LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Bangalore Urban

ಕನಕಪುರ ಸಂಚಾರ ದಟ್ಟಣೆ ನಿವಾರಣೆಗೆ ಕ್ರಮ: ನೈಸ್ ರಸ್ತೆ-ಬನಶಂಕರಿ ಸಂಪರ್ಕಕ್ಕೆ ಎಕ್ಸ್‌ಪ್ರೆಸ್‌ವೇ; DPR ಸಿದ್ಧಪಡಿಸುವಂತೆ BBMPಗೆ ಡಿಕೆಶಿ ಸೂಚನೆ

ಬೆಂಗಳೂರು: ಕನಕಪುರ ರಸ್ತೆಯ ಸಂಚಾರ ದಟ್ಟಣೆ ನಿವಾರಣೆಗೆ ಬನಶಂಕರಿಯಿಂದ ನೈಸ್ ರಸ್ತೆ ವರೆಗೆ ಎಕ್ಸ್‌ಪ್ರೆಸ್‌ವೇ ನಿರ್ಮಾಣಕ್ಕೆ ವಿಸ್ತೃತ ಯೋಜನಾ ವರದಿ ಸಿದ್ಧಪಡಿಸುವಂತೆ ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಅವರು ಬಿಬಿಎಂಪಿಗೆ ಸೂಚನೆ ನೀಡಿದ್ದಾರೆಂದು ತಿಳಿದುಬಂದಿದೆ.

ಈ ಸಂಬಂಧ ಬಿಬಿಎಂಪಿ ಆಯುಕ್ತ ತುಷಾರ್ ಗಿರಿನಾಥ್ ಅವರಿಗೆ ಪತ್ರ ಬರೆದಿರುವ ಉಪ ಮುಖ್ಯಮಂತ್ರಿಗಳು, ಬೆಂಗಳೂರು ನಗರಕ್ಕೆ ಸಂಪರ್ಕ ಕಲ್ಪಿಸುವ ಪ್ರಮುಖ ರಸ್ತೆಗಳಲ್ಲಿ ಕನಕಪುರ ರಸ್ತೆಯೂ ಒಂದು. ಈ ರಸ್ತೆಯಲ್ಲಿ ಸಂಚಾರ ದಟ್ಟಣೆ ಹೆಚ್ಚಾಗಿದ್ದು, ಪ್ರಯಾಣಿಕರು ಪರದಾಡುವಂತಾಗಿದೆ. ಮೆಟ್ರೊ ರೈಲು ಈ ರಸ್ತೆಯಲ್ಲಿ ಹಾದು ಹೋಗುವುದರಿಂದ ಗ್ರೇಡ್ ಸಪರೇಟರ್ ನಿರ್ಮಿಸುವುದು ಕಷ್ಟ. ಹಾಗಾಗಿ ಪರ್ಯಾಯ ವ್ಯವಸ್ಥೆ ಮಾಡಬೇಕಿದೆ ಎಂದು ಹೇಳಿದ್ದಾರೆ.

ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ (ಬಿಡಬ್ಲ್ಯುಎಸ್‌ಎಸ್‌ಬಿ) ಪೈಪ್‌ಲೈನ್ ರಸ್ತೆಯಲ್ಲಿ ಮೇಲ್ಸೇತುವೆ ನಿರ್ಮಿಸುವ ಮೂಲಕ ಕನಕಪುರ ರಸ್ತೆಯಲ್ಲಿನ ಒತ್ತಡವನ್ನು ಕಡಿಮೆ ಮಾಡಬಹುದಾಗಿದೆ. ಈ ಬಗ್ಗೆ ತಕ್ಷಣ ಕ್ರಮ ಕೈಗೊಂಡು ಕಾರ್ಯಸಾಧ್ಯತಾ ವರದಿ ಮತ್ತು ವಿಸ್ತೃತ ಯೋಜನಾ ವರದಿ ಸಿದ್ಧಪಡಿಸುವಂತೆ ಸೂಚನೆ ನೀಡಿದ್ದಾರೆ.

ಬಿಬಿಎಂಪಿ ಹಿರಿಯ ಎಂಜಿನಿಯರ್ ಪ್ರತಿಕ್ರಿಯೆ ನೀಡಿ, ಡಿಸಿಎಂ ನಿರ್ದೇಶನದ ಮೇರೆಗೆ ಪ್ರಸ್ತಾವಿತ ಮೇಲ್ಸೇತುವೆಗೆ ಡಿಪಿಆರ್ ಸಿದ್ಧಪಡಿಸಲು ಗುತ್ತಿಗೆ ಕರೆಯಲಾಗುವುದು ಎಂದು ಹೇಳಿದ್ದಾರೆ.

ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಷನ್ ಲಿಮಿಟೆಡ್ (BMRCL) ರಾಗಿಗುಡ್ಡದಲ್ಲಿ ಡಬಲ್ ಡೆಕ್ಕರ್ ಮೇಲ್ಸೇತುವೆಯನ್ನು ನಿರ್ಮಿಸಿದೆ. ಆದರೆ, ಕೊನೆಯ ಸಂಪರ್ಕ ಇಲ್ಲದ ಕಾರಣ ಸಂಚಾರ ದಟ್ಟಣೆ ಸಮಸ್ಯೆ ಪರಿಹಾರಗೊಂಡಿಲ್ಲ. ಹೀಗಾಗಿ ಈ ಮಾರ್ಗದಲ್ಲಿ ಸಂಚಾರ ಸುಗಮಗೊಳಿಸಲು ಎಕ್ಸ್‌ಪ್ರೆಸ್‌ವೇಗೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ತಿಳಿಸಿದ್ದಾರೆ.

ಈ ನಡುವೆ 10,000 ಕೋಟಿಗೂ ಅಧಿಕ ಮೊತ್ತದ ಸುರಂಗ ರಸ್ತೆ ಮತ್ತು ಸ್ಕೈಡೆಕ್ ಯೋಜನೆಗಳ ವಿರುದ್ಧ ಆನ್‌ಲೈನ್ ಅಭಿಯಾನವನ್ನು ಆರಂಭಿಸಿರುವ ನಾಗರಿಕ ಕಾರ್ಯಕರ್ತೆ ಕಾತ್ಯಾಯಿನಿ ಚಾಮರಾಜ್ ಅವರು, ಸರ್ಕಾರದ ಈ ಪ್ರಸ್ತಾವನೆಯನ್ನು ಖಂಡಿಸಿದ್ದಾರೆ. ಎಕ್ಸ್‌ಪ್ರೆಸ್‌ವೇ ಬಗ್ಗೆ ಈ ಹಿಂದೆಯೇ ಸುಳಿವು ನೀಡಿದ್ದೆ, ಇದೀಗ ಸತ್ಯವಾಗುತ್ತಿದೆ ಎಂದು ಹೇಳಿದ್ದಾರೆ.

ನಗರಕ್ಕೆ ಸಮಗ್ರ ಚಲನಶೀಲತೆ ಯೋಜನೆ (ಸಿಎಂಪಿ) ಸಿದ್ಧಪಡಿಸುವ ಜವಾಬ್ದಾರಿಯನ್ನು ಉನ್ನತ ಪ್ರಾಧಿಕಾರವಾದ ಬೆಂಗಳೂರು ಮಹಾನಗರ ಭೂ ಸಾರಿಗೆ ಪ್ರಾಧಿಕಾರ ಹೊಂದಿದ್ದು, ಪ್ರಾಧಿಕಾರವನ್ನು (ಬಿಎಂಎಲ್‌ಟಿಎ) ಸಂಪರ್ಕಿಸದೆ ಈ ನಿರ್ಧಾರಗಳನ್ನು ತೆಗೆದುಕೊಳ್ಳಲಾಗಿದೆ. ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು ಕೊನೆಯ ಮೈಲಿ ಸಂಪರ್ಕಕ್ಕಾಗಿ ಯೋಜನೆಗಳಿಗೆ ಹೆಚ್ಚಿನ ಆದ್ಯತೆ ನೀಡಬೇಕು ತಿಳಿಸಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು