LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Sports News

ಆಸ್ಟ್ರೇಲಿಯಾ ವಿರುದ್ಧ ಪ್ರಥಮ ಟೆಸ್ಟ್‍ಗೆ ಇಬ್ಬರು ಹೊಸಬರಿಗೆ ಅವಕಾಶ?

ಪ್ರವಾಸಿ ನ್ಯೂಜಿಲೆಂಡ್ ವಿರುದ್ಧ ಐತಿಹಾಸಿಕ ಸರಣಿ ಸೋಲಿನ ಬಳಿಕ ಇದೀಗ ಟೀಂ ಇಂಡಿಯಾ ಬಾರ್ಡರ್ ಗವಾಸ್ಕರ್ ಟ್ರೋಫಿ ಟೂರ್ನಿಯಲ್ಲಿ ಆಸ್ಚ್ರೇಲಿಯಾವನ್ನು ಎದುರಿಸಲು ಸಜ್ಜಾಗಿದೆ. ಮೊದಲ ಟೆಸ್ಟ್ ಪಂದ್ಯ ನವೆಂಬರ್ 22ರಂದು ಪರ್ತ್ ನಲ್ಲಿ ಪ್ರಾರಂಭ ಆಗಲಿದೆ.

ತಂಡದ ನಾಯಕ ರೋಹಿತ್ ಶರ್ಮಾ ಅಲಭ್ಯರಾಗಿರುವ ಹಿನ್ನೆಲೆಯಲ್ಲಿ ಉಪನಾಯಕ ಜಸ್ಪ್ರೀತ್ ಬುಮ್ರಾ ಅವರು ತಂಡವನ್ನು ಮುನ್ನಡೆಸಲಿದ್ದಾರೆ.
ಏತನ್ಮಧ್ಯೆ ಭಾರತಕ್ಕೆ ಮತ್ತೊಂದು ಹೊಡೆತವೆಂದರೆ 3ನೇ ಕ್ರಮಾಂಕದ ಬ್ಯಾಟರ್ ಶುಭಮನ್ ಗಿಲ್ ಅವರು ಹೆಬ್ಬೆರಳು ಗಾಯದ ಸಮಸ್ಯೆಯಿಂದ ಬಳಲುತ್ತಿದ್ದು ಪಂದ್ಯದಲ್ಲಿ ಆಡುತ್ತಿಲ್ಲ.

ಹೀಗಾಗಿ ಭಾರತಕ್ಕೆ ಇದೀಗ ಆರಂಭಿಕ ಮತ್ತು 3ನೇ ಕ್ರಮಾಂಕದ ಬ್ಯಾಟರ್ ಇಬ್ಬರನ್ನೂ ಹೊಂದಿಸಬೇಕಾದ ಅನಿವಾರ್ಯತೆ ಎದುರಾಗಿದೆ.
ರೋಹಿತ್ ಶರ್ಮಾ ಅವರಿಗೆ ಗಂಡು ಮಗುವಿನ ಜನನ ಆಗಿರುವುದರಿಂದ ಅವರು ಮುಂಬೈನಲ್ಲಿ ತಮ್ಮ ಕುಟುಂಬದೊಂದಿಗೆ ಕಾಲ ಕಳೆಯುತ್ತಿದ್ದಾರೆ. 5 ಟೆಸ್ಟ್ ಪಂದ್ಯಗಳ ಸರಣಿಗೆ ಅವರು ಯಾವಾಗ ಲಭ್ಯರಾಗುತ್ತಾರೆ ಎಂಬ ಬಗ್ಗೆ ಯಾವುದೇ ಸ್ಪಷ್ಟತೆ ಇಲ್ಲ. ಆದರೆ ಮೊದಲನೇ ಟೆಸ್ಟ್ ಗೆ ಲಭ್ಯರಿಲ್ಲ ಎಂಬುದು ಖಚಿತವಾಗಿದೆ.

ರೋಹಿತ್ ಬದಲಿಗೆ ಅಭಿಮನ್ಯುಈ ಮೊದಲು ರೋಹಿತ್ ಅವರು ಲಭ್ಯರಿಲ್ಲ ಎಂಬ ಕಾರಣಕ್ಕೆ ಅನುಭವೀ ಆಟಗಾರ ಕೆಎಲ್ ರಾಹುಲ್ ಅವರನ್ನು ಆರಂಭಿಕನಾಗ ಕಳಿಸುವ ಚಿಂತನೆ ಇತ್ತು. ಆದರೆ ಇದೀಗ ಗಿಲ್ ಅವರೂ ಲಭ್ಯ ಇಲ್ಲದ ಹಿನ್ನೆಲೆಯಲ್ಲಿ ಕೆಎಲ್ ರಾಹುಲ್ ಅವರು 3ನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ನಡೆಸುವ ಸಾಧ್ಯತೆಗಳಿವೆ. ಆರಂಭಿಕನಾಗಿ ಯಶಸ್ವಿ ಜೈಸ್ವಾಲ್ ಅರ ಜೊ ತೆಗೆ ಅಭಿಮನ್ಯು ಈಶ್ವರನ್ ಅವರು ಕಣಕ್ಕಿಳಿಯುವ ಸಾಧ್ಯತೆ ಇದೆ. ಹಾಗೊಂದು ವೇಳೆ ಹಾಗಾದರೆ ಅಭಿಮನ್ಯು ಈಶ್ವರನ್ ಅವರಿಗೆ ಇದು ಪ್ರಥಮ ಪಂದ್ಯವಾಗಲಿದೆ.

ಹಿರಿಯ ಆಟಗಾರ ವಿರಾಟ್ ಕೊಹ್ಲಿ ಅವರು 4ನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಗೆ ಇಳಿಯಲಿದ್ದಾರೆ. ಬಹಳ ಸಮಯದಿಂದ ಅವರಿಂದ ಸಾಮರ್ಥ್ಯಕ್ಕೆ ತಕ್ಕ ಪ್ರದರ್ಶನ ಬಂದಿಲ್ಲ. ಹೀಗಾಗಿ ಅವರು ಲಯಕ್ಕೆ ಮರಳಲು ಈ ಸರಣಿ ಉತ್ತಮ ಅವಕಾಶವಾಗಿದೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು