LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Entertainment News

ಈ ವಾರ ರಾಣಿ ಬರುತ್ತಾಳೆ

ರಾಣಿ ಚಿತ್ರದ ಕತೆಯನ್ನು ನಿರ್ದೇಶಕ ಮಧುಚಂದ್ರ ಸುಮಾರು 700 ಜನಕ್ಕೆ ಹೇಳಿದ್ದಾರೆ, ಅವರಿಂದ ಫೀಡ್ ಬ್ಯಾಕ್ ತೆಗೆದುಕೊಂಡರು. ಅದರ ವೀಡಿಯೋ ಕೂಡ ಮಾಡಿದರು !! ಈ ಕತೆಯನ್ನು ತುಂಬಾ ಜನರು ಇಷ್ಟಪಡುತ್ತಾರೆ ಎಂದು ಖಚಿತ ಪಡಿಸಿಕೊಂಡ ನಂತರ ಮುಂದಿನ ಹೆಜ್ಜೆ ಇಟ್ಟಿದ್ದಾರೆ. ಅವರ ಈ ಪ್ರಾಮಾಣಿಕ ಮತ್ತು ವಿಭಿನ್ನ ಪ್ರಯತ್ನ ನೋಡಿ ಅವರಿಗೆ 150 ಜನ ಫ್ಯಾಮಿಲಿಗಳು ಸೇರಿ ಚಿತ್ರ ನಿರ್ಮಿಸಲು ಮುಂದೆ ಬಂದರು.

ಚಿತ್ರದ ರಿಲೀಸ್ ಮುಂಚೆಯೇ ಚಿತ್ರತಂಡದ 150 ಜನ ನಿರ್ಮಾಪಕರು ತಮ್ಮ ಫ್ಯಾಮಿಲಿ, ನೆಂಟರು, ಗೆಳೆಯರು ಎಲ್ಲರನ್ನೂ ಸೇರಿದಂತೆ ಸುಮಾರು 2 ಸಾವಿರ ಜನಕ್ಕೆ ಈಗಾಗಲೇ ಸಿನಿಮಾ ತೋರಿಸಿದ್ದಾರೆ. ಅವರೆಲ್ಲ ನೋಡಿ ಭೇಷ್ ಹೇಳಿದ ನಂತರವೇ ಸಿನಿಮಾ ಪ್ರಚಾರಕ್ಕೆ ಲಕ್ಷಗಟ್ಟಲೆ ಧೈರ್ಯವಾಗಿ ಸುರಿದಿದ್ದಾರೆ. ತಮ್ಮ ಚಿತ್ರವನ್ನು ಮೊದಲೇ ಪ್ರೇಕ್ಷಕರಿಗೆ ತೋರಿಸಿ ಸಣ್ಣಪುಟ್ಟ ತಪ್ಪುಗಳನ್ನು ಸರಿಪಡಿಸಿ ನಂತರ ಇಡೀ ಕನ್ನಡ ಪ್ರೇಕ್ಷಕರ ಮುಂದೆ ಸಿನಿಮಾ ರಿಲೀಸ್ ಮಾಡುವ ವಿಧಾನವನ್ನು ನಿರ್ದೇಶಕ ಮಧುಚಂದ್ರ ಅವರಿಗೆಲ್ಲಾ ಹೇಳಿದಾಗ ಎಲ್ಲರಿಗೂ ಇದು ಸರಿ ಎನ್ನಿಸಿ ಹೀಗೆ ಮಾಡಿದ್ದಾರೆ.

ಸುಮಾರು 200 ಜನರಂತೆ 10 ಶೋಸ್ ಗಳನ್ನು ಸಣ್ಣ ಪ್ರಮಾಣದ ಥಿಯೇಟರ್ ನಲ್ಲಿ ಮಾಡಿ ಪರೀಕ್ಷೆ ಮಾಡಿದ್ದಾರೆ.ಇದು ಇಡೀ ಕನ್ನಡ ಚಿತ್ರರಂಗಕ್ಕೆ ಒಂದು ರೀತಿಯಲ್ಲಿ ಹೊಸ ಮಾದರಿ ಮಾರ್ಗವನ್ನು ತೋರಿಸಿಕೊಟ್ಟಿದೆ. ಹೀರೋ ಸೈಕೋ ಜಯಂತ್ ಆಲಿಯಾಸ್ ದೀಪಕ್ ಸುಬ್ರಹ್ಮಣ್ಯ ಈಗಾಗಲೇ ಕರ್ನಾಟಕದ ಎಲ್ಲಾ ಪ್ರಮುಖ ಜಿಲ್ಲೆಗಳಿಗೂ ಭೇಟಿ ನೀಡಿ ಚಿತ್ರದ ಪ್ರಚಾರ ಮಾಡಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು