LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Bangalore Rural

ಆದಿಕವಿ ಮಹರ್ಷಿ ವಾಲ್ಮೀಕಿ ಸಾಹಿತಿಗಳಿಗೆ ಸ್ಫೂರ್ತಿಯ ಸೆಲೆಯಾಗಿದ್ದಾರೆ ಶ್ರೀ ದೇವರಾಜ ಅರಸ್ ಪ್ರಥಮ ದರ್ಜೆ ಸಂಜೆ ಕಾಲೇಜಿನ ಪ್ರಾಂಶುಪಾಲ ಡಾ. ಎಂ ಚಿಕ್ಕಣ್ಣ ಹೇಳಿಕೆ

ದೊಡ್ಡಬಳ್ಳಾಪುರ: ಆದಿ ಕವಿ ಮಹರ್ಷಿ ವಾಲ್ಮೀಕಿಯು ಕವಿಕುಲದ ಗುರುವಾಗಿ ಹಲವಾರು ಕವಿಗಳಿಗೆ ಮತ್ತು ಸಾಹಿತಿಗಳಿಗೆ ಸ್ಫೂರ್ತಿಯ ಸೆಲೆಯಾಗಿದ್ದರು ಎಂದು ಶ್ರೀ ದೇವರಾಜ ಅರಸ್ ಪ್ರಥಮ ದರ್ಜೆ ಸಂಜೆ ಕಾಲೇಜಿನ ಪ್ರಾಂಶುಪಾಲ ಡಾ. ಎಂ ಚಿಕ್ಕಣ್ಣ ಹೇಳಿದರು.

ಶ್ರೀ ದೇವರಾಜ ಅರಸ್ ಪ್ರಥಮ ದರ್ಜೆ ಸಂಜೆ ಕಾಲೇಜು, ಲಯನ್ಸ್ ಕ್ಲಬ್ ಆಫ್ ಆರ್. ಎಲ್ ಜಾಲಪ್ಪ ಸಮೂಹ ಶಿಕ್ಷಣ ಸಂಸ್ಥೆಗಳು ಮತ್ತು ಶ್ರೀ ದೇವರಾಜ ಅರಸ್ ಸಮೂಹ ಶಿಕ್ಷಣ ಸಂಸ್ಥೆಗಳ ವತಿಯಿಂದ ಏರ್ಪಡಿಸಿದ್ದ ಮಹರ್ಷಿ ವಾಲ್ಮೀಕಿ ಜನ್ಮ ದಿನಾಚರಣೆಯನ್ನು ಆಚರಿಸಲಾಯಿತು.ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ವಾಲ್ಮೀಕಿ ರಚಿತ ರಾಮಾಯಣದ ಆಧಾರದ ಮೇಲೆ ವಿವಿಧ ಭಾಷೆಗಳಲ್ಲಿ ಕಾವ್ಯ, ನಾಟಕ, ಕಾದಂಬರಿ ಮತ್ತು ಕತೆಗಳನ್ನು ಅನೇಕರು ರಚಿಸಿದ್ದಾರೆ ಮತ್ತು ರಚಿಸುತ್ತಲೂ ಇದ್ದಾರೆ, ರಾಮಾಯಣ ಮಹಾಕಾವ್ಯವು ಜಗತ್ತಿನಲ್ಲಿ ಸತ್ವಯುತವಾದ ಮತ್ತು ಮೌಲ್ಯಯುತವಾದ ಸಾಹಿತ್ಯ ಸೃಷ್ಟಿಗೆ ಪ್ರೇರಣೆಯಾಗಿದೆ,

ರಾಮಾಯಣ ಮಹಾಕಾವ್ಯದಲ್ಲಿ ಮಾತೃದೇವೋಭವ, ಪಿತೃದೇವೋಭವ, ಆಚಾರ್ಯದೇವೋಭವ, ಅತಿಥಿ ದೇವೋಭವದಂತಹ ಮೌಲ್ಯಗಳನ್ನು ಎತ್ತಿ ಹಿಡಿಯಲಾಗಿದೆ. ಮಮತೆ, ಸಮತೆ, ಭ್ರಾತೃತ್ವ, ತ್ಯಾಗ, ದೇಶಪ್ರೇಮ, ಅಳಿಲು ಸೇವೆ, ಪಿತೃವಾಕ್ಯ ಪರಿಪಾಲನೆ ಮುಂತಾದ ಹಲವಾರು ಮಾನವೀಯ ಮತ್ತು ಸಾಮಾಜಿಕ ಮೌಲ್ಯಗಳನ್ನು ಪ್ರತಿಪಾದಿಸಲಾಗಿದೆ ಎಂದರು.

ಲಯನ್ಸ್ ಕ್ಲಬ್ ಆಫ್ ಆರ್. ಎಲ್ ಜಾಲಪ್ಪ ಸಮೂಹ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಜೆ. ರಾಕೇಶ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ರಾಮಾಯಣವು ಭಾರತೀಯರ ಜೀವನಚರಿತ್ರೆಯನ್ನು ಮತ್ತು ಸಂಸ್ಕೃತಿಯನ್ನು ಪ್ರತಿಬಿಂಬಿಸುವ ಮಹಾಕಾವ್ಯವಾಗಿದೆ, ಮಹರ್ಷಿ ವಾಲ್ಮೀಕಿಯ ರಾಮಾಯಣದಲ್ಲಿ ಭರತಖಂಡದಲ್ಲಿನ ಅರಣ್ಯಗಳು, ಪರ್ವತಗಳು, ನದಿಗಳು, ಸರೋವರಗಳು, ಸಮುದ್ರಗಳು ಮತ್ತು ಜಲಪಾತಗಳ ಪ್ರಕೃತಿ ಸೌಂದರ್ಯವನ್ನು ವರ್ಣಿಸಿದ್ದಾರೆ ಅಲ್ಲದೆ ವಿವಿಧ ಪಾತ್ರಗಳ ಮುಖಾಂತರ ಕೌಟುಂಬಿಕ ಮೌಲ್ಯಗಳು ಮತ್ತು ಆದರ್ಶ ವ್ಯಕ್ತಿಯ ಗುಣಲಕ್ಷಣಗಳನ್ನು ಮನೋಜ್ಞವಾಗಿ ಚಿತ್ರಿಸಿದ್ದಾರೆ,

ಹಿಂದೂ ಧರ್ಮದ ಪ್ರಮುಖ ಗ್ರಂಥಗಳಲ್ಲಿ ಒಂದಾದ ರಾಮಾಯಣ ಹಿಂದೂ ಮಹಾಕಾವ್ಯವನ್ನು ಬರೆದಿದ್ದಕ್ಕಾಗಿ ವಾಲ್ಮೀಕಿ ಅವರು ಅತ್ಯಂತ ಪ್ರಸಿದ್ಧರಾಗಿದ್ದಾರೆ, ಇದು ಭಗವಾನ್ ವಿಷ್ಣುವಿನ ಎಂಟು ಅವತಾರಗಳ ಕಥೆಯನ್ನು ಹೇಳುತ್ತದೆ, ವಾಲ್ಮೀಕಿ ಅವರನ್ನು ಭಾರತದಲ್ಲಿ ದೇಶ ಕಂಡ ಶ್ರೇಷ್ಠ ಕವಿಗಳಲ್ಲಿ ಒಬ್ಬರೆಂದು ಪರಿಗಣಿಸಲಾಗಿದೆ ಎಂದರು.

ಕಾರ್ಯಕ್ರಮದಲ್ಲಿ ಉಪ ಪ್ರಾಂಶುಪಾಲರಾದ ದಕ್ಷಿಣ ಮೂರ್ತಿ, ಮುಖ್ಯ ಶಿಕ್ಷಕರಾದ ಜಿಯಾಉಲ್ಲಾಖಾನ್, ಪದವಿ ಪೂರ್ವ ಕಾಲೇಜಿನ ವಾಣಿಜ್ಯ ವಿಭಾಗದ ಮುಖ್ಯಸ್ಥರಾದ ಜೆ.ವಿ. ಚಂದ್ರಶೇಖರ್, ವಾಣಿಜ್ಯ ವಿಭಾಗದ ಮುಖ್ಯಸ್ಥರಾದ ಸಿ.ಪಿ ಪ್ರಕಾಶ್, ಪ್ರಾಧ್ಯಾಪಕರಾದ ವೆಂಕಟೇಶ್, ಶ್ರೀನಿವಾಸ್, ಮಂಜುನಾಥ್,ಶೈಕ್ಷಣಿಕ ಘಟಕಗಳ ಮುಖ್ಯಸ್ಥರುಗಳು,ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಹಾಜರಿದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು