LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Bangalore Rural

ಆ. 15 ರಂದು ಶ್ರೀ ನಾರಾಯಣ ಪಿರಮಿಡ್ ಧ್ಯಾನ ಮಂದಿರ ಉದ್ಘಾಟನೆ: ನಾದ ಧ್ಯಾನ ಯಜ್ಞ ಕ್ಕೆ ಚಾಲನೆ

ದೊಡ್ಡಬಳ್ಳಾಪುರ: ತಾಲ್ಲೂಕಿನ ಜನತೆಯ ಮಾನಸಿಕ ಹಾಗೂ ದೈಹಿಕ ಆರೋಗ್ಯ ಕಾಪಾಡುವ ನಿಟ್ಟಿನಲ್ಲಿ ಆಗಸ್ಟ್ 15 ರಂದು ಬ್ರಹ್ಮಶ್ರೀ ಪತ್ರೀಜಿ ರವರ ಮಾರ್ಗದರ್ಶನದೊಂದಿಗೆ ದೊಡ್ಡಬಳ್ಳಾಪುರ ನಾದ ಧ್ಯಾನ ಯಜ್ಞ 3ರ ಅಡಿಯಲ್ಲಿ ಶ್ರೀ ನಾರಾಯಣ ಪಿರಮಿಡ್ ಧ್ಯಾನ ಮಂದಿರದ ಉದ್ಘಾಟನಾ ಕಾರ್ಯಕ್ರಮ ನಡೆಯಲಿದೆ ಎಂದು ಮಂದಿರದ ಮುಖ್ಯಸ್ಥ ಬಿ.ಎನ್. ಅಶ್ವಥ್ ನಾರಾಯಣ ತಿಳಿಸಿದರು.

ನಗರದ ಧ್ಯಾನ ಮಂದಿರದಲ್ಲಿ ನಡೆದ ಸುದ್ದಿಗೋಷ್ಠಿ ಯಲ್ಲಿ ಅವರು ಮಾತನಾಡಿದರು. ಪ್ರಸ್ತುತ ಸಮಾಜದಲ್ಲಿ ಸಾಮಾನ್ಯ ಜನತೆ ಹಲವಾರು ತೊಂದರೆಗಳಿಂದ ಬಳಲುತ್ತಿದ್ದಾರೆ. ಸರ್ವ ಸಮಸ್ಯೆಗೂ ರಾಮಬಾಣದಂತೆ ಕೆಲಸ ಮಾಡುವ ಪಿರಮಿಡ್ ಧ್ಯಾನದ ತರಬೇತಿಯನ್ನು ಉಚಿತವಾಗಿ ನಮ್ಮ ಧ್ಯಾನ ಮಂದಿರದಲ್ಲಿ ಆಯೋಜನೆ ಮಾಡಲಾಗಿದ್ದು. ಆಗಸ್ಟ್ 15ರಂದು ಧ್ಯಾನ ಮಂದಿರದ ಉದ್ಘಾಟನಾ ಕಾರ್ಯಕ್ರಮ ನೆರವೇರಲಿದೆ ಎಂದರು.

ಕಾರ್ಯಕ್ರಮದಲ್ಲಿ 4000ಕ್ಕೂ ಅಧಿಕ ಮಂದಿ ಭಾಗವಹಿಸುವ ನಿರೀಕ್ಷೆಯಿದ್ದು ಸಕಲ ಸಿದ್ಧತೆ ನಡೆದಿದೆ. ನಾದ ಧ್ಯಾನ ಯಜ್ಞ 3ರ ಅಡಿಯಲ್ಲಿ ಆಸಕ್ತರಿಗೆ ಉಚಿತವಾಗಿ
ಪಿರಮಿಡ್ ಧ್ಯಾನವನ್ನು ಮುಖ್ಯ ತರಬೇತುದಾರರಾದ ಅಯ್ಯಪ್ಪ ಪಿಂಡಿ ರವರ ನೇತೃತ್ವದಲ್ಲಿ ಆಯೋಜನೆ ಮಾಡಿದ್ದುತಾಲೂಕಿನ ಸಾರ್ವಜನಿಕರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳುವಂತೆ ಮನವಿ ಮಾಡಿದರು.

ಮುಖ್ಯ ತರಬೇತುದಾರ ಅಯ್ಯಪ್ಪ ಪಿಂಡಿ ಮಾತನಾಡಿ ಅತ್ಯಂತ ಪ್ರಭಾವಶಾಲಿಯಾದ ಪಿರಮಿಡ್ ಧ್ಯಾನವು ಸರ್ವರಿಗೂ ಲಭಿಸಲಿ ಎಂಬ ಸದುದ್ದೇಶದಿಂದ ಈ ಕಾರ್ಯಕ್ರಮದ ಆಯೋಜನೆ ಮಾಡಲಾಗಿದೆ. ಇದು ಮೂರನೇ ಧ್ಯಾನ ಮಂದಿರವಾಗಿದ್ದು ನಾದ ಧ್ಯಾನ ಯಜ್ಞ ವಿಶೇಷವಾಗಿರುತ್ತದೆ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಈ ಧ್ಯಾನದ ಉಪಯೋಗ ಪಡೆದುಕೊಳ್ಳಬೇಕು ಎಂದರು.

ನಿತ್ಯ ಧ್ಯಾನ ಮಾಡುವ ಮೂಲಕ ಆರೋಗ್ಯ ಸಮಸ್ಯೆ ಹಾಗೂ ಮಾನಸಿಕ ತೊಂದರೆಗಳಿಂದ ದೂರವಿರಬಹುದಾಗಿದೆ. ಕಲುಷಿತ ವಾತಾವರಣದಲ್ಲಿ ನಮ್ಮ ಮನಸ್ಸು ಮತ್ತು ದೇಹದ ಮೇಲೆ ಆಗುವ ದುಷ್ಪರಿಣಾಮಗಳಿಂದ ದೂರವಿರಲು ಧ್ಯಾನ ಅತ್ಯುತ್ತಮ ಮಾರ್ಗವಾಗಿದೆ. ಸರ್ವರೂ ಈ ಮಾರ್ಗವನ್ನು ಅನುಸರಿಸುವಂತೆ ಮನವಿ ಮಾಡಿದರು.

ಧ್ಯಾನ ಮಂದಿರದ ಸಿಬ್ಬಂದಿ ಉಮೇಶಯ್ಯ ಮಾತನಾಡಿಧ್ಯಾನಕ್ಕೆ ಬರುವ ಪ್ರತಿ ಸಾರ್ವಜನಿಕರಿಗೂ ಉಚಿತ ಪ್ರವೇಶ ಕಲ್ಪಿಸಲಾಗಿದ್ದು ಉಪಹಾರದ ವ್ಯವಸ್ಥೆ ಕೂಡ ಮಾಡಲಾಗಿದೆ. ತುಮಕೂರು ಬೆಂಗಳೂರು ಸೇರಿದಂತೆ ಹಲವು ಭಾಗಗಳಲ್ಲಿ ಪಿರಮಿಡ್ ಧ್ಯಾನದ ಲಾಭಗಳನ್ನು ಸಾರ್ವಜನಿಕರು ಪಡೆದಿದ್ದು. ತಾಲೂಕಿನ ಜನತೆಯ ಉಪಯೋಗಕ್ಕಾಗಿ ಈ ಕಾರ್ಯಕ್ರಮದ ಆಯೋಜನೆ ಮಾಡಲಾಗಿದೆ. ನಿರಂತರಧ್ಯಾನ ಆರೋಗ್ಯಕ್ಕೆ ಸಹಕಾರಿಯಾಗಿದೆ ಎಂದರು.
ಪತ್ರಿಕಾಗೋಷ್ಠಿಯಲ್ಲಿ ರಂಗರಾಜು, ಎಲ್. ಕೆ.ನಂದ ಕುಮಾರ್, ಆರ್ ಶ್ರೀನಿವಾಸ್, ಲಿಂಗರಾಜು, ಅರುಣ್ ಕುಮಾರ್, ಹೆಚ್. ಬಿ.ದೊಡ್ಡ ರಂಗಪ್ಪ, ಎ ಚಿತ್ರ ಶ್ರೀ, ಎನ್. ಸವಿತಾ ಸೇರಿದಂತೆ ಹಲವರು ಉಪಸಿತರಿದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು