LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Bangalore Urban

ಇನ್ಫೋಸಿಸ್ ಸಂಸ್ಥೆಗೆ ಕರ್ನಾಟಕ ಐಟಿ ರತ್ನ ಪ್ರಶಸ್ತಿ

ಬೆಂಗಳೂರು: ಬೆಂಗಳೂರು ಟೆಕ್ ಶೃಂಗಸಭೆಯ 27 ನೇ ಆವೃತ್ತಿಯಲ್ಲಿ ಇನ್ಫೋಸಿಸ್ ಕರ್ನಾಟಕ ಐಟಿ ರತ್ನ ಪ್ರಶಸ್ತಿಗಳನ್ನು ಪಡೆದುಕೊಂಡಿದೆ. ಐಟಿ ರತ್ನ ಪ್ರಶಸ್ತಿಯನ್ನು ಸಾಫ್ಟ್‌ವೇರ್ ಟೆಕ್ನಾಲಜಿ ಪಾರ್ಕ್ಸ್ ಆಫ್ ಇಂಡಿಯಾ (ಎಸ್‌ಟಿಪಿಐ) ನೀಡುತ್ತದೆ ಮತ್ತು ರಫ್ತುಗಳಲ್ಲಿ 10,000 ಕೋಟಿ ರೂ.ಗಿಂತ ಹೆಚ್ಚು ಕ್ಲಿಕ್ ಮಾಡಿದ ಕಂಪನಿಗಳಿಗೆ ನೀಡಲಾಗುತ್ತದೆ.

ಅತ್ಯುತ್ತಮ ಸಾಧನೆ ಮಾಡಿರುವ ಇನ್ಫೋಸಿಸ್​​ ಕಂಪನಿಗೆ 'ಕರ್ನಾಟಕದ ಐಟಿ ರತ್ನ', ಅತ್ಯುತ್ತಮ ಐಟಿ ರಫ್ತು ಕಂಪನಿಗಳಾದ ಟಾಟಾ ಕನ್ಸಲ್ಟೆನ್ಸಿ ಸರ್ವೀಸಸ್​, ರಾಬರ್ಟ್​ ಬಾಷ್, ಇಂಟೆಲ್​ ಮುಂತಾದ ಕಂಪನಿಗಳಿಗೆ ಎಸ್​.ಟಿ.ಪಿ.ಐ-ಐಟಿ ಪ್ರಶಸ್ತಿಯನ್ನು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಪ್ರದಾನ ಮಾಡಿದರು. ಅಮೆಜಾನ್ ಡೆವಲಪ್ಮೆಂಟ್ ಸೆಂಟರ್, ಜೆ.ಪಿ.ಮಾರ್ಗನ್ ಸರ್ವೀಸಸ್, ಗೋಲ್ಡನ್ ಸ್ಯಾಕ್ಸ್, ಸ್ಯಾಮ್ಸಂಗ್ ಆರ್ ಆ್ಯಡ್ ಡಿ, ಕ್ವಾಲ್ಕಾಂ ಇಂಡಿಯಾ, ಸ್ನೀಡರ್​ ಎಲೆಕ್ಟ್ರಿಕ್​, ಅಲ್ಟ್ರಾನ್​ ಟೆಕ್​​ ಇಂಡಿಯಾ, ಸ್ಯಾಪ್​ ಲ್ಯಾಬ್ಸ್​​, ವಿಎಂವೇರ್​ ಸಾಫ್ಟ್ವೇರ್ಸ್​​, ಆಕ್ಸೆಂಚರ್ ಸೊಲ್ಯೂಷನ್ಸ್ ಪರವಾಗಿ ಸಂಸ್ಥೆಗಳ ಉನ್ನತಾಧಿಕಾರಿಗಳು ಪ್ರಶಸ್ತಿ ಸ್ವೀಕರಿಸಿದರು.

ಬಳಿಕ ಮಾತನಾಡಿದ ಬೃಹತ್​ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್​, "ಉದ್ಯಮಿಗಳು ಕೇವಲ ವಾಣಿಜ್ಯ ದೃಷ್ಟಿಯ ಲಾಭವನ್ನು ಮಾತ್ರ ನೋಡುತ್ತಿರುವುದಿಲ್ಲ. ತಮ್ಮ ಪರಿಶ್ರಮ ಮತ್ತು ಬದ್ಧತೆಗಳ ಮೂಲಕ ತಂತ್ರಜ್ಞಾನದ ಭವಿಷ್ಯವನ್ನು ಕೂಡ ನಿರ್ಧರಿಸುತ್ತಾರೆ. ಇದರ ಲಾಭ ಕೊನೆಗೆ ಸಮಾಜಕ್ಕೆ ಸಿಗುತ್ತದೆ. ರಾಜ್ಯದಲ್ಲಿ ನೆಲೆಯೂರಿರುವ ಮಾಹಿತಿ ತಂತ್ರಜ್ಞಾನ ವಲಯದ ಕಂಪನಿಗಳು ಈ ನಿಟ್ಟಿನಲ್ಲಿ ಶ್ಲಾಘನೀಯ ಕೆಲಸ ಮಾಡುತ್ತಿವೆ ಎಂದು ಅಭಿಪ್ರಾಯಪಟ್ಟರು. ಎಸ್.ಟಿ.ಪಿ.ಐ. ಏಳು ವರ್ಷಗಳ ಹಿಂದೆಯೇ ರಾಜ್ಯ ಸರಕಾರದ ಸಹಯೋಗದೊಂದಿಗೆ ಬೆಂಗಳೂರಿನಲ್ಲಿ ಸ್ಮಾರ್ಟ್​(ಸೆಮಿಕಂಡಕ್ಟರ್ ಮೆಷರ್ಮೆಂಟ್ ಅನಾಲಿಸಿಸ್ ಆ್ಯಡ್ ರಿಲಾಯಬಿಲಿಟಿ ಟೆಸ್ಟ್) ತೆರೆದಿದೆ. ಇದರಿಂದ ದೇಶದ ಸೆಮಿಕಂಡಕ್ಟರ್ ಮತ್ತು ಇಎಸ್​ಡಿ‌ಎಂ ವಲಯಗಳ ಕಾರ್ಯ ಪರಿಸರ ಸುಧಾರಿಸಿದೆ. ಜೊತೆಗೆ ನವೋದ್ಯಮಗಳು ಮತ್ತು ಸೆಮಿಕಂಡಕ್ಟರ್ ಕಂಪನಿಗಳು ವಿನ್ಯಾಸವನ್ನು ರೂಪಿಸಲು ತೆಗೆದುಕೊಳ್ಳುತ್ತಿದ್ದ ದೀರ್ಘ ಸಮಯಕ್ಕೆ ತೆರೆ ಬಿದ್ದಿದೆ" ಎಂದು ವಿವರಿಸಿದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು