LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts

ಉಚಿತ ವಿಶೇಷ ತರಗತಿ ಪ್ರಾರಂಭ

ಹನೂರು: ಹೊಸ ವರ್ಷದ ಹೊಸ್ತಿಲಿನಲ್ಲಿ ಶ್ರೀ ಧರ್ಮಸ್ಥಳ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಎಸ್.ಎಸ್.ಎಲ್.ಸಿ.ಮಕ್ಕಳಿಗೆ ಸಹಾಯವಾಗುವ ನಿಟ್ಟಿನಲ್ಲಿ ಉಚಿತ ವಿಶೇಷ ತರಬೇತಿ ತರಗತಿಗಳನ್ನು ನಡೆಸಲು ಪೂಜ್ಯರಾದ ವೀರೇಂದ್ರ ಹೆಗ್ಡೆ ಹಾಗೂ ಹೇಮಾವತಿ ಹೆಗ್ಡೆಯವರು ಮಾರ್ಗದರ್ಶನ ನೀಡಿದ್ದಾರೆ ಎಂದು ಶ್ರೀ ಧರ್ಮಸ್ಥಳ ಕ್ಷೇಮಾಭಿವೃದ್ಧಿ ಯೋಜನೆ ಹನೂರು ತಾಲ್ಲೂಕು ಯೋಜನಾಧಿಕಾರಿ ಪ್ರವೀಣ್ ಕುಮಾರ್ ತಿಳಿಸಿದರು.

ತಾಲ್ಲೂಕಿನ ಮಣಗಳ್ಳಿ ಸರ್ಕಾರಿ ಪ್ರೌಢಶಾಲೆಯಲ್ಲಿ ಉಚಿತ ವಿಶೇಷ ತರಬೇತಿ ತರಗತಿ ಪ್ರಾರಂಭ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.ಎಸ್‍ಎಸ್‍ಎಲ್‍ಸಿ ವಿದ್ಯಾರ್ಥಿಗಳಿಗೆ 3 ತಿಂಗಳುಗಳ ಕಾಲ ಉಚಿತ ತರಬೇತಿಯನ್ನು ನಡೆಸುವ ದೆಸೆಯಲ್ಲಿ ರಾಜ್ಯದ 1000 ಶಾಲೆಗಳನ್ನು ಆಯ್ಕೆ ಮಾಡಿಕೊಳ್ಳಲಾಗಿದೆ. ಈ ಪೈಕಿ ಹನೂರು ತಾಲ್ಲೂಕಿನಲ್ಲಿ 5 ಶಾಲೆಗಳನ್ನು ಆಯ್ಕೆ ಮಾಡಲಾಗಿದೆ. ಈ ಅನುಕೂಲವನ್ನು ವಿದ್ಯಾರ್ಥಿಗಳು ಸಮರ್ಪಕವಾಗಿ ಬಳಸಿಕೊಳ್ಳಬೇಕೆಂದು ಸಲಹೆ ನೀಡಿದರು.

ಶಾಲೆಯ ಮುಖ್ಯ ಶಿಕ್ಷಕ ನಾಗರಾಜು ಮಾತನಾಡಿ, ಎಸ್.ಎಸ್.ಎಲ್.ಸಿ. ವಿದ್ಯಾರ್ಥಿಗಳ ಅನುಕೂಲಕ್ಕೆ ಉಚಿತ ವಿಶೇಷ ತರಬೇತಿ ತರಗತಿಗಳನ್ನು ನಡೆಸುತ್ತಿರುವ ಧರ್ಮಸ್ಥಳ ಕ್ಷೇಮಾಭಿವೃದ್ಧಿ ಯೋಜನೆ ಕಾರ್ಯವೈಖರಿ ಮೆಚ್ಚುವಂತದದ್ದು. ಧರ್ಮಸ್ಥಳ ಮಂಜುನಾಥ್ ಸ್ವಾಮಿ ಎಂದರೆ ಆರಾಧ್ಯ ಭಾವನೆ. ನನ್ನ ವೃತ್ತಿ ಜೀವನ ಪ್ರಾರಂಭವಾದದ್ದು ಮಂಜುನಾಥ್ ಸ್ವಾಮಿಯ ಧರ್ಮಸ್ಥಳ ಭಾಗದಿಂದ ನನ್ನ ವೃತ್ತಿ ಜೀವನ ಮುಗಿಯುವ ದಿನಮಾನಗಳಲ್ಲಿ ಧರ್ಮಸ್ಥಳ ಸಂಘದವರು ನಮ್ಮ ಶಾಲೆಯನ್ನು ಆಯ್ಕೆ ಮಾಡಿಕೊಂಡಿರುವುದು ನನ್ನ ಪುಣ್ಯ ಎಂದು ಭಾವಿಸುತ್ತೇನೆ ಎಂದರು.
ಕಾರ್ಯಕ್ರಮದಲ್ಲಿ ಗ್ರಾಮಸ್ಥರು ಕೂಡ ಶ್ರೀ ಧರ್ಮಸ್ಥಳ ಕ್ಷೇಮಾಭಿವೃದ್ಧಿ ಸಂಘದ ಸೇವಾ ಮನೋಭಾವಕ್ಕೆ ಶ್ಲಾಘನೆ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಬಂಡಳ್ಳಿ ವಲಯದ ಮೇಲ್ವಿಚಾರಕರು ಸುರೇಶ್. ಎನ್. ಕೆ. ಸರ್ಕಾರಿ ಪ್ರೌಢಶಾಲೆ ಮಣ ಗಳ್ಳಿ ಮುಖ್ಯ ಶಿಕ್ಷಕರಾದ ನಾಗರಾಜು. ಶಿಕ್ಷಕರಾದ ಜೈ ಶಂಕರ್. ಶಿವಶಂಕರ್.ಮಹೇಶ್ ಮುಖಂಡರಾದ ಬಸವಣ್ಣ ಶಿವಣ್ಣ ಮಹೇಶ್ ಸೇವಾ ಪ್ರತಿನಿಧಿ ಮಮತಾ ವಿದ್ಯಾರ್ಥಿಗಳು ಹಾಜರಿದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು