಲವಾಗಿ ಮಾತನಾಡಿದ ಅಮಿತ್ ಷಾ ವಿರುದ್ಧ ಸೂಕ್ತ ಕ್ರಮವ ಜರುಗಿಸಬೇಕು ಹಾಗೂ ಸಂಪುಟದಿಂದ ವಜಾಗೋಳಿಸಬೇಕು ಆಗ್ರಹಿಸಿದರು.

ನಂತರ ಮಾತನಾಡಿದ ತಾಲೂಕು ಅದ್ಯಕ್ಷ ಹೆಚ್. ಶಿವಕುಮಾರ್ ಅವರು ಅವರು ಶಿಕ್ಷಣ ಮತ್ತು ಶಾಲಾ ಕ್ಷೇತ್ರದಲ್ಲಿ ಸಾಮಾಜಿಕ ಬದಲಾವಣೆಯನ್ನು ತಂದವರು. ಭಾರತದ ಅತ್ಯಂತ ಗೌರವಾನ್ವಿತ ಮಹಿಳಾ ಶಿಕ್ಷಕರಲ್ಲಿ ಒಬ್ಬರಾದ ಸಾವಿತ್ರಿಬಾಯಿ ಶಿಕ್ಷಣದ ಮೂಲಕ ಮಹಿಳೆಯರು ಮತ್ತು ಅಸ್ಪೃಶ್ಯರ ಉನ್ನತಿಗಾಗಿ ತಮ್ಮ ಜೀವನವನ್ನು ಸಂಪೂರ್ಣವಾಗಿ ಮುಡಿಪಾಗಿಟ್ಟರು. ಜನವರಿ 3. ಅವರ 194 ನೇ ಜನ್ಮ ದಿನಾಚರಣೆ ಆಚರಿಸುವುದರ ಜೋತೆಗೆ ಸರ್ಕಾರಿ ಶಾಲೆಯ ಪ್ರತಿಭಾನ್ವಿತ ವಿದ್ಯಾರ್ಥಿನಿಯರಿಗೆ ಪ್ರತಿಭಾಪುರಸ್ಕಾರ ಸಹ ಹಮ್ಮಿಕೊಳ್ಳಲಾಗುವುದು ಎಂದರು.ಈ ಸಂದರ್ಭದಲ್ಲಿ ತಾಲೂಕು ಹಾಗೂ ಜಿಲ್ಲಾ ಪದಾಧಿಕಾರಿಗಳು ಹಾಜರಿದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು