LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Bangalore Urban

ಆರನೇ ವರ್ಷದ ಅಂಬರೀಷ್ ಪುಣ್ಯ ಸ್ಮರಣೆ

ಬೆಂಗಳೂರು: ರೆಬೆಲ್ ಸ್ಟಾರ್ ಅಂಬರೀಷ್ ನಿಧನರಾಗಿ ಇಂದಿಗೆ 6 ವರ್ಷಗಳಾಗಿವೆ. ಇಂದಿಗೂ ಸಹ ಅಭಿಮಾನಿಗಳು ಹಾಗೂ ಕುಟುಂಬದವರು ಅವರನ್ನು ಸ್ಮರಿಸುತ್ತಿದ್ದಾರೆ. ಅಂಬರೀಶ್​ ಅವರ ಆರನೇ ವರ್ಷದ ಪುಣ್ಯ ಸ್ಮರಣೆ ಆದ ಇಂದು, ಪತ್ನಿ ಸುಮಲತಾ ಅವರು ಅಂಬರೀಶ್ ಅವರನ್ನು ನೆನಪು ಮಾಡಿಕೊಂಡಿದ್ದಾರೆ. ಕುಟುಂಬಸ್ಥರು ನಗರದ ಕಂಠೀರವ ಸ್ಟುಡಿಯೊದಲ್ಲಿರುವ ಸಮಾಧಿ ಬಳಿ ತೆರಳಿ ಪೂಜೆ ಸಲ್ಲಿಸಿದ್ದಾರೆ.

ತಮ್ಮ ಪತಿಯನ್ನು ನೆನೆದು ಪೋಸ್ಟ್ ಹಂಚಿಕೊಂಡಿರುವ ಸುಮಲತಾ, ‘ನಿಮ್ಮ ಪ್ರೀತಿ, ನಿಮ್ಮ ಇರುವಿಕೆ ಶಾಶ್ವತ… ಸದಾ ಜನರ ಮಧ್ಯೆ ಇದ್ದು ಸ್ಪಂದನೀಯ ವ್ಯಕ್ತಿತ್ವದೊಂದಿಗೆ ನಮ್ಮೊಂದಿಗಿದ್ದ ಡಾ. ಅಂಬರೀಶ್ ಅವರ ಪುಣ್ಯ ಸ್ಮರಣೆಯಂದು ಅವರನ್ನು ಗೌರವ, ಪ್ರೀತಿ, ಭಕ್ತಿಪೂರ್ವಕವಾಗಿ ಸ್ಮರಿಸುತ್ತಿದ್ದೇನೆ. ನಾಡು, ನುಡಿಗೆ ಅವರು ಸಲ್ಲಿಸಿದ ಸೇವೆಗಳು, ಅವರು ಕಲಿಸಿದ ಜೀವನ ಪಾಠಗಳು ಸದಾ ನಮ್ಮನ್ನು ಕಾಯಲಿವೆ, ಅವರಿಗೆ ಜನಮಾನಸದಲ್ಲಿ ದೊರಕುತ್ತಿರುವ ಅಭಿಮಾನ ನಮ್ಮ ಕುಟುಂಬಕ್ಕೆ ನಿರಂತರ ಆಶೀರ್ವಾದ. ಇದಕ್ಕೆ ನಾವೆಲ್ಲಾ ಚಿರಋಣಿ’ ಎಂದಿದ್ದಾರೆ.

ನೀವು ಪ್ರತಿ ಹೃದಯ ಬಡಿತದಲ್ಲಿ ನೆಲೆಸಿದ್ದೀರಿ, ಎಲ್ಲೆಲ್ಲೂ ಇದ್ದೀರಿ, ಪ್ರತಿ ಹುಟ್ಟಿನಲ್ಲೂ ಇದ್ದೀರಿ. ಈಗ ನೀವು ಮರಳಿ ಬಂದಿದ್ದೀರಿ’ ಎಂದಿದ್ದಾರೆ ಸುಮಲತಾ. ಅಂಬರೀಶ್ ಪುತ್ರ ಅಭಿಷೇಕ್ ಅಂಬರೀಶ್ ಇತ್ತೀಚೆಗಷ್ಟೆ ತಂದೆಯಾಗಿದ್ದು ಅವರಿಗೆ ಗಂಡು ಮಗು ಜನಿಸಿದೆ. ಅಂಬರೀಶ್ ಅವರೇ ಮತ್ತೆ ಹುಟ್ಟಿಬಂದಿದ್ದಾರೆ ಎಂದು ಅವರ ಅಭಿಮಾನಿಗಳು ಮಾತನಾಡಿಕೊಳ್ಳುತ್ತಿದ್ದಾರೆ.

ಅಂಬರೀಶ್ ಅವರ ಅಭಿಮಾನಿಗಳು ಅವರ ಸಮಾಧಿಗೆ ಭೇಟಿ ನೀಡಿ ವಿಶೇಷ ಪೂಜೆಯನ್ನು ಮಾಡಿದ್ದಾರೆ. ಅಂಬರೀಶ್ ಅವರು 2018 ರ ನವೆಂಬರ್ 24 ರಂದು ಹೃದಯಾಘಾತದಿಂದ ನಿಧನ ಹೊಂದಿದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು