LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts

ಉಕ್ಕಲಗೆರೆ ಹಾಲು ಉತ್ಪಾದಕರ ಸಹಕಾರ ಸಂಘಕ್ಕೆ ಪರಮೇಶ್ವರ ಅಧ್ಯಕ್ಷ

ತಿ.ನರಸೀಪುರ: ಉಕ್ಕಲಗೆರೆ ಹಾಲು ಉತ್ಪಾದಕರ ಸಹಕಾರ ಸಂಘದ ಆಡಳಿತ ಮಂಡಳಿಗೆ ನೂತನ ಅಧ್ಯಕ್ಷರಾಗಿ ಪರಮೇಶ್ವರ ಹಾಗೂ ಉಪಾಧ್ಯಕ್ಷರಾಗಿ ಜಯಂತಿ ಸಿದ್ದರಾಮು ಅವಿರೋಧವಾಗಿ ಆಯ್ಕೆಯಾದರು.ತಾಲ್ಲೂಕಿನ ಉಕ್ಕಲಗೆರೆ ಹಾಲು ಉತ್ಪಾದಕರ ಸಹಕಾರ ಸಂಘದ ಆಡಳಿತ ಮಂಡಳಿಗೆ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಸ್ಥಾನಕ್ಕೆ ಸಂಘದ ಕಚೇರಿಯಲ್ಲಿ ಚುನಾವಣೆ ನಡೆಸಲಾಯಿತು.

11 ನಿರ್ದೇಶಕರ ಸಂಖ್ಯಾ ಬಲ ಹೊಂದಿರುವ ಸಂಘದಲ್ಲಿ ಅಧ್ಯಕ್ಷ ಸ್ಥಾನಕ್ಕೆ ಪರಮೇಶ್ವರ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಜಯಂತಿ ಸಿದ್ದರಾಮು ರವರ ಮಾತ್ರ ನಾಮಪತ್ರ ಸಲ್ಲಿಸಿದ್ದ ಹಿನ್ನೆಲೆಯಲ್ಲಿ ಚುನಾವಣೆ ಅಧಿಕಾರಿ ಸಿಡಿಓ ಹಸೀನಾ ಅಧ್ಯಕ್ಷರಾಗಿ ಪರಮೇಶ್ವರ ಮತ್ತು ಉಪಾಧ್ಯಕ್ಷರಾಗಿ ಜಯಂತಿ ಸಿದ್ದರಾಮು ಅವಿರೋಧವಾಗಿ ಆಯ್ಕೆಯಾದರೆಂದು ಘೋಷಣೆ ಮಾಡಿದರು.
ಈ ವೇಳೆ ಮಾತನಾಡಿದ ನೂತನ ಅಧ್ಯಕ್ಷ ಪರಮೇಶ್ವರ ಹಾಲು ಉತ್ಪಾದನೆಯ ಗುಣಮಟ್ಟ ಸುಧಾರಣೆಗೆ ಉತ್ತೇಜನ ನೀಡುವುದರ ಜೊತೆಗೆ ರೈತರ ಸಮಸ್ಯೆಗಳಿಗೆ ಪರಿಹಾರಗಳನ್ನು ಒದಗಿಸುವ ನಿಟ್ಟಿನಲ್ಲಿ ಎಲ್ಲಾ ನಿರ್ದೇಶಕರ ಸಹಕಾರ ದೊಂದಿಗೆ ಕೆಲಸ ಮಾಡುತ್ತೇನೆ ಎಂದರು.

ಉಪಾಧ್ಯಕ್ಷೆ ಜಯಂತಿ ಸಿದ್ದರಾಮು ಮಾತನಾಡಿ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಚುನಾವಣೆಯಲ್ಲಿ ಯಾವುದೇ ಭಿನ್ನಾಭಿಪ್ರಾಯವಿಲ್ಲದೆ ಅವಿರೋಧವಾಗಿ ಆಯ್ಕೆಯಾಗಲು ಸಹಕರಿಸಿದ ಹಾಲು ಉತ್ಪಾದಕರ ಸಹಕಾರ ಸಂಘದ ನಿರ್ದೇಶಕರ ಮತ್ತು ರೈತರಿಗೆ ಅಭಿನಂದನೆಗಳು ಎಂದು ಹೇಳಿದರು.ಕಾಂಗ್ರೆಸ್ ಡಿ.ಸಿ.ಸಿ.ಸದಸ್ಯ ಬಸವಣ್ಣ ನೂತನ ಅಧ್ಯಕ್ಷ, ಉಪಾಧ್ಯಕರು ಹಾಗೂ ನಿರ್ದೇಶಕರಿ ಅಭಿನಂದನೆ ಸಲ್ಲಿಸಿದರು ಹಾಗೂ ಎಲ್ಲರೂ ಒಗ್ಗೂಡಿ ಸಂಘದ ಅಭಿವೃದ್ಧಿಗೆ ಶ್ರಮಿಸುವಂತೆ ಕಿವಿ ಮಾತು ಹೇಳಿದರಲ್ಲದೆ ಸಂಘದ ಕಟ್ಟಡ ನಿರ್ಮಾಣಕ್ಕೆ ಸಚಿವ ಡಾ.ಹೆಚ್.ಸಿ.ಮಹದೇವಪ್ಪ ಹಾಗೂ ಸಂಸದ ಸುನಿಲ್ ರವರಿಂದ ಅನುದಾನ ಕೂಡಿಸುವ ಭರವಸೆ ನೀಡಿದರು.

ಚುನಾವಣೆ ಸಭೆಯಲ್ಲಿ ನಿರ್ದೇಶಕರಾದ ನಾಗರಾಜು, ನಾಗೇಶ್, ಶಿವಸ್ವಾಮಿ, ಮಹದೇವ ಸ್ವಾಮಿ, ಶಿವಸ್ವಾಮಿ, ಜಯಮ್ಮ, ಉಷಾ, ಜೆ.ಮಹದೇವಪ, ನಾಗೇಂದ್ರ ಕಾರ್ಯದರ್ಶಿ ಮಣಿಕಂಠ, ಮುಖಂಡರುಗಳಾದ ಕಾಂಗ್ರೆಸ್ ಮುಖಂಡ ಉಕ್ಕಲಗೆರೆಬಸವಣ್ಣ, ಮಂಜುನಾಥ್, ರವಿಶಂಕರ್, ನಾಗೇಂದ್ರ, ಪಾಪಣಿ ನಾಗರಾಜು, ರವಿ, ಮಹದೇಸ್ವಾಮಿ, ಮನು, ನಿಂಗರಾಜು ಸಿದ್ದರಾಮು, ಪ್ರಭುಸ್ವಾಮಿ ಡೈರಿ ಮಹದೇವಸ್ವಾಮಿ, ಮಲ್ಲೇಶ, ಮಹದೇವಪ್ಪ, ನಾಗೇಂದ್ರ ಮಹದೇವಶೆಟ್ಟಿ, ಮಾಧು, ರುದ್ರ ಮಹದೇವಸ್ವಾಮಿ, ಯು. ಬಿ. ಎಂ.ಮಹದೇವಪ್ಪ, ಮಲ್ಲಣ್ಣ ಸೇರಿದಂತೆ ಮತ್ತಿತರರು ಹಾಜರಿದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು