LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Entertainment News

ಆದಿತ್ಯ ಶಶಿಕುಮಾರ್ ಹುಟ್ಟುಹಬ್ಬಕ್ಕೆ "ರಾಶಿ" ಉಡುಗೊರೆ

ಹಲವು ಗಣ್ಯರಿಂದ ಶೀರ್ಷಿಕೆ ಅನಾವರಣ .ಧುವನ್ ಫಿಲಂಸ್ ಲಾಂಛನದಲ್ಲಿ ನಿರ್ಮಾಣವಾಗುತ್ತಿರುವ , ವಿಜಯ್ ಪಾಳೇಗಾರ್ ನಿರ್ದೇಶಿಸುತ್ತಿರುವ ಹಾಗೂ ಸುಪ್ರೀಂ ಹೀರೋ ಶಶಿಕುಮಾರ್ ಅವರ ಪುತ್ರ ಆದಿತ್ಯ ಶಶಿಕುಮಾರ್ ನಾಯಕನಾಗಿ ನಟಿಸುತ್ತಿರುವ ನೂತನ ಚಿತ್ರದ ಶೀರ್ಷಿಕೆ ಅನಾವರಣ ಸಮಾರಂಭ ಇತ್ತೀಚೆಗೆ ಅದ್ದೂರಿಯಾಗಿ ನೆರವೇರಿತು. ಈ ಸುಂದರ ಪ್ರೇಮ ಕಥಾನಕಕ್ಕೆ "ರಾಶಿ" ಎಂದು ಹೆಸರಿಡಲಾಗಿದೆ.

ಆದಿತ್ಯ ಶಶಿಕುಮಾರ್ ಅವರ ಹುಟ್ಟುಹಬ್ಬದ ದಿನವೇ ಈ ಚಿತ್ರದ ಶೀರ್ಷಿಕೆ ಅನಾವರಣ ಮಾಡುವ ಮೂಲಕ ನಾಯಕನಿಗೆ ಚಿತ್ರತಂಡ ವಿಶೇಷ ಉಡುಗೊರೆ ನೀಡಿದೆ. ರಾಜ್ಯಸಭಾ ಸದಸ್ಯರು ಹಾಗೂ ಕರ್ನಾಟಕ ಪ್ರದೇಶ ಕಾಂಗ್ರೆಸ್ ಕಮಿಟಿಯ ಕಾರ್ಯಾಧ್ಯಕ್ಷರಾದ ಜಿ.ಎಸ್.ಚಂದ್ರಶೇಖರ್, ನಟ ಶಶಿಕುಮಾರ್, ಬೆಂಗಳೂರು ಪೊಲೀಸ್ ಉಪ ಆಯುಕ್ತರಾದ ಸಿದ್ದರಾಜು, ಮಂಡ್ಯ ಜಿಲ್ಲಾ ಕಾಂಗ್ರೆಸ್ ಕಾರ್ಯಾಧ್ಯಕ್ಷರಾದ ಎಸ್ ಚಿದಂಬರ್ ಸೇರಿದಂತೆ ಮುಂತಾದ ಗಣ್ಯರು ಈ ಚಿತ್ರದ ಶೀರ್ಷಿಕೆ ಅನಾವರಣ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದರು. ಆನಂತರ ಚಿತ್ರತಂಡದ ಸದಸ್ಯರು ಮಾತನಾಡಿದರು.

ಇದು ನಾನು ನಾಯಕನಾಗಿ ನಟಿಸುತ್ತಿರುವ ಮೂರನೇ ಚಿತ್ರ ಎಂದು ಮಾತನಾಡಿದ ನಾಯಕ ಆದಿತ್ಯ ಶಶಿಕುಮಾರ್, ಈ ಚಿತ್ರದ ಕಥೆ ಬಹಳ ಚೆನ್ನಾಗಿದೆ. ನನ್ನ ಹುಟ್ಟುಹಬ್ಬದ ದಿನ ಈ ಚಿತ್ರದ ಶೀರ್ಷಿಕೆ ಅನಾವರಣವಾಗಿದ್ದು ಖುಷಿಯಾಗಿದೆ. ಇಷ್ಟು ದಿನ ಅಕ್ಷಿತ್ ಶಶಿಕುಮಾರ್ ಆಗಿದ್ದ ನಾನು, ಈಗ ಆದಿತ್ಯ ಶಶಿಕುಮಾರ್ ಎಂದು ಹೆಸರು ಬದಲಿಸಿಕೊಂಡಿದ್ದೇನೆ. ಇನ್ನು ಮುಂದೆ ಎಲ್ಲರೂ ಆದಿತ್ಯ ಶಶಿಕುಮಾರ್ ಎಂದೇ ಕರೆಯಬೇಕೆಂದು ವಿನಂತಿಸುತ್ತೇನೆ ಎಂದರು.

ಮಂತ್ರಾಲಯದಲ್ಲಿ ರಾಯರ ದರ್ಶನ ಮುಗಿಸಿಕೊಂಡು ಬರುವಾಗ ನಿರ್ಮಾಪಕ ಅಖಿಲೇಶ್ ಅವರು ನನ್ನನ್ನು ಕರೆದು ಈ ಚಿತ್ರವನ್ನು ನಿರ್ದೇಶಿಸಬೇಕೆಂದರು. ಅಖಿಲೇಶ್ ಅವರೆ ಈ ಚಿತ್ರದ ಕಥೆ ಬರೆದಿದ್ದಾರೆ. ನಾನು ಚಿತ್ರಕಥೆ, ಬರೆದು, ಗೀತರಚನೆ ಮಾಡಿ, ಸಂಗೀತ ನಿರ್ದೇಶನದೊಂದಿಗೆ ನಿರ್ದೇಶನನ್ನು ಮಾಡುತ್ತಿದ್ದೇನೆ. "ಟ್ರಿಗರ್" ಚಿತ್ರದ ನಂತರ ನಾನು ನಿರ್ದೇಶಿಸುತ್ತಿರುವ ಎರಡನೇ ಚಿತ್ರವಿದು.

ಇನ್ನು ಈ ಚಿತ್ರಕ್ಕೆ ಅಭಿನಂದನ್ ದೇಶಪ್ರಿಯ ಸಂಭಾಷಣೆ, ನವೀನ್ ಸೂರ್ಯ ಛಾಯಾಗ್ರಹಣ, ಕೆ.ಎಂ.ಪ್ರಕಾಶ್ ಸಂಕಲನ, ಮಂಜು ಮಹದೇವ್ ಹಿನ್ನೆಲೆ ಸಂಗೀತ ಹಾಗೂ ಬಂಡೆ ಚಂದ್ರು ಅವರ ಸಾಹಸ ನಿರ್ದೇಶನವಿದೆ. ಇತ್ತೀಚಿಗೆ ಪಂಚಮುಖಿ ಗಣಪತಿ ದೇವಸ್ಥಾನದಲ್ಲಿ ಮುಹೂರ್ತ ಸಮಾರಂಭ ನಡೆದಿದೆ. ಈ ಪ್ರೇಮ ಕಥಾನಕಕ್ಕೆ ಸದ್ಯದಲ್ಲೇ ಚಿತ್ರೀಕರಣ ಆರಂಭವಾಗಲಿದೆ ಎಂದು ನಿರ್ದೇಶಕ ವಿಜಯ್ ಪಾಳೇಗಾರ್ ತಿಳಿಸಿದರು.ಚಿತ್ರದ ನಾಯಕಿ ಸಮೀಕ್ಷ, ನಿರ್ಮಾಪಕ ಅಖಿಲೇಶ್, ಕಲಾವಿದರಾದ ಕರಿಸುಬ್ಬು, ಉಗ್ರಂ ರವಿ, ಹುಲಿ ಕಾರ್ತಿಕ್ ಮುಂತಾದವರು "ರಾಶಿ" ಚಿತ್ರದ ಬಗ್ಗೆ ಮಾತನಾಡಿದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು