LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Entertainment News

"ಕಲಿ ಕುಡುಕರು" ಈವಾರ ತೆರೆಗೆ

ಎ.ಎಂ. ಕ್ರಿಯೇಷನ್ ಬ್ಯಾನರ್ ಅಡಿಯಲ್ಲಿ ಮಹೇಶ್ ಎನ್. ಅವರು ನಿರ್ಮಾಣ ಮಾಡಿ, ಕರಣ್ ಸವ್ಯಸಾಚಿ ಅವರು ಆಕ್ಷನ್ ಕಟ್ ಹೇಳಿರುವ "ಕಲಿಕುಡುಕರು" ಚಿತ್ರ ಈ ವಾರ ರಾಜ್ಯಾದ್ಯಂತ ಬಿಡುಗಡೆಯಾಗಲಿದೆ.

ಒಬ್ಬ ಆಟೋ ಡ್ರೈವರ್, ಇನ್ನೊಬ್ಬ ಉಂಡಾಡಿ ಗುಂಡ, ಮತ್ತೊಬ್ಬ ರಿಯಲ್ ಎಸ್ಟೇಟ್ ಬ್ರೋಕರ್, ಇವರ ಜೊತೆಗೆ ಇನ್ನೊಬ್ಬ ನಿರುದ್ಯೋಗಿ ಯುವಕ ಈ ನಾಲ್ವರು ನಾಯಕರು ಮತ್ತು ಮತ್ತೊಬ್ಬನ ಸುತ್ತ ಸಾಗುವ ಕಥೆ ಈ ಚಿತ್ರದಲ್ಲಿದೆ.ತಮ್ಮ ಕುಟುಂಬದಲ್ಲಿ ಉಂಟಾದ ಸಮಸ್ಯೆಗಳಿಂದಾಗಿ ಅವರು ಕುಡಿತದ ದಾಸರಾಗುತ್ತಾರೆ, ಕುಡಿತವೇ ಇವರ ಜೀವನ ಎನ್ನುವಷ್ಟರಮಟ್ಟಿಗೆ ಚಟವಾಗಿಸಿಕೊಂಡಿರುತ್ತಾರೆ.

ನಿರುದ್ಯೋಗಿ ಯುವಕನನ್ನು ಪ್ರಿತಿಸುವ ಹುಡುಗಿ ರೌಡಿಗಳಿಂದ ಅತ್ಯಾಚಾರಕ್ಕೊಳಗಾಗುತ್ತಾಳೆ. ಈ ನಾಲ್ಕು ಜನ ನಾಯಕರು ಆಕೆಗೆ ಹೇಗೆ ನ್ಯಾಯ ಕೊಡಿಸಿದರು ಎನ್ನುವುದೇ ಚಿತ್ರದ ಕಥಾಹಂದರ. ಬೆಂಗಳೂರು ಸುತ್ತ ಮುತ್ತ ಚಿತ್ರದ ಚಿತ್ರೀಕರಣ ನಡೆಸಲಾಗಿದೆ.ಚಿತ್ರದ ತಾರಾಗಣದಲ್ಲಿ ಮಹೇಶ್ ಎನ್, ಅಶೋಕ್, ರವೀಶ್, ಶರತ್, ಕೆ.ಜಿ ಲೋಹಿತ್ ,ರಿತ್ಯಾ ,ಸೋನುಗೌಡ, ದೀಪು, ಶೃತಿ , ಅರ್ಚನಾ, ನಾಗೇಂದ್ರ ಅರಸ್, ಮಾನ್ ಮೋಹನ್ ಮಂಜುಳಾ ರೆಡ್ಡಿ ಮುರುಳಿ, ಲೋಹಿತ್, ರವೀಶ್ ಮತ್ತಿತರರಿದ್ದಾರೆ.

ಈ ಚಿತ್ರದಲ್ಲಿ ಎರಡು ಹಾಡುಗಳಿದ್ದು, ಸನ್ನಿ ಮಾಧವನ್ ಅವರ ಸಂಗೀತ ಸಂಯೋಜನೆಯಿದೆ. ಚಿತ್ತೋರ್ ಸೂರಿ ಅವರ ಕ್ಯಾಮೆರಾ, ಶ್ರೀರಂಗ ಹಾಲುವಾಗಿಲು ಅವರ ಸಾಹಿತ್ಯ, ಸುಪ್ರೀಂ ಸುಬ್ಬ ಅವರ ಸಾಹಸ ಈ ಚಿತ್ರಕ್ಕಿದೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು