LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Sports News

ಐತಿಹಾಸಿಕ ಸರಣಿ ಗೆದ್ದ ಅಫ್ಘಾನ್: ದ.ಆಫ್ರಿಕಾಗೆ ಹೀನಾಯ ಸೋಲು

ಶಾರ್ಜಾ: ದಕ್ಷಿಣ ಆಫ್ರಿಕಾ ತಂಡವನ್ನು ಸತತ ಎರಡು ಏಕದಿನ ಪಂದ್ಯಗಳಲ್ಲಿ ಸೋಲುಣಿಸಿದ ಅಫ್ಘಾನಿಸ್ಥಾನ ತಂಡವು ಐತಿಹಾಸಿಕ ಸರಣಿ ಗೆಲುವು ಸಾಧಿಸಿದೆ. ಶುಕ್ರವಾರ (ಸೆ.20) ನಡೆದ ಎರಡನೇ ಏಕದಿನ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡವು 177 ರನ್ ಗಳ ಬೃಹತ್ ಅಂತರದಲ್ಲಿ ಸೋಲನುಭವಿಸಿದೆ.

ಶಾರ್ಜಾದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಅಫ್ಘಾನಿಸ್ತಾನ ತಂಡವು ರೆಹಮನುಲ್ಲಾ ಗುರ್ಬಾಜ್ ಶತಕದ ನೆರವಿನಿಂದ ನಾಲ್ಕು ವಿಕೆಟ್ ನಷ್ಟಕ್ಕೆ 311 ರನ್ ಗಳಿಸಿದರೆ, ದ.ಆಫ್ರಿಕಾ ತಂಡವು ಸ್ಪಿನ್ ದಾಳಿಗೆ ಸಿಲುಕಿ ಕೇವಲ 134 ರನ್ ಗೆ ಆಲೌಟಾಯಿತು. ಇದರೊಂದಿಗೆ ಮೂರು ಪಂದ್ಯಗಳ ಏಕದಿನ ಸರಣಿಯನ್ನು ಒಂದು ಪಂದ್ಯ ಉಳಿದಿರುವಂತೆ ತನ್ನ ವಶಕ್ಕೆ ಪಡೆಯಿತು.

312 ರನ್ ಗುರಿ ಬೆನ್ನತ್ತಿದ್ದ ದ.ಆಫ್ರಿಕಾ ನಾಯಕ ಬವುಮಾ ಮತ್ತು ಟೊನಿ ಡಿ ಜೋರ್ಜಿ ಮೊದಲ ವಿಕೆಟ್ ಗೆ 72 ರನ್ ಕಲೆ ಹಾಕಿದರು. ಬವುಮಾ 38 ಮತ್ತು ಟೊನಿ 31 ರನ್ ಮಾಡಿದರು. ಆದರೆ ಬಳಿಕ ಯಾವುದೇ ಆಟಗಾರ ನಿಂತು ಆಡಲಿಲ್ಲ. ರೀಜಾ ಹೆಂಡ್ರಿಕ್ಸ್ (17 ರನ್) ಏಡನ್ ಮಾರ್ಕ್ರಮ್ (21 ರನ್) ಗಳಿಸಿದ್ದು ಬಿಟ್ಟರೆ ಉಳಿದ್ಯಾರು ಎರಡಂಕಿ ಮೊತ್ತವನ್ನೂ ಕಲೆ ಹಾಕಲಿಲ್ಲ. ಕೊನೆಗೆ 34.2 ಓವರ್ ಗಳಲ್ಲಿ ಆಫ್ರಿಕಾ ಕೇವಲ 134 ರನ್ ಗೆ ಆಲೌಟಾಯಿತು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು