LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅವರಿಂದ ಕನ್ನಡ ಜಾನಪದ ಸಮ್ಮೇಳನದ ಲಾಂಛನ ಅನಾವರಣ ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರದ ಜ್ಞಾನಸೌಧದಲ್ಲಿ ರಾಜ್ಯ ಮಟ್ಟದ ಪ್ರಪ್ರಥಮ ಕನ್ನಡ ಜಾನಪದ ಸಮ್ಮೇಳನ

ಬೆಂಗಳೂರು: ಕನ್ನಡ ಜಾನಪದ ಪರಿಷತ್ತಿನ ವತಿಯಿಂದ 2025ರ ಜನವರಿ 4ನೇ ತಾರೀಖಿನ ಶನಿವಾರರಂದು ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರದ ಮೂಡಲಪಾಳ್ಯ ಕಲ್ಯಾಣ ನಗರದಲ್ಲಿರುವ ಜ್ಞಾನಸೌಧ ಸಭಾಂಗಣದಲ್ಲಿ ನಡೆಯಲಿರುವ ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರದ ರಾಜ್ಯಮಟ್ಟದ ಪ್ರಪ್ರಥಮ ಕನ್ನಡ ಜಾನಪದ ಸಮ್ಮೇಳನದ ವಿಶೇಷವಾಗಿ ವಿನ್ಯಾಸ ಮಾಡಿರುವ ಲಾಂಛನವನ್ನು ಅನಾವರಣಗೊಳಿಸಿದರು.

ಜಯನಗರದ ಖಾಸಗಿ ಸ್ಥಳದಲ್ಲಿ ನಡೆದ ಕಾರ್ಯಕ್ರಮದಲ್ಲಿ ಲಾಂಛನ ಬಿಡುಗಡೆ ಮಾಡಿ ಮಾತನಾಡುತ್ತ, ಕನ್ನಡ ಜಾನಪದ ಪರಿಷತ್ ಅಳಿವಿನ ಅಂಚಿನಲ್ಲಿರುವ ಕಲೆಗಳನ್ನು ಉಳಿಸಿ-ಬೆಳೆಸುವಲ್ಲಿ ಮಾಡುತ್ತಿರುವ ಪ್ರಯತ್ನಗಳು ಶ್ಲಾಘನೀಯ, ಮುಂದುವರೆದ ಭಾಗವಾಗಿ ಕನ್ನಡ ಜಾನಪದ ಪರಿಷತ್ಗೋವಿಂದರಾಜನಗರದಲ್ಲಿ ಹಮ್ಮಿಕೊಂಡಿರುವ ಕನ್ನಡ ಜಾನಪದ ಸಮ್ಮೇಳನದ ಯಶಸ್ಸಿಗೆ ಶುಭ ಹಾರೈಸಿ ಸಮ್ಮೇಳನದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು, ಯುವಜನರು, ನಾಗರಿಕರು ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಕರೆ ನೀಡಿದರು.

2025ರ ಜನವರಿ 4ನೇ ತಾರೀಖಿನಂದು ರಾಜಧಾನಿ ಬೆಂಗಳೂರಿನ ಪ್ರತಿಷ್ಠಿತ ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರದ ರಾಜ್ಯ ಮಟ್ಟದ ಪ್ರಥಮ ಕನ್ನಡ ಜಾನಪದ ಸಮ್ಮೇಳನವನ್ನು ನಿವೃತ್ತ ಐಎಎಸ್ ಅಧಿಕಾರಿ, ಗಡಿನಾಡು ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷರಾದ ಡಾ. ಸಿ. ಸೋಮಶೇಖರ್ ರವರ ಸರ್ವಾಧ್ಯಕ್ಷತೆಯಲ್ಲಿ ಶಾಸಕ ಪ್ರಿಯಕಷ್ಣ ರವರ ಅಧ್ಯಕ್ಷತೆಯಲ್ಲಿ ಹಮ್ಮಿಕೊಂಡಿರುವುದು ಹೆಮ್ಮೆಯ ಸಂಗತಿ. ಜಾನಪದ ಸಮ್ಮೇಳನದ ಯಶಸ್ಸಿಗೆ ಎಲ್ಲ ಜನಪ್ರತಿನಿಧಿಗಳು, ಶಾಲಾ ಕಾಲೇಜು ವಿದ್ಯಾರ್ಥಿಗಳು ಹಾಗೂ ಶಿಕ್ಷಕರು, ಸಂಘ- ಸಂಸ್ಥೆಗಳು, ಸಾರ್ವಜನಿಕರು ಸಹಕಾರ ನೀಡಬೇಕು. ಸಮ್ಮೇಳನದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು, ಸಾರ್ವಜನಿಕರು ಪಾಲ್ಗೊಳ್ಳಬೇಕು ಎಂದು ಮನವಿ ಮಾಡಿದರು.

ಈ ಸಂದರ್ಭದಲ್ಲಿ ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರದ ಕನ್ನಡ ಜಾನಪದ ಪರಿಷತ್ತಿನ ಅಧ್ಯಕ್ಷ ರ. ನರಸಿಂಹಮೂರ್ತಿ, ಸಂಚಾಲಕರಾದ ಅಶ್ವಥ್ ನಾರಾಯಣ, ಪ್ರತಿಕಾ ಕಾರ್ಯದರ್ಶಿ ಶಿವಶಂಕರ್, ಕಲಾವಿದ ಮನು ಕೆಂಭಾವಿ, ಸಂಘಟನಾ ಕಾರ್ಯದರ್ಶಿ ರಾಮಾಂಜನೇಯ, ಪದಾಧಿಕಾರಿಗಳಾದ ಭಾಗ್ಯ, ಅನಿತಾ, ವಿದ್ಯಾ ಹಾಜರಿದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು