LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Politics News

ಈ ಭಾರೀಯ ಅಧಿವೇಶನದಲ್ಲಿ ಯಾವುದೇ ಅನಾನುಕೂಲವಾಗದಂತೆ ವ್ಯವಸ್ಥೆ ಕಲ್ಪಿಸಿ; ಸತೀಶ್ ಜಾರಕಿಹೊಳಿ ಸೂಚನೆ

ಬೆಳಗಾವಿ: ಡಿಸೆಂಬರ್ 9 ರಿಂದ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಚಳಿಗಾಲ ಅಧಿವೇಶನ ಆರಂಭವಾಗಲಿದ್ದು, ಅಧಿವೇಶದಲ್ಲಿ ಯಾವುದೇ ಅನಾನುಕೂಲಗಳಾಗಂತೆ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಲೋಕೋಪಯೋಗಿ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಅವರು ಸೂಚನೆ ನೀಡಿದರು.

ಜಿಲ್ಲಾಧಿಕಾರಿ ಕಚೇರಿಯಲ್ಲಿ ಶನಿವಾರ ನಡೆದ ಪೂರ್ವಸಿದ್ಧತಾ ಸಭೆಯಲ್ಲಿ, ವಸತಿ, ಸಾರಿಗೆ, ಆಹಾರ ಮತ್ತು ಇತರ ಸೌಲಭ್ಯಗಳಲ್ಲಿ ಯಾವುದೇ ಅನಾನುಕೂಲಗಳಾದಂತೆ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಊಟೋಪಹಾರ ಕಲ್ಪಿಸುವವರಿಗೆ ಮುಂಚಿತವಾಗಿಯೇ ಆದೇಶ ನೀಡುವ ಮೂಲಕ ಉತ್ತಮ ವ್ಯವಸ್ಥೆಯನ್ನು ಖಚಿತಪಡಿಸಬೇಕು. ಇದರೊಂದಿಗೆ ತುರ್ತು ಚಿಕಿತ್ಸೆಗೆ‌ ಅನುಕೂಲವಾಗುವಂತೆ ವೈದ್ಯಕೀಯ ತಂಡಗಳು ಮತ್ತು ಅಂಬುಲೆನ್ಸ್‌ಗಳನ್ನು ನಿಯೋಜಿಸಬೇಕು. ಸುವರ್ಣ ವಿಧಾನಸೌಧದ ಒಳಗಡೆಯ ಕಾರಿಡಾರ್‌ಗಳಲ್ಲಿ ಹಾಗೂ ಮೊಗಸಾಲೆಯಲ್ಲಿ ಪಾವತಿ ಆಧಾರದ ಮೇಲೆ ವಿವಿಧ ಬಗೆಯ ಚಹಾ ಹಾಗೂ ಉಪಹಾರ ವ್ಯವಸ್ಥೆ ಕಲ್ಪಿಸಬೇಕು. ನಗರದ ರಸ್ತೆಗಳು ಸೇರಿದಂತೆ ನಗರ ಪ್ರವೇಶಿಸುವ ರಸ್ತೆಗಳ ದುರಸ್ತಿ ಕಾರ್ಯವನ್ನು ಕೂಡಲೇ ಕೈಗೆತ್ತಿಕೊಂಡು, ಆದಷ್ಟು ಬೇಗ ಪೂರ್ಣಗೊಳಿಸಬೇಕು ಎಂದು ಸೂಚನೆ ನೀಡಿದರು.

ಈ ವೇಳೆ ಮಾತನಾಡಿದ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರು, ವಸತಿ, ಸಾರಿಗೆ ಹಾಗೂ ಊಟೋಪಹಾರ ವ್ಯವಸ್ಥೆ ಸೇರಿದಂತೆ ಸುಗಮ ಅಧಿವೇಶನಕ್ಕಾಗಿ 10 ಸಮಿತಿಗಳನ್ನು ರಚಿಸಲಾಗಿದೆ. ಕಳೆದ ಬಾರಿಯಂತೆ ವಿವಿಧ ಸ್ಥಳಗಳಲ್ಲಿ ಊಟದ ವ್ಯವಸ್ಥೆಯನ್ನು ಮಾಡಲಾಗುತ್ತಿದೆ ಎಂದು ಹೇಳಿದರು.

ಹೈಸ್ಪೀಡ್ ಸಾಮರ್ಥ್ಯದ ಅಂತರ್ಜಾಲ ಸಂಪರ್ಕ, ಕಂಪ್ಯೂಟರ್, ಲೇಖನ ಸಾಮಗ್ರಿಗಳು ಸೇರಿದಂತೆ ಎಲ್ಲಾ ವ್ಯವಸ್ಥೆಯನ್ನು ಮಾಡಿಕೊಳ್ಳಲಾಗಿದೆ. ಪ್ರತಿ ವರ್ಷದಂತೆ ಅಧಿವೇಶನದಲ್ಲಿ ಭಾಗವಹಿಸುವ ಅಧಿಕಾರಿಗಳು, ಸಿಬ್ಬಂದಿ‌ ಮತ್ತು ಕಲಾಪ ವೀಕ್ಷಣೆಗೆ ಆಗಮಿಸುವ ಸಾರ್ವಜನಿಕರಿಗೆ ಪಾಸ್ ವ್ಯವಸ್ಥೆ ಮಾಡಲಾಗುತ್ತಿದೆ. ಸುವರ್ಣ ಸೌಧದ ಮುಖ್ಯ ಪ್ರವೇಶ ದ್ವಾರದಿಂದ ಒಳಗಡೆ ಆವರಣದವರೆಗೆ ಸಾರ್ವಜನಿಕರಿಗೆ ಕರೆದೊಯ್ಯಲು ಉಚಿತ ಬಸ್ ವ್ಯವಸ್ಥೆ ಕೂಡ ಈ ಬಾರಿ ಕಲ್ಪಿಸಲು ನಿರ್ಧರಿಸಲಾಗಿದೆ ಎಂದು ತಿಳಿಸಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಭೀಮಾಶಂಕರ ಗುಳೇದ ಮಾತನಾಡಿ, ಅಂದಾಜು 6 ಸಾವಿರ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸುವ ಮೂಲಕ ಪ್ರತಿವರ್ಷದಂತೆ ಬಿಗಿ ಭದ್ರತೆ ಕಲ್ಪಿಸಲಾಗುವುದು. ಸುವರ್ಣಸೌಧದ ಸುತ್ತಮುತ್ತಲಿನ ಪ್ರತಿಭಟನಾ ಸ್ಥಳಗಳಲ್ಲೂ ಅಗತ್ಯ ಬಂದೋಬಸ್ತ್ ಮಾಡಲಾಗುವುದು. ಇದಲ್ಲದೇ ಸಾರಿಗೆ ನಿರ್ವಹಣೆಗೂ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು ಎಂದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು