LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಆಂಧ್ರ ಪ್ರದೇಶ, ನೇಪಾಳ, ಕ್ಯೂಬಾ ಸೇರಿದಂತೆ ಜಗತ್ತಿನ ಹಲವೆಡೆ ಭೂಕಂಪನ, ವನವಾಟುನಲ್ಲಿ 12 ಮಂದಿ ಸಾವು!

ನವದೆಹಲಿ: ಜಗತ್ತಿನಾದ್ಯಂತ ಹಲವು ದೇಶಗಳಲ್ಲಿ ಭಾರಿ ಭೂಕಂಪನ ಸಂಭವಿಸಿದ್ದು, ಭಾರತದ ಆಂಧ್ರ ಪ್ರದೇಶ, ನೆರೆಯ ನೇಪಾಳ, ಕ್ಯೂಬಾ ಮತ್ತು ದಕ್ಷಿಣ ಪೆಸಿಫಿಕ್ ಸಾಗರದಲ್ಲಿರುವ ದ್ವೀಪರಾಷ್ಟ್ರ ವನವಾಟುವಿನಲ್ಲಿ ಭಾರಿ ಕಂಪನ ದಾಖಲಾಗಿವೆ.

ಆಂಧ್ರ ಪ್ರದೇಶದ ಪ್ರಕಾಶಂ ಜಿಲ್ಲೆಯ ಕಳೆದ ಮೂರು ದಿನಗಳಲ್ಲಿ ಮೂರನೇ ಬಾರಿಗೆ ಕಂಪನದ ಅನುಭವವಾಗಿದೆ. ಜಿಲ್ಲೆಯ ಮುಂಡ್ಲಮೂರಿನಲ್ಲಿ ಇಂದು ಕೂಡ ಭೂಕಂಪನದ ಅನುಭವವಾಗಿದ್ದು, ಕಳೆದ ಮೂರು ದಿನಗಳಿಂದ ಮುಂಡ್ಲಮೂರಿನಲ್ಲಿ ಸತತ ಭೂಕಂಪನ ಉಂಟಾಗಿದೆ ಎಂದು ಸ್ಥಳೀಯರು ಹೇಳಿದ್ದಾರೆ. ಶನಿವಾರ ಮತ್ತು ಭಾನುವಾರ ಬೆಳಗ್ಗೆ 10:35ಕ್ಕೆ ಭೂಮಿ ಕಂಪಿಸಿತು.

ಇಂದು ಮತ್ತೊಮ್ಮೆ ಕಂಪನದ ಅನುಭವವಾಗಿದೆ. ಇದರಿಂದ ಜನರು ಮನೆ ಬಿಟ್ಟು ಓಡಿ ಬಂದರು. ಶನಿವಾರ ಮತ್ತು ಭಾನುವಾರದಂದು ಕಂಪಿಸಿದ ಕಾರಣ ಮನೆಗಳಲ್ಲಿನ ವಸ್ತುಗಳು ಸಹ ಅಲುಗಾಡಿದವು. ಮೂರು ದಿನಗಳಿಂದ ಭೂಮಿ ಕಂಪಿಸುತ್ತಿರುವುದರಿಂದ ಜನರು ಭಯಭೀತರಾಗಿದ್ದಾರೆ. ಆ ಪ್ರದೇಶದಲ್ಲಿ ನಿಜವಾಗಿ ಏನು ನಡೆಯುತ್ತಿದೆ ಎಂದು ಅವರಿಗೆ ಅರ್ಥವಾಗುತ್ತಿಲ್ಲ ಮತ್ತು ಕಳವಳ ವ್ಯಕ್ತಪಡಿಸುತ್ತಿದ್ದಾರೆ.

ಆಂಧ್ರ ಪ್ರದೇಶ ಮಾತ್ರವಲ್ಲದೇ ಗುಜರಾತ್ ನ ಕಚ್ ನಲ್ಲೂ ಕಂಪನ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 3.7 ತೀವ್ರತೆ ದಾಖಲಾಗಿದೆ. ಭೂಕಂಪನದ ಕೇಂದ್ರ ಬಿಂದು ರಾಜಧಾನಿ ಗಾಂಧಿನಗರ ದಿಂದ ಈಶಾನ್ಯಕ್ಕೆ 76 ಕಿಲೋಮೀಟರ್ ದೂರದಲ್ಲಿ ಲಖ್‌ಪತ್‌ನಲ್ಲಿ ದಾಖಲಾಗಿದೆ ಎಂದು ಮೂಲದ ಐಎಸ್‌ಆರ್ ತಿಳಿಸಿದೆ. ಈ ತಿಂಗಳಲ್ಲಿ ಇದು 2ನೇ ಕಂಪನವಾಗಿದೆ.

ನೇಪಾಳದಲ್ಲಿ ಇಂದು ಮುಂಜಾನೆ 3.59ರ ಸಮಯದಲ್ಲಿ ಭೂಕಂಪನ ಸಂಭವಿಸಿದ್ದು ರಿಕ್ಟರ್ ಮಾಪಕದಲ್ಲಿ 5.2ರಷ್ಟು ತೀವ್ರತೆ ದಾಖಲಾಗಿದೆ. ಭೂಕಂಪನದ ಕೇಂದ್ರ ಬಿಂದು 29.17 N ಅಕ್ಷಾಂಶ ಮತ್ತು 81.59 E ರೇಖಾಂಶದಲ್ಲಿ 10 ಕಿಲೋಮೀಟರ್ ಆಳದಲ್ಲಿ ದಾಖಲಾಗಿದೆ.

ಅಂತೆಯೇ ನೇಪಾಳದ ಬಜುರಾ ಜಿಲ್ಲೆಯ ಜಗನ್ನಾಥ್ ಗ್ರಾಮೀಣ ಪುರಸಭೆಯ ವಾರ್ಡ್ ಸಂಖ್ಯೆ 5 ರ ಗೋತ್ರಿಯಲ್ಲಿ ಈ ಕೇಂದ್ರಬಿಂದು ದಾಖಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಅಂತೆಯೇ ಮೇಲಿನ ಮತ್ತು ಕೆಳಗಿನ ಗೋತ್ರಿಯಲ್ಲಿ 123 ಮನೆಗಳಿಗೆ ಹಾನಿಯಾಗಿದೆ ಎಂದು ವರದಿಯಾಗಿದೆ. ಇಲ್ಲಿ ಯಾವುದೇ ಜೀವಹಾನಿಯಾದ ಬಗ್ಗೆ ವರದಿಯಾಗಿಲ್ಲ.

ನಿನ್ನೆಯಷ್ಟೇ ಪೆಸಿಫಿಕ್ ದ್ವೀಪಸಮೂಹದ ವನವಾಟು ದೇಶದಲ್ಲಿ 6.1 ತೀವ್ರತೆಯ ಭೂಕಂಪನ ಸಂಭವಿಸಿತ್ತು. ಭಾನುವಾರ ಮುಂಜಾನೆ ವನವಾಟುವಿನ ಮುಖ್ಯ ದ್ವೀಪದಲ್ಲಿ 6.1 ತೀವ್ರತೆಯ ಭೂಕಂಪವು ಕಟ್ಟಡಗಳನ್ನು ನಡುಗಿಸಿತು. ಈ ಘಟನೆಯಲ್ಲಿ ಕನಿಷ್ಠ 12 ಮಂದಿ ಸಾವಿಗೀಡಾಗಿ ಹಲವು ಕಟ್ಟಡಗಳಿಗೆ ಹಾನಿಯಾಗಿತ್ತು. ಭೂಕಂಪನದ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿತ್ತು. ಭೂಕಂಪನದ ಕೇಂದ್ರ ಬಿಂದು 40 ಕಿಲೋಮೀಟರ್ (25 ಮೈಲುಗಳು) ಆಳದಲ್ಲಿ ಸಂಭವಿಸಿದ್ದು, ರಾಜಧಾನಿಯಿಂದ ಪಶ್ಚಿಮಕ್ಕೆ ಸುಮಾರು 30 ಕಿಲೋಮೀಟರ್ ದೂರದಲ್ಲಿತ್ತು ಎನ್ನಲಾಗಿದೆ.

ಇನ್ನು ಕ್ಯೂಬಾದಲ್ಲೂ ಭೂಕಂಪನವಾಗಿದ್ದು, 5.9 ತೀವ್ರತೆಯ ಭೂಕಂಪ ಸಂಭವಿಸಿದೆ. ಭೂಕಂಪನದ ಕೇಂದ್ರ ಬಿಂದು ಇಲ್ಲಿನ ಗುಯಿಸಾದಿಂದ 46 ಕಿ.ಮೀ ದಕ್ಷಿಣಕ್ಕೆ ಸುಮಾರು 25 ಕಿ.ಮೀ ಆಳದಲ್ಲಿ ದಾಖಲಾಗಿದೆ ಎಂದು EMSC ವರದಿ ಮಾಡಿದೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು