LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಕೆನಡಾ ಮುಂದಿನ ಪ್ರಧಾನಿ ರೇಸ್‌ ನಲ್ಲಿ ಭಾರತೀಯ ಮೂಲದ ಅನಿತಾ ಆನಂದ್ 

ಒಟ್ಟಾವ: ಪ್ರಧಾನಿ ಹುದ್ದೆಗೆ ರಾಜೀನಾಮೆ ನೀಡಿರುವ ಜಸ್ಟಿನ್ ಟ್ರೂಡೊ ಅವರ ಸ್ಥಾನಕ್ಕೆ ಅವರ ಸಂಪುಟದಲ್ಲಿ ಸಾರಿಗೆ ಸಚಿವರಾಗಿ ಕಾರ್ಯ ನಿರ್ವಹಿಸುತ್ತಿದ್ದ ಅನಿತಾ ಆನಂದ್ ಹೆಸರು ಬಲವಾಗಿ ಕೇಳಿಬರುತ್ತಿದೆ. ಸೋಮವಾರ ಪ್ರಧಾನಿ ಹುದ್ದೆಗೆ ಟ್ರೂಡೊ ರಾಜೀನಾಮೆ ನೀಡಿರುವುದರಿಂದ ಹೊಸ ನಾಯಕನ ಆಯ್ಕೆ ಅನಿವಾರ್ಯವಾಗಿದೆ.

ಬರೋಬ್ಬರಿ ಹತ್ತು ವರ್ಷಗಳ ಕಾಲ ಪ್ರಧಾನಿ ಹುದ್ದೆಯಲ್ಲಿದ್ದ ಟ್ರುಡೋ ರಾಜೀನಾಮೆಗೆ ಒತ್ತಾಯಿಸಿ ಸ್ವಪಕ್ಷದಲ್ಲೇ ಭಿನ್ನಮತ ಸೃಷ್ಟಿಯಾಗಿದ್ದರಿಂದ ಈ ಬೆಳವಣಿಗೆ ನಡೆದಿದೆ. ಆದರೆ ಲಿಬರಲ್‌ ಪಕ್ಷ ನೂತನ ಪ್ರಧಾನಿ ಆಯ್ಕೆ ಮಾಡುವವರೆಗೆ ತಾನೇ ಪ್ರಧಾನಿ ಹುದ್ದೆಯಲ್ಲಿ ಮುಂದುವರಿಯುವುದಾಗಿ ಘೋಷಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಕೆನಡಾದ ಮುಂದಿನ ಪ್ರಧಾನಿ ಯಾರು ಎಂಬ ಲೆಕ್ಕಾಚಾರ ಆರಂಭವಾಗಿದೆ.

ಮಾರ್ಚ್ 24ರಂದು ಹೊಸ ಪ್ರಧಾನಿ ಆಯ್ಕೆಯಾಗಲಿದ್ದಾರೆ. ಸಾರಿಗೆ ಮತ್ತು ಆಂತರಿಕ ವ್ಯವಹಾರಗಳ ಖಾತೆ ಸಚಿವರಾಗಿರುವ ಅನಿತಾ ಆನಂದ್, ಜೊತೆಗೆ, ಡೊಮಿನಿಕ್ ಲೆಬ್ಲಾಂಕ್, ಕ್ರಿಸ್ಟಿನಾ ಫ್ರೀಲ್ಯಾಂಡ್, ಮೆಲೈನ್ ಜೋಲಿ, ಫ್ರಾಂಕೋಯಿಸ್ ಫಿಲಿಪ್ ಚಾಂಪೇನ್ ಮತ್ತು ಮಾಕ್ ಕೆರ್ನಿ ಹೆಸರು ಕೂಡಾ ಚಾಲ್ತಿಯಲ್ಲಿದೆ.

2019ರಿಂದ ಸಂಸದರಾಗಿರುವ ಅನಿತಾ ಆನಂದ್ ಕೆನಡಾದ ಲಿಬರಲ್ ಪಾರ್ಟಿಯ ಹಿರಿಯ ಸದಸ್ಯೆ. ಸಾರ್ವಜನಿಕ ಸೇವೆ ಮತ್ತು ನೇಮಕಾತಿ, ರಾಷ್ಟ್ರೀಯ ರಕ್ಷಣೆ ಖಾತೆಗಳನ್ನು ಯಶಸ್ವಿಯಾಗಿ ನಿಭಾಯಿಸಿದ ಅವರು ಖಜಾನೆ ಮಂಡಳಿಯ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು. 2024ರಿಂದ ಅವರು ಸಾರಿಗೆ ಮತ್ತು ಆಂತರಿಕ ವ್ಯಾಪಾರ ಖಾತೆ ಸಚಿವರಾಗಿದ್ದಾರೆ.

1960ರ ದಶಕದ ಆರಂಭದಲ್ಲಿ ಭಾರತದಿಂದ ಕೆನಡಾಗೆ ವಲಸೆ ಬಂದ ಸರೋಜ್ ಡಿ ರಾಮ್ ಮತ್ತು ಎಸ್.ವಿ.ಆನಂದ್ ಎಂಬ ವೈದ್ಯ ದಂಪತಿಯ ಪುತ್ರಿಯಾಗಿ 1967ರ ಮೇ 20ರಂದು ಜನಿಸಿದ ಅನಿತಾ, ವಿದ್ಯಾರ್ಥಿ ಜೀವನದಿಂದಲೂ ತಮ್ಮ ಪೋಷಕರಿಂದ ಮೌಲ್ಯಗಳನ್ನು ರೂಡಿಸಿಕೊಂಡಿದ್ದರು ಮತ್ತು ವೃತ್ತಿಸಂಹಿತೆಯನ್ನು ಅಳವಡಿಸಿಕೊಂಡಿದ್ದರು.

57 ವರ್ಷದ ಅನಿತಾ ಆನಂದ್‌ ಆಕ್ಸ್‌ ಫರ್ಡ್‌ ಯೂನಿರ್ವಸಿಟಿ ಪದವೀಧರೆಯಾಗಿದ್ದಾರೆ. ಅನಿತಾ ಅವರು ಓಕ್‌ ವಿಲ್ಲೆಯ ಸಂಸದೆಯಾಗಿದ್ದರು. ನೋವಾ ಸ್ಕೋಟಿಯಾದಲ್ಲಿ ಜನಿಸಿದ್ದ ಅನಿತಾ ಆನಂದ್‌, 1985ರಲ್ಲಿ ಓನ್‌ ಟಾರಿಯೋಕ್ಕೆ ಸ್ಥಳಾಂತರಗೊಂಡಿದ್ದರು. ಅನಿತಾ ಮತ್ತು ಪತಿ ಜಾನ್‌ ಹಾಗೂ ನಾಲ್ವರು ಮಕ್ಕಳೊಂದಿಗೆ ಓಕ್‌ ವಿಲ್ಲೆಯಲ್ಲಿ ವಾಸವಾಗಿರುವುದಾಗಿ ವರದಿ ತಿಳಿಸಿದೆ.

18ನೇ ವಯಸ್ಸಿನಲ್ಲಿ ಅಂದರೆ 1985ನಲ್ಲಿ ಒಂಟಾರಿಯೊಗೆ ಸ್ಥಳಾಂತರಗೊಂಡು ರಾಜಕೀಯ ವಿಜ್ಞಾನದಲ್ಲಿ ಪದವಿ ಪಡೆದರು. ಬಳಿಕ ಬ್ಯಾಚುಲರ್ ಆಫ್ ಆರ್ಟ್ಸ್ (ಆನರ್ಸ್) ಪದವಿಯನ್ನು ಆಕ್ಸ್ಫರ್ಡ್ ವಿವಿಯಿಂದ ಪಡೆದರು. ಡಾಲ್ ಹೌಸಿ ವಿವಿ ಮತ್ತು ಟೊರಾಂಟೊ ವಿವಿಯಿಂದ ಕಾನೂನು ವಿಷಯದಲ್ಲಿ ಬ್ಯಾಚುಲರ್ ಡಿಗ್ರಿ ಮತ್ತು ಮಾಸ್ಟರ್ಸ್ ಡಿಗ್ರಿ ಪಡೆದರು. ಯೆಲೆ ಲಾ ಸ್ಕೂಲ್ ಸೇರಿದಂತೆ ವಿವಿಧೆಡೆ ಅಧ್ಯಾಪನಾ ವೃತ್ತಿ ಕೈಗೊಂಡರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು