LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Politics News

ಉಪ ಚುನಾವಣೆ ಕುತೂಹಲ ರಾಜ್ಯದ 3 ವಿಧಾನಸಭಾ ಕ್ಷೇತ್ರಗಳಿಗೆ ದಿನಾಂಕ ಘೋಷಣೆ ಸಾಧ್ಯತೆ

ಬೆಂಗಳೂರು: ಇಂದು ಮಧ್ಯಾಹ್ನ ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳ ಉಪ- ಚುನಾವಣೆಯ ದಿನಾಂಕ ಘೋಷಣೆ ಮಾಡುವ ಸಾಧ್ಯತೆಯಿದೆ
ಕೇಂದ್ರ ಚುನಾವಣಾ ಆಯೋಗ ಇಂದು ಮಧ್ಯಾಹ್ನ ಮಹಾರಾಷ್ಟ್ರ ಹಾಗೂ ಜಾರ್ಖಾಂಡ್ ರಾಜ್ಯದ ವಿಧಾನಸಭೆಗೆ ಚುನಾವಣೆ ಘೋಷಣೆ ಮಾಡಲು ಸುದ್ದಿಗೋಷ್ಠಿ ಕರೆದಿದ್ದು, ಇದೇ ವೇಳೆ ಕೆಲ ರಾಜ್ಯಗಳ ವಿಧಾನಸಭೆ ಚುನಾವಣೆ ಘೋಷಿಸುವ ಸಾಧ್ಯತೆಯಿದೆ.

ಮಧ್ಯಾಹ್ನ 3.30ಕ್ಕೆ ನಡೆಯುವ ಸುದ್ದಿಗೋಷ್ಠಿಯಲ್ಲಿ ರಾಜ್ಯದಲ್ಲಿ ಮೂರು ವಿಧಾನಸಭೆ ಕ್ಷೇತ್ರಗಳಿಗೆ ಚುನಾವಣಾ ದಿನಾಂಕ ನಿಗಧಿಪಡಿಸಿ ಪ್ರಕಟಣೆ ಹೊರಡಿಸುವ ಸಾಧ್ಯತೆಯಿದೆ.ರಾಜ್ಯದ ಚನ್ನಪಟ್ಟಣ, ಶಿಗ್ಗಾಂವಿ ಹಾಗೂ ಸಂಡೂರು ವಿಧಾನಸಭಾ ಕ್ಷೇತ್ರಗಳಿಗೆ ಉಪ-ಚುನಾವಣೆ ನಡೆಯಬೇಕಾಗಿದೆ. ಈ ಕ್ಷೇತ್ರಗಳಲ್ಲಿ ಶಾಸಕರಾಗಿದ್ದ ಮಾಜಿಮುಖ್ಯಮಂತ್ರಿಗಳಾದ ಹೆಚ್.ಡಿ.ಕುಮಾರಸ್ವಾಮಿ, ಬಸವರಾಜ ಬೊಮ್ಮಾಯಿ ಹಾಗೂ ಶಾಸಕ ಈ.ತುಕಾರಾಂ ಅವರುಗಳು ರಾಜೀನಾಮೆ ನೀಡಿರುವ ಹಿನ್ನೆಲೆಯಲ್ಲಿ ಚುನಾವಣೆ ನಡೆಯಬೇಕಾಗಿದೆ.

ಈ ಮೂವರು ಕೂಡ ಲೋಕಸಭಾ ಚುನಾವಣೆಯಲ್ಲಿ ಸ್ಫರ್ಧಿಸಿ, ಸಂಸತ್ ಪ್ರವೇಶಿಸಿದ ಕಾರಣ ಚುನಾವಣೆ ಎದುರಾಗಲಿದೆ.ಈಗಾಗಲೇ ವಿಧಾನಸಭೆಯ ಶಾಸಕ ಸ್ಥಾನಕ್ಕೆ ಮೂವರಿಂದಲೂ ರಾಜೀನಾಮೆ ಸಲ್ಲಿಕೆಯಾಗಿದ್ದು, ಅಂಗೀಕಾರಗೊಂಡಿದೆ.ಶಾಸಕರ ರಾಜೀನಾಮೆಯಿಂದ ಯಾವುದೇ ಕ್ಷೇತ್ರ ತೆರವಾದ್ರೆ, ರಾಜೀನಾಮೆಯಾದ ಮುಂದಿನ 6 ತಿಂಗಳೊಳಗೆ ಆ ಕ್ಷೇತ್ರದ ಉಪ- ಚುನಾವಣೆ ನಡೆಸಬೇಕಾಗಿದ್ದು, ಮಧ್ಯಾಹ್ನ 3 ವಿಧಾನಸಭಾ ಕ್ಷೇತ್ರಗಳ ಉಪ-ಚುನಾವಣೆ ದಿನಾಂಕವು ಘೋಷಣೆ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು