LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Udupi

ಉಪಚುನಾವಣೆ ಸೋಲು -ಗೆಲುವು ದೇವರ ಫಲಾಫಲ; ಡಿಕೆಶಿ

ಉಡುಪಿ (ಕೊಲ್ಲೂರು): ಕರ್ಮಣ್ಯೇವಾಧಿಕಾರಸ್ತೇ ಮಾ ಫಲೇಶು ಕದಾಚನ. ಮೂರು ಕ್ಷೇತ್ರಗಳ ಉಪಚುನಾವಣೆಯಲ್ಲಿ ನಾವು ನಮ್ಮ ಪ್ರಯತ್ನವನ್ನು ಮಾಡಿದ್ದೇವೆ. ಆದರೆ, ಫಲಾಫಲ ಭಗವಂತನದ್ದು" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದರು.

ಉಡುಪಿಯ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ನಂತರ ಶಿವಕುಮಾರ್ ಅವರು ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯೆ ನೀಡಿದರು. ರಾಜ್ಯದ ಉಪಚುನಾವಣೆ ಫಲಿತಾಂಶ ಏನಾಗಲಿದೆ ಎಂದು ಕೇಳಿದಾಗ, ಎಲ್ಲಾ ಕಡೆಯೂ ದೇವರು ನಮಗೆ ಒಳ್ಳೆಯದು ಮಾಡುತ್ತಾನೆ ಎನ್ನುವ ಭರವಸೆಯನ್ನು ಇಟ್ಟಿದ್ದೇವೆ" ಎಂದು ಹೇಳಿದರು. ರಾಜ್ಯದಲ್ಲಿ ಮೂರು ಪಕ್ಷಗಳು ತಲಾ ಒಂದೊಂದು ಸ್ಥಾನ ಗೆಲ್ಲುತ್ತವೆ ಎನ್ನುವ ಸಮೀಕ್ಷೆಗಳ ಬಗ್ಗೆ ಪ್ರತಿಕ್ರಿಯಿಸಿದ ಅವರು ಕರ್ನಾಟಕ ವಿಧಾನಸಭೆ ಹಾಗೂ ಹರಿಯಾಣದ ಚುನಾವಣೆ ಬಗ್ಗೆ ಸಮೀಕ್ಷೆಗಳು ಏನು ಹೇಳಿದ್ದವು? ನನಗೆ ಯಾವುದೇ ಸಮೀಕ್ಷೆಗಳ ಮೇಲೆ ನಂಬಿಕೆಯಿಲ್ಲ. ಸಮೀಕ್ಷೆಗಳನ್ನು ಕಟ್ಟಿಕೊಂಡು ರಾಜಕೀಯ ಮಾಡಲು ಆಗುವುದಿಲ್ಲ. ಯಾರು ಜನರ ಹೃದಯ ಹಾಗೂ ವಿಶ್ವಾಸ ಪಡೆದಿರುತ್ತಾರೋ ಅವರಿಗೆ ಜನ ಗೌಪ್ಯ ಮತದಾನದ ಮೂಲಕ ಬೆಂಬಲ ನೀಡುತ್ತಾರೆ" ಎಂದರು.

ಕೊಲ್ಲೂರು ದೇವಸ್ಥಾನ ಆಡಳಿತ ಮಂಡಳಿಯಲ್ಲಿ ಮೂಲ ಕಾಂಗ್ರೆಸ್ಸಿಗರಿಗೆ ಮಣೆ ಹಾಕದೆ ವಲಸಿಗರಿಗೆ ಮಣೆ ಹಾಕಲಾಗಿದೆ ಎನ್ನುವ ಆರೋಪದ ಬಗ್ಗೆ ಕೇಳಿದಾಗ "ಚುನಾವಣೆ ವೇಳೆ ಇಲ್ಲಿಗೆ ಬಂದಾಗ ಈ ಬಗ್ಗೆ ಕೆಲವರಿಗೆ ಮಾತು ಕೊಟ್ಟಿದ್ದೆವು. ಸಲ್ಪ ದಿನ ಅವರು ಆಡಳಿತ ಮಾಡಲಿ ಬಿಡಿ" ಎಂದು ಹೇಳಿದರು.

ಬಿಪಿಎಲ್ ಕಾರ್ಡ್; ಬಡವರಿಗೆ ಅನ್ಯಾಯವಾಗಲು ಬಿಡುವುದಿಲ್ಲ

ಬಿಪಿಎಲ್ ಕಾರ್ಡ್ ಗೊಂದಲದ ಬಗ್ಗೆ ಕೇಳಿದಾಗ, "ಯಾವುದೇ ಕಾರಣಕ್ಕೂ ಬಿಪಿಎಲ್ ಅರ್ಹರಿಗೆ ಅನ್ಯಾಯವಾಗಲು ಬಿಡುವುದಿಲ್ಲ. ಅರ್ಹರ ಕಾರ್ಡ್ ಗಳು ರದ್ದಾಗಿದ್ದರೆ ಈ ಬಗ್ಗೆ ಪಟ್ಟಿ ಕೊಡಬೇಕು ಎಂದು ಸಂಬಂಧಪಟ್ಟ ಸಚಿವರಿಗೆ ಸೂಚನೆ ನೀಡಲಾಗಿದೆ. ವಂಚಿತರಿಗೆ ಮರು ಅರ್ಜಿ ಹಾಕಲು ಅವಕಾಶ ಕಲ್ಪಿಸಿ ಕೊಡಬೇಕು ಎಂದು ಸೂಚನೆ ನೀಡಿದ್ದೇವೆ. ರಾಜ್ಯ, ತಾಲ್ಲೂಕು, ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿಗಳು ಇದರ ಬಗ್ಗೆ ಪರಿಶೀಲನೆ ಮಾಡಲಿವೆ. ಒಬ್ಬನೇ ಒಬ್ಬ ಬಡವನಿಗೂ ತೊಂದರೆ ಆಗಲು ಬಿಡುವುದಿಲ್ಲ ಎಂದು ಸರ್ಕಾರದ ಪ್ರತಿನಿಧಿಯಾಗಿ, ಪಕ್ಷದ ಅಧ್ಯಕ್ಷನಾಗಿ ನಾನು ಭರವಸೆ ನೀಡುತ್ತೇನೆ. ಯಾರೂ ಭಯ ಪಡುವ ಅಗತ್ಯವಿಲ್ಲ. ವಿರೋಧ ಪಕ್ಷಗಳು ಮಾತನಾಡಬೇಕು ಎಂದು ಸುಮ್ಮನೆ ಮಾತನಾಡುತ್ತಿವೆ" ಎಂದರು. ರಾಜ್ಯದಲ್ಲಿ ನಕ್ಸಲ್ ಎನ್ ಕೌಂಟರ್ ನಡೆದಿದೆ. ಮಿಕ್ಕ ನಕ್ಸಲರಿಗೆ ಶರಣಾಗತಿಯಾಗಲು ಸೂಚನೆ ನೀಡಲಾಗಿದೆಯೇ ಎಂದು ಕೇಳಿದಾಗ, "ಪೊಲೀಸ್ ಇಲಾಖೆ ಹಾಗೂ ಗೃಹ ಸಚಿವರಿಗೆ ಸಂಬಂಧಪಟ್ಟ ವಿಚಾರವಾಗಿರುವ ಕಾರಣ ಅವರು ಇದರ ಬಗ್ಗೆ ಕೆಲಸ ಮಾಡುತ್ತಾರೆ. ನಾನು ನನಗೆ ಸಂಬಂಧ ಪಟ್ಟ ವಿಚಾರದಲ್ಲಿ ಕೆಲಸ ಮಾಡುತ್ತೇನೆ" ಎಂದು ಹೇಳಿದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು