LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Bangalore Urban

ಇ-ಖಾತಾ ಪಡೆಯಲು ಶೀಘ್ರದಲ್ಲೇ BBMPಯಿಂದ ಹೊಸ ಪೋರ್ಟಲ್ ಆರಂಭ..!

 

ಬೆಂಗಳೂರು: ವಂಚನೆಯನ್ನು ತೊಡೆದುಹಾಕಲು ಹಾಗೂ ವಾರ್ಷಿಕ ತೆರಿಗೆ ಸಂಗ್ರಹಣೆಯನ್ನು ಸುಧಾರಿಸಲು ಸುಮಾರು 22 ಲಕ್ಷ ಆಸ್ತಿಗಳನ್ನು ಡಿಜಿಟಲೀಕರಣಗೊಳಿಸಿರುವ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ), ಇದೀಗ ಖಾತಾಗಳನ್ನು ನೀಡದ 5 ಲಕ್ಷ ಆಸ್ತಿಗಳನ್ನು ತೆರಿಗೆ ವ್ಯಾಪ್ತಿಗೆ ತರಲು ಸಿದ್ಥತೆ ನಡೆಸಿದೆ.

ಶುಕ್ರವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಬಿಬಿಎಂಪಿ ಕಂದಾಯ ಆಯುಕ್ತ ಮುನೀಶ್ ಮೌದ್ಗಿಲ್ ಅವರು, ಇ-ಖಾತಾ ಪಡೆಯುವವರಿಗೆ ಪಾಲಿಕೆಯು ಶೀಘ್ರದಲ್ಲೇ ಹೊಸ ಪೋರ್ಟಲ್ ಅನ್ನು ಪ್ರಾರಂಭಿಸಲಿದೆ, ಇದರಿಂದ ಯಾವುದೇ ರೀತಿಯ ಖಾತಾ ಹೊಂದಿಲ್ಲದ ಆಸ್ತಿ ಮಾಲೀಕರಿಗೆ ಹೊಸ ಇ-ಖಾತಾವನ್ನು ಪಡೆಯಲು ಅನುಕೂಲವಾಗಲಿದೆ ಎಂದು ಹೇಳಿದರು.

ಒಂದು ಅಂದಾಜಿನ ಪ್ರಕಾರ, ನಗರದಲ್ಲಿ ಸುಮಾರು 5 ಲಕ್ಷ ಆಸ್ತಿಗಳು ಖಾತಾ ಹೊಂದಿಲ್ಲ. ಅವರು ಇ-ಖಾತಾವನ್ನು ಪಡೆಯಬೇಕು ಮತ್ತು ನಿಯಮಿತವಾಗಿ ತೆರಿಗೆಗಳನ್ನು ಪಾವತಿಸಬೇಕು ಎಂದು ತಿಳಿಸಿದರು.

ನಗರದಲ್ಲಿನ ಸುಮಾರು 5 ಲಕ್ಷ ಸ್ವತ್ತುಗಳು ಖಾತಾ ಪಡೆದಿಲ್ಲ. ಕೆಲವೊಂದು ಆಸ್ತಿಗಳಿಗೂ ಕ್ರಯಪತ್ರವೂ ಇಲ್ಲ. ತೆರಿಗೆ ಕೂಡ ಪಾವತಿಸಿಲ್ಲ. ನಿವೇಶನಕ್ಕಷ್ಟೇ ಖಾತೆ ಪಡೆದಿದ್ದು, ಅದರಲ್ಲಿ ನಿರ್ಮಿಸಿರುವ ಫ್ಲ್ಯಾಟ್‌ಗಳಿಗೆ ಖಾತಾ ಪಡೆದುಕೊಂಡಿಲ್ಲ. ಹೊಸ ಖಾತಾವನ್ನು ಪಡೆಯುವವರು ನೋಂದಣಿ ದಿನಾಂಕದಿಂದ ತೆರಿಗೆ ಬಾಕಿಯನ್ನು ಪಾವತಿಸಬೇಕಾಗುತ್ತದೆ. ಈಗಾಗಲೇ ಖಾತಾ ಹೊಂದಿರುವ ಜನರು ಪೋರ್ಟಲ್‌ನಲ್ಲಿ ಹೊಸ ಖಾತಾಕ್ಕಾಗಿ ಅರ್ಜಿ ಸಲ್ಲಿಸಬಾರದು. ಏಕೆಂದರೆ ಇದು ನಕಲಿಗೆ ಕಾರಣವಾಗಬಹುದು. ಈ ರೀತಿಯ ಸಂಕೀರ್ಣ ಸಮಸ್ಯೆಗಳು ಸಾಕಷ್ಟಿವೆ. ಇಂತಹ ಗೊಂದಲ ಮತ್ತು ಸಮಯದ ನಷ್ಟವನ್ನು ತಪ್ಪಿಸಲು ಪ್ರತ್ಯೇಕ ಮಾರ್ಗಸೂಚಿಯನ್ನು 2-3 ದಿನಗಳಲ್ಲಿ ಬಿಡುಗಡೆ ಮಾಡಲಾಗುವುದು ಎಂದರು.

ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡವರಿಗೆ ಆಸ್ತಿ ಮಾಲೀಕರು ನ.30ರೊಳಗೆ ಬಾಕಿ ತೆರಿಗೆ ಪಾವತಿಸದರೆ ದಂಡ ಮತ್ತು ಬಡ್ಡಿ ಮನ್ನಾ ಆಗಲಿದೆ. ಒಂದು ವೇಲೆ ಬಾಕಿ ತೆರಿಗೆ ಪಾವತಿಸದಿದ್ದರೆ ಡಿ.1ರಿಂದ ಬಾಕಿ ತೆರಿಗೆ ಜೊತೆಗೆ ದುಬಾರಿ ದಂಡ ಮತ್ತು ಬಡ್ಡಿ ವಸೂಲಿ ಮಾಡಲಾಗುವುದು. ವಸತಿಯೇತರ ಆಸ್ತಿಗಳಿಗೆ ಬೀಗ ಮುದ್ರ ಹಾಕಲಾಗುವುದು. ಖಾತಾ ಹೊಂದಿಲ್ಲದ ಆಸ್ತಿಗಳ ಮಾಲೀಕರು ಈಗಲೇ ಎಚ್ಚೆತ್ತುಕೊಂಡು ತೆರಿಗೆ ಪಾವತಿಸಬೇಕು. ಇಲ್ಲದಿದ್ದರೆ ದುಬಾರಿ ಮೊತ್ತ ಪಾವತಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ನಗರದಲ್ಲಿನ ಪ್ರತಿ ಆಸ್ತಿಗಳ ದಾಖಲೆಗಳನ್ನು ಡಿಜಿಟಲೀಕರಣ ಮಾಡಲಾಗುತ್ತಿದೆ. ಜತೆಗೆ ಆಸ್ತಿಗಳನ್ನು ಜಿಪಿಎಸ್ ಮ್ಯಾಪಿಂಗ್ ಮಾಡಲಾಗುತ್ತಿದೆ. ಅದಕ್ಕಾಗಿ ಈ ಹಿಂದೆಯೇ ಡ್ರೋನ್ ಸರ್ವೇ ಮಾಡಿ ನಗರದಲ್ಲಿ ಆಶ್ತಿಗಳ ಚಿತ್ರವನ್ನು ತೆಗೆದುಕೊಂಡು, ನಿರ್ಮಿತ ಪ್ರದೇಶ ಸೇರಿ ಜಿಪಿಎಸ್ ಮ್ಯಾಪಿಂಗ್ ಮಾಡಲಾಗುತ್ತಿದೆ. ಕಾವೇರಿ ತಂತ್ರಾಂಶ, ಬೆಸ್ಕಾಂ, ತೆರಿಗೆ ಪಾವತಿ ರಶೀದಿ, ಆಧಾರ್‌ನೊಂದಿಗೆ ಆಸ್ತಿಗಳನ್ನು ಸಂಯೋಜಿಸಲಾಗುತ್ತಿದೆ. ಹೀಗಾಗಿ, ಯಾರೊಬ್ಬರೂ ಆಸ್ತಿಗಳಿಗೆ ನಕಲಿ ದಾಖಲೆಗಳನ್ನು ಸೃಷ್ಟಿಸಲು ಸಾಧ್ಯವಿಲ್ಲ ಎಂದು ತಿಳಿಸಿದರು,

ಇ-ಖಾತಾ ದಾಖಲೆಯಲ್ಲಿ ಆಸ್ತಿಯ ವಿಸ್ತೀರ್ಣ, ಮಾಲೀಕರ ಹೆಸರು, ಭಾವಚಿತ್ರ, ನಕ್ಷೆ ಹಾಗೂ ಸ್ವತ್ತಿನ ಛಾಯಾಚಿತ್ರವೂ ಇರಲಿದೆ. ಒಂದೇ ನಿವೇಶನವನ್ನು ಹಲವರಿಗೆ ಮಾರಾಟ ಮಾಡುವಂತಹ ವಂಚನೆಗಳಿಗೂ ಕಡಿವಾಣ ಬೀಳಲಿದೆ ಎಂದು ಹೇಳಿದರು.

ಕರಡು ಇ-ಖಾತಾ ಅಥವಾ ಅಂತಿಮ ಇ-ಖಾತಾ ದಾಖಲೆಗಳಲ್ಲಿ ಹೆಸರು, ವಿಸ್ತೀರ್ಣ ಸೇರಿದಂತೆ ಇತರೆ ನ್ಯೂನತೆಗಳಿದ್ದರೆ ಸರಿಪಡಿಸಿಕೊಳ್ಳಲು ಅವಕಾಶವಿದೆ. ಸಂಬಂಧಪಟ್ಟ ಮಾಲೀಕರು ಸೂಕ್ತ ದಾಖಲೆಗಳೊಂದಿಗೆ ಸಹಾಯಕ ಕಂದಾಯ ಅಧಿಕಾರಿ (ಎಆರ್‌ಒ)ಗಳನ್ನು ಭೇಟಿ ಮಾಡಿ, ದೋಷಗಳನ್ನು ತಿದ್ದುಪಡಿ ಮಾಡಿಸಿಕೊಳ್ಳಬಹುದಾಗಿದೆ. ಎಆರ್‌ಒಗಳು ಸ್ಪಂದಿಸದಿದ್ದರೆ, ಮೇಲಕಾರಿಗಳಿಗೆ ಮೇಲ್ಮನವಿ ಸಲ್ಲಿಸಬಹುದು.

ಕೆಲವೇ ದಿನಗಳಲ್ಲಿ ಪಾಲಿಕೆಯು ಇ-ಖಾತಾ ಅರ್ಜಿ ಸಲ್ಲಿಸಲು ಮೊಬೈಲ್ ಅಪ್ಲಿಕೇಶನ್ ಅನ್ನು ಪ್ರಾರಂಭಿಸಲಿದ್ದು, ಆ್ಯಪ್ ನಲ್ಲಿ ಆಸ್ತಿಯ ಚಿತ್ರಗಳನ್ನು ಅಪ್‌ಲೋಡ್ ಮಾಡುವುದು, ಸ್ಥಳವನ್ನು ಜಿಯೋ-ಟ್ಯಾಗ್ ಮಾಡುವಂತಹ ವೈಶಿಷ್ಟ್ಯಗಳನ್ನು ಈ ಆ್ಯಪ್ ಹೊಂದಿರುತ್ತದೆ. ಈಗಾಗಲೇ ಬೆಂಗಳೂರು ಒನ್‌ ಕೇಂದ್ರಗಳಲ್ಲೂ ಅಂತಿಮ ಇ-ಖಾತಾ ಪಡೆಯಲು ಅವಕಾಶ ಕಲ್ಪಿಸಲಾಗಿದೆ. ಅದೇ ರೀತಿ ಮುಂದಿನ 15-30 ದಿನಗಳಲ್ಲಿ ಎಲ್ಲ ಖಾಸಗಿ ಸೇವಾ ಕೇಂದ್ರಗಳಲ್ಲೂ ಅಂತಿಮ ಇ-ಖಾತಾ ಪಡೆಯಲು ಅನುವು ಮಾಡಿಕೊಡಲಾಗುವುದು ಎಂದು ಹೇಳಿದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು