LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Chikkaballapura

ಅ.2 ಕ್ಕೆ ಗಾಂಧಿ ಭವನ ಲೋಕಾರ್ಪಣೆ: ಸಚಿವ ಸುಧಾಕರ್

ಚಿಕ್ಕಬಳ್ಳಾಪುರ: ಜಿಲ್ಲಾ ಕೇಂದ್ರದ ಹೃದಯ ಭಾಗದಲ್ಲಿ ನಿರ್ಮಾಣಗೊಂಡಿರುವ ಗಾಂಧಿ ಭವನವನ್ನು ಇದೇ ಅಕ್ಟೋಬರ್ 2 ರ ಗಾಂಧಿ ಜಯಂತಿ ದಿನದಂದು ಲೋಕಾರ್ಪಣೆ ಮಾಡಲು ಯೋಜಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಂ. ಸಿ ಸುಧಾಕರ್ ಅವರು ತಿಳಿಸಿದರು.

ಚಿಕ್ಕಬಳ್ಳಾಪುರ ನಗರದಲ್ಲಿ ನಿರ್ಮಾಣಗೊಂಡಿರುವ ಗಾಂಧಿ ಭವನಕ್ಕೆ ಶುಕ್ರವಾರ ಭೇಟಿ ನೀಡಿ ಪರಿಶೀಲಿಸಿ ಸುದ್ದಿಗಾರರೊಂದಿಗೆ ಮಾತನಾಡಿದರು.
3 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಿರುವ ಗಾಂಧೀ ಭವನವನ್ನು ಲೋಕಾರ್ಪಣೆ ಮಾಡಿ ಗಾಂಧೀಜಿವರ ವಿಚಾರ ದಾರೆಗಳು ಹಾಗೂ ತತ್ವಾದರ್ಶಗಳನ್ನು ಇಂದಿನ ಹಾಗೂ ಮುಂದಿನ ಪೀಳಿಗೆಯವರೆಗೆ ತಲುಪಿಸುವ ಕಾರ್ಯವನ್ನು ಮಾಡಲಾಗುವುದು ಈ ನಿಟ್ಟಿನಲ್ಲಿ ಈ ಭವನ ಉಪಯುಕ್ತವಾಗಲಿದ್ದು, ಗಾಂಧೀಜಿಯವರ ಜೀವನ ಚರಿತ್ರೆಯನ್ನು ಬಿಂಬಿಸುವಂತೆ ಈಗಾಗಲೇ ಇಲ್ಲಿ ನಿರ್ಮಿಸಿರುವ ಛಾಯಾಚಿತ್ರ ಗ್ಯಾಲರಿಯನ್ನು ಪ್ರತಿಯೊಬ್ಬರು ವೀಕ್ಷಿಸಲು ಉತ್ತೇಜಿಸಲಾಗುವುದು.

ಖಾದಿ ಉತ್ಪನ್ನಗಳನ್ನು ಮಾರಾಟ ಮಾಡಲು ಮಳಿಗೆಗಳನ್ನು ಮಳಿಗೆಗಳನ್ನು ತೆರೆಯಲು ಯೋಜಿಸಲಾಗಿದೆ. ಖಾದಿ ಉತ್ಪನ್ನ ತಯಾರಿಕರಿಗೆ ತಮ್ಮ ಉತ್ಪನ್ನಗಳನ್ನು ಪ್ರದರ್ಶಿಸಲು ಹಾಗೂ ಮಾರಾಟ ಮಾಡಲು ಅನುಮತಿ ನೀಡಲಾಗುವುದು ಎಂದು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದರು.
ಎಂ.ಜಿ ರಸ್ತೆಯ ಅಗಲೀಕರಣದ ಕಾರ್ಯಕ್ಕೆ ಸ್ಥಳೀಯ ನಾಗರಿಕರು ಹಾಗೂ ಸಾರ್ವಜನಿಕರು ಸ್ವಯಂ ಪ್ರೇರಿತ ಸಹಕಾರ ನೀಡುತ್ತಿರುವುದಕ್ಕೆ ಜಿಲ್ಲಾಡಳಿತದ ಪರವಾಗಿ ಹಾಗೂ ಜಿಲ್ಲಾ ಉಸ್ತುವಾರಿ ಧನ್ಯವಾದಗಳನ್ನು ತಿಳಿಸಿದರು.

ಜಿಲ್ಲಾ ಕನ್ನಡ ಭವನ ನಿರ್ಮಾಣ ಕಾಮಗಾರಿಯು ಪ್ರಗತಿಯಲ್ಲಿದ್ದು, ಈಗಾಗಲೇ 6.50 ಕೋಟಿ ವೆಚ್ಚದ ಕಾಮಗಾರಿಗಳು ಪೂರ್ಣಗೊಂಡಿವೆ ಇನ್ನುಳಿದ ಬಾಕಿ ಅನುದಾನವನ್ನು ತಂದು ಈ ವರ್ಷದ ಅಂತ್ಯದೊಳಗೆ ಭವನದ ಲೋಕಾರ್ಪಣೆ ಮಾಡುವ ಕೆಲಸವಾಗುತ್ತದೆ ಎಂದರು.ಈ ವೇಳೆಯಲ್ಲಿ ಶಾಸಕರಾದ ಪ್ರದೀಪ್ ಈಶ್ವರ್, ಜಿಲ್ಲಾಧಿಕಾರಿ ಪಿ.ಎನ್ ರವೀಂದ್ರ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಕಾಶ್ ಜಿ.ಟಿ ನಿಟ್ಟಾಲಿ, ಉಪವಿಭಾಗಾಧಿಕಾರಿ ಡಿ.ಹೆಚ್. ಅಶ್ವಿನ್ ತಹಸಿಲ್ದಾರ್ ಅನಿಲ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಾಯಕ ನಿರ್ದೇಶಕರಾದ ಎಂ.ಜುoಜಣ್ಣ, ಯೋಜನಾ ಅಭಿಯಂತರ ನವೀನ್ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು