LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Kolar

ಆರೋಗ್ಯಕರ ಅನುಕೂಲ ಜಾತಿಗಣತಿ ಜಾರಿ ಬಗ್ಗೆ ಆಹಾರ ಸಚಿವ ಕೆ.ಹೆಚ್. ಮುನಿಯಪ್ಪ ಪ್ರತಿಕ್ರಿಯೆ

ಕೋಲಾರ: ಜಾತಿಗಣತಿ ಜಾರಿಯಿಂದ ಎಲ್ಲಾ ವರ್ಗದವರಿಗೂ ಸಾಮಾಜಿಕ ನ್ಯಾಯ ಸಿಗುತ್ತದೆ ಮತ್ತು ಆರೋಗ್ಯ ಕರವಾಗಿರುತ್ತದೆ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಕೆ.ಎಚ್. ಮುನಿಯಪ್ಪ ತಿಳಿಸಿದ್ದಾರೆ.

ಕೋಲಾರದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಈ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಜಾತಿಗಣತಿಯೂ ಎಲ್ಲಾರಿಗೂ ಅನುಕೂಲಕರವಾಗಲಿದೆ ಎಂದಿದ್ದಾರೆ.ಹಿಂದುಳಿದ ವರ್ಗದ ಜಾತಿಗಳಲ್ಲಿ ನೂರಾರು ಉಪಜಾತಿಗಳಿದ್ದು ಅವರಿಗೆ ಜಾತಿಗಣತಿ ವರದಿಯಿಂದ ಅನುಕೂಲವಾಗುತ್ತದೆ. ಹಾಗಾಗಿ ಜಾತಿಗಣತಿ ವರದಿ ಸಂಬಂಧ ಸಂಪುಟ ಸಭೆಯಲ್ಲಿ ಸುದೀರ್ಘವಾಗಿ ಚರ್ಚೆ ನಡೆಸಲಾಗುವುದು.

ಎಲ್ಲರ ಅಭಿಪ್ರಾಯವನ್ನು ಪಡೆದು ವರದಿಯಲ್ಲಿ ಲೋಪದೋಷಗಳಿದ್ದರೆ ಮುಖ್ಯಮಂತ್ರಿ ಗಳು ಸರಿಪಡಿಸಿ ಅಂತಿಮ ತೀರ್ಮಾನಕ್ಕೆ ಬರುತ್ತಾರೆ ಎಂದು ಹೇಳಿದ್ದಾರೆ.
ಇದೇ ಸಂದರ್ಭದಲ್ಲಿ ದಲಿತ ಮುಖ್ಯಮಂತ್ರಿ ಕೂಗು ಕೇಳುತ್ತಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು, ಇದುವರೆಗೂ ರಾಜ್ಯದಲ್ಲಿ ದಲಿತ ಮುಖ್ಯಮಂತ್ರಿಯಾಗಿಲ್ಲ. ಮಲ್ಲಿಕಾರ್ಜುನ ಖರ್ಗೆ ಅವರು ಕಾಂಗ್ರೆಸ್ ಪಕ್ಷದ ರಾಜ್ಯಾಧ್ಯಕ್ಷರಾದಾಗಲಿಂದ ಈ ಮಾತು ಕೇಳಿಬರುತ್ತಿದೆ.

ಖರ್ಗೆ ಅವರಿಗಿಂತ ಹಿರಿಯ ನಾಯಕರು ಯಾರು ಪಕ್ಷದಲಿಲ್ಲ. ಅವರಿಗಿಂತ ಹಿರಿಯರು ಪಕ್ಷದಲ್ಲಿ ಯಾರಿದ್ದಾರೆ ಎಂದು ಪ್ರಶ್ನಿಸಿದ ಸಚಿವರು ಇದೀಗ ಮುಖ್ಯಮಂತ್ರಿ ಸ್ಥಾನ ಖಾಲಿಯಿಲ್ಲ. ನಾವೆಲ್ಲರೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಇದ್ದೇವೆ. ಬಿಜೆಪಿ ಹುನ್ನಾರವನ್ನು ಎದುರಿಸುತ್ತೇವೆ. ಮುಖ್ಯಮಂತ್ರಿ ಸ್ಥಾನದ ಬಗ್ಗೆ ಹೈಕಮಾಂಡ್ ವರಿಷ್ಠರು ನಿರ್ಧರಿಸುತ್ತಾರೆ ಎಂದು ಅವರುಇದೇ ಸಂದರ್ಭದಲ್ಲಿ ತಿಳಿಸಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು