LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Sports News

ಕಾನ್ಪುರದಲ್ಲಿ ಮಹಿಳೆ ಮೇಲೆ ಅತ್ಯಾಚಾರ; ಭಜರಂಗದಳದ ಮುಖಂಡನ ಬಂಧನ

ಕಾನ್ಪುರ: ಮದುವೆಯಾಗುವುದಾಗಿ ನಂಬಿಸಿ ಮಹಿಳೆಯೊಬ್ಬರ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಬಜರಂಗದಳದ ನಾಯಕ ದಿಲೀಪ್ ಸಿಂಗ್ ಬಜರಂಗಿ ಅವರನ್ನು ಬಂಧಿಸಲಾಗಿದೆ ಎಂದು ಉತ್ತರ ಪ್ರದೇಶ ಪೊಲೀಸರು ಮಂಗಳವಾರ ತಿಳಿಸಿದ್ದಾರೆ.

ಸುಳ್ಳು ಅತ್ಯಾಚಾರ ಪ್ರಕರಣದಲ್ಲಿ ನನ್ನನ್ನು ಸಿಲುಕಿಸಲಾಗಿದೆ ಎಂದು ಆರೋಪಿಸಿ ಸೋಮವಾರ ಗೋವಿಂದ್ ನಗರ ಪೊಲೀಸ್ ಠಾಣೆಯ ಮುಂದೆ ಮುಖದ ಮೇಲೆ ಸೀಮೆಎಣ್ಣೆ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ನಂತರ ಬಜರಂಗಿಯನ್ನು ಬಂಧಿಸಲಾಗಿದೆ ಎಂದು ಹೆಚ್ಚುವರಿ ಡಿಸಿಪಿ(ದಕ್ಷಿಣ) ಮಹೇಶ್ ಕುಮಾರ್ ತಿಳಿಸಿದ್ದಾರೆ.

ನವೆಂಬರ್ 5, 2024 ರಂದು, ಭಜರಂಗಿ ತನ್ನೊಂದಿಗೆ ಸ್ನೇಹ ಬೆಳೆಸಿ, ಘಂಟಾಘರ್‌ನ ಹೋಟೆಲ್‌ಗೆ ಕರೆದೊಯ್ದು ಮದುವೆಯಾಗುವುದಾಗಿ ಭರವಸೆ ನೀಡಿ ತನ್ನ ಮೇಲೆ ಅತ್ಯಾಚಾರವೆಸಗಿದ್ದಾರೆ ಎಂದು ಆರೋಪಿಸಿ ಮಹಿಳೆಯೊಬ್ಬರು ಕಲೆಕ್ಟರ್‌ಗಂಜ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ ಎಂದು ಮಹೇಶ್ ಕುಮಾರ್ ಅವರು ಹೇಳಿದ್ದಾರೆ.

ಬಜರಂಗಿ ತನ್ನ ಅಶ್ಲೀಲ ವಿಡಿಯೋಗಳನ್ನೂ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಅಪ್ಲೋಡ್ ಮಾಡಿದ್ದಾನೆ ಎಂದು ಸಹ ಮಹಿಳೆ ಆರೋಪಿಸಿದ್ದಾರೆ.

ಮಹಿಳೆ ನೀಡಿದ ದೂರಿನ ಆಧಾರದ ಮೇಲೆ ಪೊಲೀಸ ಎಫ್ಐಆರ್ ದಾಖಲಿಸಿಕೊಂಡು ಪ್ರಕರಣದ ತನಿಖೆ ಆರಂಭಿಸಿದ್ದರು. ಆದರೆ, ಕಾನ್ಪುರದ ಬಜರಂಗದಳದ ಮಾಜಿ ಜಿಲ್ಲಾ ಸಂಚಾಲಕರಾಗಿದ್ದ ಬಜರಂಗಿ ಅವರು ತಲೆಮರೆಸಿಕೊಂಡಿದ್ದರು.

ಸೋಮವಾರ ಇದ್ದಕ್ಕಿದ್ದಂತೆ ಪ್ರತ್ಯಕ್ಷವಾದ ಬಜರಂಗಿ ತನ್ನ ಬೆಂಬಲಿಗರು ಮತ್ತು ಬಜರಂಗದಳದ ಕಾರ್ಯಕರ್ತರೊಂದಿಗೆ ಗೋವಿಂದ್ ನಗರ ಪೊಲೀಸ್ ಠಾಣೆಗೆ ಆಗಮಿಸಿ, ಪ್ರತಿಭಟಿಸಿದರು. ಇದೇ ವೇಳೆ ಸಾಮಾಜಿಕ ಮಾಧ್ಯಮದಲ್ಲಿ ಲೈವ್ ಸ್ಟ್ರೀಮ್ ಮಾಡುವಾಗ ಬೆಂಕಿ ಹಚ್ಚಿಕೊಳ್ಳಲು ಪ್ರಯತ್ನಿಸಿದರು ಎಂದು ಪೊಲೀಸರು ತಿಳಿಸಿದ್ದಾರೆ.

ಸಾರ್ವಜನಿಕರ ಮಧ್ಯೆ ಪೊಲೀಸ್ ಠಾಣೆಯ ಹೊರಗೆ ಆತ್ಮಹತ್ಯೆಗೆ ಯತ್ನಿಸಿ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದ ಮೇಲೆ ಬಜರಂಗಿ ವಿರುದ್ಧ ಮತ್ತೊಂದು ಎಫ್‌ಐಆರ್ ದಾಖಲಿಸಲಾಗಿದೆ ಎಂದು ಅಧಿಕಾರಿ ಹೇಳಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು