LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
National News

ಉತ್ತರ ಭಾರತಕ್ಕೂ ಕಾಲಿಟ್ಟ ನಂದಿನಿ; ದೆಹಲಿಯಲ್ಲಿ Nandini Products ಬಿಡುಗಡೆ

ನವದೆಹಲಿ: ಕರ್ನಾಟಕ, ಆಂಧ್ರಪ್ರದೇಶ ಸೇರಿದಂತೆ ದಕ್ಷಿಣ ಭಾರತದ ಮಾರುಕಟ್ಟೆ ಮೇಲೆ ಹಿಡಿತ ಸಾಧಿಸಿರುವ ಕರ್ನಾಟಕ ಹಾಲು ಒಕ್ಕೂಟದ (KMF)ದ ನಂದಿನಿ ಬ್ರ್ಯಾಂಡ್ ಇದೀಗ ಉತ್ತರ ಭಾರತದಲ್ಲೂ ತನ್ನ ಕದಂಬ ಬಾಹುಗಳನ್ನು ಚಾಚಲು ಹೊರಟಿದೆ.

ಹೌದು.. ಕರ್ನಾಟಕದ ನಂದಿನಿ ಹಾಲು ಉತ್ಪನ್ನ ಇದೀಗ ಉತ್ತರ ಭಾರತದಲ್ಲೂ ತನ್ನ ಮಾರುಕಟ್ಟೆ ವ್ಯಾಪ್ತಿ ವಿಸ್ತರಿಸಿದ್ದು, ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಕರ್ನಾಟಕ ಹಾಲು ಒಕ್ಕೂಟದ (KMF) ನಂದಿನಿ ಬ್ರ್ಯಾಂಡ್ ಉತ್ಪನ್ನಗಳ ಅಧಿಕೃತ ಮಾರಾಟಕ್ಕೆ ಸಿಎಂ ಸಿದ್ದರಾಮಯ್ಯ ಗುರುವಾರ ಚಾಲನೆ ನೀಡಿದರು.

ಈ ಮೂಲಕ ಅಮುಲ್‌ ಮತ್ತು ಮದರ್‌ ಡೇರಿಯಂತಹ ಪ್ರಮುಖ ಬ್ರ್ಯಾಂಡ್​ಗಳ ಜತೆ ಕರ್ನಾಟಕದ ನಂದಿನಿ ಕೂಡ ಪೈಪೋಟಿ ಒಡ್ಡಲಿದೆ.

ಇಂದು ದೆಹಲಿಯ ಅಶೋಕ ಹೊಟೇಲ್​​ನಲ್ಲಿ ನಂದಿನಿ ಬ್ರ್ಯಾಂಡ್ ಉತ್ಪನ್ನಗಳ ಬಿಡುಗಡೆ ಮಾಡುವ ಮೂಲಕ ಅಧಿಕೃತ ಮಾರಾಟಕ್ಕೆ ಚಾಲನೆ ನೀಡಲಾಯಿತು. ಇದಕ್ಕೂ ಮುನ್ನ ದೆಹಲಿಯ ಅಶೋಕ್ ಹೊಟೇಲ್​ಗೆ ಆಗಮಿಸಿದ ಸಿಎಂ ಸಿದ್ದರಾಮಯ್ಯಗೆ ಕನ್ನಡಿಗರಿಂದ ಪೂರ್ಣಕುಂಭ ಸ್ವಾಗತ ದೊರೆಯಿತು.

ಈ ವೇಳೆ ಮಾತನಾಡಿದ ಕೆಎಂಎಫ್ ಅಧ್ಯಕ್ಷ ಭೀಮಾನಾಯಕ್, 'ದೆಹಲಿಯಲ್ಲಿ 3 ರಿಂದ 4 ಲಕ್ಷ ಲೀಟರ್ ಹಾಲನ್ನು ಮಾರಾಟ ಮಾಡಬೇಕು ಎಂಬ ಗುರಿ ಹಾಕಿಕೊಂಡಿದ್ದೇವೆ. ಇನ್ನು ಮುಂದೆ ದೆಹಲಿಯಲ್ಲಿ ಶೇ 100 ರಷ್ಟು ಪರಿಶುದ್ಧ ಹಾಲು ಸಿಗಲಿದೆ. ಶುದ್ಧ ಹಸುವಿನ ಹಾಲನ್ನು ದೆಹಲಿ ಜನರಿಗೆ ನೀಡುತ್ತೇವೆ ಎಂದರು.

ಜಾಗತಿಕ ಮಟ್ಟದಲ್ಲಿ ನಂದಿನಿ ಖ್ಯಾತಿ

ಕರ್ನಾಟಕ ಹಾಲು ಒಕ್ಕೂಟ ಕೆಎಂಎಫ್​ ಈಗ 50 ವರ್ಷದ ಮೈಲಿಗಲ್ಲು ಸಾಧಿಸಿದ್ದು, ಈ ಸಂದರ್ಭದಲ್ಲೇ ಸಂಸ್ಥೆಯ ಉತ್ಪನ್ನಗಳು ದೇಶ ವಿದೇಶಗಳಲ್ಲಿ ಸದ್ದು ಮಾಡುತ್ತಿವೆ. ಕೆಲವು ತಿಂಗಳ ಹಿಂದೆ ಅಮೆರಿಕ ಹಾಗೂ ವೆಸ್ಟ್ ಇಂಡೀಸ್​​ನಲ್ಲಿ ನಡೆದಿದ್ದ ಟಿ20 ವಿಶ್ವಕಪ್ ವೇಳೆ ಸ್ಕಾಟ್ಲೆಂಡ್ ಮತ್ತು ಐರ್ಲೆಂಡ್ ತಂಡಗಳ ಪ್ರಾಯೋಜಕತ್ವವನ್ನು ಕೆಎಂಎಫ್​ ವಹಿಸಿತ್ತು.

ಸ್ಕಾಟ್ಲೆಂಡ್ ಮತ್ತು ಐರ್ಲೆಂಡ್ ತಂಡಗಳ ಜೆರ್ಸಿ ಮೇಲೆ ಪ್ರಾಯೋಜಕರಾಗಿ ‘ನಂದಿನಿ’ ಬ್ರ್ಯಾಂಡ್ ಹೆಸರು ನಮೂದಿಸಲಾಗಿತ್ತು. ಅಷ್ಟೇ ಅಲ್ಲದೆ, ವಿಶ್ವಕಪ್ ವೇಳೆ ನಂದಿನಿ ಉತ್ಪನ್ನಗಳನ್ನೂ ಪೂರೈಸಲಾಗಿತ್ತು. ಆ ಮೂಲಕ ವಿಶ್ವಮಟ್ಟದಲ್ಲಿ ನಂದಿನಿ ಬ್ರ್ಯಾಂಡ್ ಉತ್ಪನ್ನಗಳು ಗಮನ ಸೆಳೆದಿದ್ದವು.

ವಿಶ್ವಕಪ್ ವೇಳೆ ನಂದಿನಿ ಬ್ರ್ಯಾಂಡ್​ನ ಫ್ರೋಝನ್ ಸಿಹಿತಿಂಡಿಗಳು, ಹಾಲಿನಿಂದ ಕೂಡಿದ ಎನರ್ಜಿ ಡ್ರಿಂಕ್ ನಂದಿನಿ ಸ್ಪ್ಲಾಶ್​ ಅನ್ನು ಕೆಎಂಎಫ್​​ ಅಮೆರಿಕಕ್ಕೆ ಪೂರೈಕೆ ಮಾಡಿತ್ತು. ಇದೀಗ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿಯೂ ಉತ್ಪನ್ನಗಳ ಅಧಿಕೃತ ಮಾರಾಟ ಆರಂಭವಾಗಿದೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು