LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Belagavi

ಕೃಷಿ ಕ್ಷೇತ್ರಕ್ಕೆ ನ್ಯಾಯಕ್ಕೆ ಆಗ್ರಹ: ಸುವರ್ಣಸೌಧದ ಬಳಿ ರೈತರ ಪ್ರತಿಭಟನೆ

ಬೆಳಗಾವಿ: ಕೃಷಿ ಕ್ಷೇತ್ರಕ್ಕೆ ನ್ಯಾಯ ಒದಗಿಸುವಂತೆ ಆಗ್ರಹಿಸಿ ರೈತ ಸಂಘಟನೆಗಳು ಬೆಳಗಾವಿ ಸುವರ್ಣ ವಿಧಾನಸೌಧದ ಎದುರು ಬೃಹತ್ ಪ್ರತಿಭಟನೆ ನಡೆಸಿದವು.

ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ವತಿಯಿಂದ ಬೆಳಗಾವಿಯ ಸುವರ್ಣಸೌಧದ ಬಳಿ ರೈತರು ಪ್ರತಿಭಟನೆ ನಡೆಸಿದರು.

ರೈತರು ಬೆಳೆದ ಬೆಳೆಗಳಿಗೆ ನ್ಯಾಯಯುತ ಬೆಲೆ ಸಿಗಬೇಕು. ಟನ್ ಕಬ್ಬಿಗೆ ಕಾರ್ಖಾನೆಗಳಿಂದ ಸರಕಾರಕ್ಕೆ ಹೋಗುತ್ತಿರುವ 5 ಸಾವಿರ ರೂ.ಗಳ ತೆರಿಗೆ ಹಣದಲ್ಲಿಯ 2 ಸಾವಿರ ರೂ.ಗಳನ್ನು ರೈತರಿಗೆ ನೀಡಬೇಕು. ರೈತರ ಸಾಲ ಸಂಪೂರ್ಣ ಮನ್ನಾ ಮಾಡಬೇಕು. ಕರ್ನಾಟಕ ಕೃಷಿ ಉತ್ಪನ್ನ ಮಾರುಕಟ್ಟೆ ವ್ಯವಹಾರ ಕಾಯ್ದೆ ತಿದ್ದುಪಡಿ ಮಾಡಬೇಕು. ಗ್ರಾಮೀಣ ಪ್ರದೇಶದಲ್ಲಿ ರೈತರಿಗೆ ಹಗಲು ಹೊತ್ತು ನಿರಂತರ 12 ಗಂಟೆ ಥ್ರೀ ಫೇಸ್ ವಿದ್ಯುತ್ ಹಾಗೂ ರಾತ್ರಿ ನಿರಂತರ ಸಿಂಗಲ್ ಫೇಸ್ ವಿದ್ಯುತ್ ಕಡ್ಡಾಯವಾಗಿ ಪೂರೈಕೆ ಮಾಡಬೇಕು. ಅಕ್ರಮ-ಸಕ್ರಮ ಹಾಗೂ ಶೀಘ್ರ ಸಂಪರ್ಕ ಯೋಜನೆಯನ್ನು ಮುಂದುವರೆಸಬೇಕು. ಭತ್ತದ ಬೆಳೆಗೆ ಕನಿಷ್ಠ ಪ್ರತಿ ಕ್ವಿಂಟಾಲ್ ಗೆ 5. ಸಾವಿರ ರೂ.ದರ ನೀಡಬೇಕು. ದ್ರಾಕ್ಷಿ (ಒಣ) ಬೆಳೆಗೆ ಪ್ರತಿ ಕೆಜಿಗೆ 400 ರೂ. ಬೆಂಬಲ ಬೆಲೆ ನೀಡಬೇಕು. ರೈತ ವಿರೋಧಿ ಕಾನೂನುಗಳನ್ನು ಹಿಂಪಡೆಯಬೇಕು, ಭೂಸ್ವಾಧೀನ ಕಾಯ್ದೆಯ ತಿದ್ದುಪಡಿ, ಎಪಿಎಂಸಿ ಕಾಯ್ದೆಯನ್ನು ರದ್ದುಪಡಿಸಬೇಕು.

ರಾಜ್ಯದಲ್ಲಿರುವ ಎಲ್ಲಾ ನೀರಾವರಿ ಯೋಜನೆಗಳನ್ನು ಪುನಃಚೇತನಗೊಳಿಸಬೇಕು. ಮಹದಾಯಿ, ಕಳಸಾ ಬಂಡೂರಿ ಮೇಕೆದಾಟು ಯೋಜನೆ ಸೇರಿದಂತೆ ಬಾಕಿ ಉಳಿದ ನೀರಾವರಿ ಯೋಜನೆಗಳ ಕಾಮಗಾರಿ ಶೀಘ್ರ ಪೂರ್ಣಗೊಳಿಸಬೇಕು. ಆಲಮಟ್ಟಿ ಜಲಾಶಯವನ್ನು ಮೇಲ್ದರ್ಜೇಗೇರಿಸಬೇಕು ಎಂದು ಒತ್ತಾಯಿಸಿದರು.

ರೈತರ ಪ್ರತಿಭಟನೆ ವೇಳೆ ಹಲವು ಶಾಸಕರು ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿ ರೈತರ ಅಹವಾಲು ಆಲಿಸಿದರು. ಇನ್ನಾದರೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ಥಳಕ್ಕೆ ಭೇಟಿ ನೀಡಿ ಸಮಸ್ಯೆ ಬಗೆಹರಿಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.

ಹಿಂದೆ ನೀಡಿದ್ದ ಭರವಸೆಗಳು ಕಾರ್ಯರೂಪಕ್ಕೆ ಇನ್ನೂ ಬಂದಿಲ್ಲ. ಹೀಗಾಗಿ ಈ ಬಾರಿ ನಾವು ಭರವಸೆಗಳಿಂದ ಹಿಂದಕ್ಕೆ ಸರಿಯುವುದಿಲ್ಲ ಎಂದು ಹೇಳಿದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು