LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts

ಅರಣ್ಯ ಅಧಿಕಾರಿಗಳ ಮೇಲೆ ಹಲ್ಲೆ; ಆರೋಪಿಗೆ ಗುಂಡು

ಮುಳಬಾಗಿಲು: ತಾಲ್ಲೂಕಿನ ಕಾಶೀಪುರ ವಲಯ ಅರಣ್ಯದಲ್ಲಿ ತಡರಾತ್ರಿ ಶ್ರೀಗಂಧದ ಮರವನ್ನು ಕಳ್ಳತನ ಮಾಡಲು ಬಂದ ಕಿಡಿಗೇಡಿಗಳು ಅರಣ್ಯ ಅಧಿಕಾರಿಗಳ ಮೇಲೆ ಹಲ್ಲೆ ಮಾಡಿದ ಪರಿಣಾಮ ಗುಂಡು ಹಾರಿಸಿದ ಹಿನ್ನೆಲೆಯಲ್ಲಿ ಒಬ್ಬ ಆರೋಪಿ ಸಿಕ್ಕಿ ಬಿದ್ದಿದ್ದು, ಮತ್ತೆ ಐದು ಮಂದಿ ಆರೋಪಿಗಳು ತಪ್ಪಿಸಿಕೊಂಡು ಪರಾರಿಯಾಗಿದ್ದಾರೆ.

ಕಾಶೀಪುರ ಅರಣ್ಯ ಪ್ರದೇಶದಲ್ಲಿ ಕೆಲ ಹಿಂದಿನ ದಿನಗಳಿಂದ ಶ್ರೀಗಂಧದ ಮರಗಳು ಕಳವು ಆಗುತ್ತಿದ್ದವು. ಇಲಾಖೆಯ ಅಧಿಕಾರಿಗಳು ಕಣ್ಗಾವಲನ್ನು ಈ ಬಗ್ಗೆ ಇಟ್ಟಿದ್ದರು. ದಿನಗಳು ಕಳೆದಂತೆ ಕಳ್ಳರು ಸಿಗುತ್ತಿರಲಿಲ್ಲ. ಆದ್ದರಿಂದ ರಾತ್ರಿ ವೇಳೆಯಲ್ಲಿ ಗಸ್ತು ಬಿಗಿ ಬಂದೋಬಸ್ತ್ ಮಾಡಲಾಗಿತ್ತು.
ತಡರಾತ್ರಿ ಸುಮಾರು ಒಂದು ಗಂಟೆ ಸಮಯದಲ್ಲಿ 6 ಮಂದಿ ಕಿಡಿಗೇಡಿಗಳು ಶ್ರೀಗಂಧದ ಮರಗಳನ್ನು ಕಡಿಯುತ್ತಿರುವ ದೃಶ್ಯ ಕಂಡು ಬಂದಿತ್ತು. ಗಸ್ತು ಅರಣ್ಯ ಪಾಲಕ ಅನೀಲ್ ಸಿದ್ದರಾಮ ಪರಿಟ ಅವರು ಗಸ್ತು ಕೆಲಸ ಮಾಡುತ್ತಿದ್ದರು.

ಈ ಸಂದರ್ಭದಲ್ಲಿ ಅರಣ್ಯ ಪ್ರದೇಶದಲ್ಲಿ ಯಾರೋ ಕಿಡಿಗೇಡಿಗಳು ಶ್ರೀಗಂಧದ ಮರವನ್ನು ಕಡಿಯುತ್ತಿರುವ ದೃಶ್ಯ ಕಂಡ ತಕ್ಷಣ ಯಾರೆಂದು ವಿಚಾರಿಸಲು ತೆರಳಿದಾಗ ಕಿಡಿಗೇಡಿಗಳು ವಿವಿಧ ಮಾರಾಕಾಸ್ತ್ರಗಳಿಂದ ಅಧಿಕಾರಿಗಳ ಮೇಲೆ ಹಲ್ಲೆ ನಡೆಸಲು ಯತ್ನಿಸಿರುತ್ತಾರೆ. ಆಗ ಗಸ್ತು ಅರಣ್ಯ ಪಾಲಕ ಅನಿಲ್ ಸಿದ್ದರಾಮ ಪರಿಟ ಅವರು ತಮ್ಮ ಬಂದೂಕಿನಿಂದ ಗಾಳಿಯಲ್ಲಿ ಗುಂಡುಗಳನ್ನು ಹಾರಿಸಿದ್ದನ್ನು ಲೆಕ್ಕಿಸದೆ ಹಲ್ಲೆ ಮಾಡಲು ಯತ್ನಿಸಿದ ಕಾರಣದಿಂದ ಕಿಡಿಗೇಡಿಗಳ ಮೇಲೆ ಗುಂಡು ಹಾರಿಸಿದರು.

ಕಿಡಿಗೇಡಿಗಳ ವಿವರ: ಈ ಸಂದರ್ಭದಲ್ಲಿ ಮುಳಬಾಗಿಲು ತಾಲೂಕಿನ ತಾಯಲೂರು ಗ್ರಾಮದ ಗುರಾಲುವಂಕಕ್ಕೆ ಸಂಬಂಧಿಸಿದ ಭತ್ತೆಪ್ಪ ಎಂಬುವವರಿಗೆ ಗುಂಡು ತಗುಲಿ ಸಿಕ್ಕಿ ಬಿದ್ದಿದ್ದಾನೆ. ಮತ್ತೆ ಐದು ಮಂದಿ ಪರಿಣಾಮ ಪರಾರಿಯಾಗಿದ್ದಾರೆ. ಸೀನ, ಸೀನ, ರವಿ, ಸುರೇಶ, ಮಹೇಂದ್ರ ಎಂಬುವರು ತಲೆ ಮರೆಸಿಕೊಂಡಿದ್ದಾರೆ. ಇವರ ಹುಡುಕಾಟಕ್ಕೆ ಅರಣ್ಯ ಹಾಗೂ ಪೊಲಿಸ್ ಇಲಾಖೆಯ ಅಧಿಕಾರಿಗಳು ಬಲೆ ಬೀಸಿದ್ದಾರೆ.

ಶ್ವಾನ: ಕಾಶೀಪುರ ಅರಣ್ಯ ಪ್ರದೇಶದಲ್ಲಿ ಶ್ರೀಗಂಧದ ಮರಗಳನ್ನು ಕಳ್ಳತನ ಮಾಡಲು ಬಂದ ಕಿಡಿಗೇಡಿಗಳ ಬಗ್ಗೆ ಮತ್ತಷ್ಟು ಮಾಹಿತಿ ಹಾಗೂ ವಿವರಗಳನ್ನು ಕಲೆ ಹಾಕಲು ಅರಣ್ಯ ಪ್ರದೇಶದಲ್ಲಿ ಶ್ವಾನಗಳನ್ನು ಬಿಡಲಾಯಿತು. ಈ ಶ್ವಾನಗಳು ಅರಣ್ಯವನ್ನು ಸುತ್ತಿಕೊಂಡು ಸಮೀಪದ ತೊರಡಿ ಗ್ರಾಮದ ಕೆರೆಯನ್ನು ಸೇರಿದೆ ಈ ಹಿನ್ನೆಲೆಯಲ್ಲಿ ಕಿಡಿಗೇಡಿಗಳನ್ನು ಪತ್ತೆ ಹಚ್ಚಲು ಸಂಬಂಧಿಸಿದ ಇಲಾಖೆ ಮುಂದಾಗಿದೆ.

ಕಿಡಿಗೇಡಿಗಳು ಶ್ರೀಗಂಧದ ಮರಗಳನ್ನು ಕಳವು ಮಾಡಲು ಬಳಕೆ ಮಾಡಲಾದ 3ರಂಪಗಳು, ಗಡಾರಿ 1, ಮಂಚು 1 ರಂತೆ, 2 ಬ್ಯಾಟರಿಗಳನ್ನು ವಶ ಪಡಿಸಿಕೊಳ್ಳಲಾಗಿದೆ ಎಂದು ವಲಯ ಅರಣ್ಯಾಧಿಕಾರಿ ಜ್ಯೋತಿ ಮಾಹಿತಿ ನೀಡಿದರು.ಘಟನೆಯ ವಿವರ ತಿಳಿದ ಹಿನ್ನೆಲೆಯಲ್ಲಿ ಅರಣ್ಯ, ಪೊಲೀಸ್ ಸೇರಿದಂತೆ ವಿವಿಧ ಬಗೆಯ ಸಂಬಂಧಿಸಿದ ಇಲಾಖೆಯ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು