LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Bangalore Rural

ಉತ್ತಮ ಆಡಳಿತ ಸಪ್ತಾಹ-2024 ಹಿರಿಯ ನಾಗರಿಕರಿಗೆ ಗುರುತಿನ ಚೀಟಿ ವಿತರಿಸಿದ ಡಾ. ಶಿವಶಂಕರ್

ಬೆಂ.ಗ್ರಾ.ಜಿಲ್ಲೆ: ಉತ್ತಮ ಆಡಳಿತ ಸಪ್ತಾಹ-2024 ರ ಅಂಗವಾಗಿ “ಇಂದೇ ಸಕಾಲ”ದಲ್ಲಿ ಹಿರಿಯ ನಾಗರಿಕರ ಗುರುತಿನ ಚೀಟಿಗಾಗಿ ಅರ್ಜಿ ಸಲ್ಲಿಸಿದ ಕೆಲವೇ ನಿಮಿಷಗಳಲ್ಲಿ ಅನುಮೋದಿಸಿ ಜಿಲ್ಲಾಧಿಕಾರಿ ಶಿವಶಂಕರ್‍ರವರಿಂದ ಹಿರಿಯ ನಾಗರಿಕರಿಗೆ ಗುರುತಿನ ಚೀಟಿ ವಿತರಿಸಲಾಯಿತು.

ಉತ್ತಮ ಆಡಳಿತ ಸಪ್ತಾಹ-2024 ವು 19.12.2024 ರಿಂದ 24.12.2024 ರವರೆಗೆ ನಡೆಯಲಿದೆ. ‘ಪ್ರಶಾಸನ್ ಗಾಂವ್ ಕಿ ಓರೆ(ಗ್ರಾಮದ ಕಡೆಗೆ ಆಡಳಿತ)’ ಎಂಬ ಅಭಿಯಾನದ ಮೂಲಕ ಜಿಲ್ಲೆಯಾದ್ಯಂತ ಸಾರ್ವಜನಿಕ ಕುಂದುಕೊರತೆಗಳಿಗೆ ತ್ವರಿತ ಪರಿಹಾರ ಮತ್ತು ಸೇವಾ ವಿತರಣೆಯನ್ನು ಸುಧಾರಿಸುವುದು ಸಪ್ತಾಹದ ಮುಖ್ಯ ಉದ್ದೇಶವಾಗಿದೆ.

ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ದೇವನಹಳ್ಳಿ ತಾಲ್ಲೂಕಿನ ಕೊಯಿರಾ ಗ್ರಾಮದ ಗಾಂಧಿವಾದಿ ಹಾಗೂ ಪರಿಸರ ಸಂರಕ್ಷಕರಾದ ಕೆ.ಎಸ್ ಕೃಷ್ಣಪ್ಪ ಹಾಗೂ ದೊಡ್ಡಬಳ್ಳಾಪುರ ನಗರದ ನಿವೃತ್ತ ಶಿಕ್ಷರಾದ ಎಸ್.ಎಸ್ ರಾಜೇಂದ್ರ ಅವರಿಗೆ ಹಿರಿಯ ನಾಗರಿಕರ ಗುರುತಿನ ಚೀಟಿ ವಿತರಿಸಲಾಯಿತು.
ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿ ಅಮರೇಶ್ ಅವರು ಮಾತನಾಡಿ ಜಿಲ್ಲೆಯ ಎಲ್ಲಾ ಹಿರಿಯ ನಾಗರಿಕರು “ಇಂದೇ ಸಕಾಲ” ವಿಶೇಷ ಯೋಜನೆಯಲ್ಲಿ ಹಿರಿಯ ನಾಗರಿಕರ ಗುರುತಿನ ಚೀಟಿಗಳನ್ನು ಪಡೆದು ವಿನೂತನ ಕಾರ್ಯಕ್ರಮದ ಸೌಲಭ್ಯಗಳನ್ನು ಪಡೆಯಲು ತಿಳಿಸಿದರು.ಈ ಸಂದರ್ಭದಲ್ಲಿ ಜಿಲ್ಲಾ ವಿಕಲಚೇತನರ ಕಲ್ಯಾಣಾಧಿಕಾರಿ ಜಗದೀಶ ಎನ್.ಎಂ, ಇಲಾಖೆಯ ಸಿಬ್ಬಂದಿ ರವಿಕುಮಾರ್, ಪ್ರಸನ್ನ ಮತ್ತು ಸಮಾಜಕಾರ್ಯ ಪ್ರಶಿಕ್ಷಣಾರ್ಥಿ ಮನೋಜ್ ಬಿ.ಹೆಚ್ ಉಪಸ್ಥಿತರಿದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು