LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Chikkaballapura

`ಕೇಂದ್ರ ಸರ್ಕಾರ ಹಲವು ಮಹತ್ವದ ಯೋಜನೆಗಳನ್ನು ರೂಪಿಸಿ ವಿವಿಧ ಇಲಾಖೆಗಳ ಮೂಲಕ ತಲುಪಿಸುತ್ತಿದೆ’

ಚಿಕ್ಕಬಳ್ಳಾಪುರ: ದೇಶದ ಪ್ರತಿಮೂಲೆಯಲ್ಲಿರುವ ಕಟ್ಟಕಡೆಯವ್ಯಕ್ತಿಯನ್ನೂ ಗಮನದಲ್ಲಿಟ್ಟು ಕೊಂಡು ಕೇಂದ್ರ ಸರ್ಕಾರ ಹಲವು ಮಹತ್ವದ ಯೋಜನೆಗಳನ್ನು ರೂಪಿಸಿ ವಿವಿಧ ಇಲಾಖೆಗಳ ಮೂಲಕ ತಲುಪಿಸುತ್ತಿದೆ ಎಂದು ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಸಂಸದ ಡಾ. ಕೆ.ಸುಧಾಕರ್ ಹೇಳಿದ್ದಾರೆ.

ಅವರು ಇಂದು ಚಿಕ್ಕಬಳ್ಳಾಪುರ ಜಿಲ್ಲೆ ಬಾಗೇಪಲ್ಲಿ ಪಟ್ಟಣದ ನ್ಯಾಷನಲ್ ಪದವಿ ಕಾಲೇಜಿನಲ್ಲಿ ಕೇಂದ್ರ ಸಂವಹನ ಇಲಾಖೆ ಮೈಸೂರು, ಕೇಂದ್ರ ವಾರ್ತಾ ಮತ್ತು ಪ್ರಸಾರ ಸಚಿವಾಲಯ ಹಾಗೂ ಜಿಲ್ಲಾಡಳಿತದ ಸಹಯೋಗದಲ್ಲಿ ಆಯೋಜಿಸಿದ್ದ ಪೋಷಣ್ ಅಭಿಯಾನ, ನೂತನ ಅಪರಾಧ ಕಾನೂನುಗಳು, ಪ್ರಧಾನ ಮಂತ್ರಿ ದೂರದೃಷ್ಟಿ 2047 ಮತ್ತು ಪ್ರಧಾನ ಮಂತ್ರಿ ಸೂರ್ಯಘರ್ ಯೋಜನೆ ಸೇರಿದಂತೆ ಕೇಂದ್ರ ಪುರಸ್ಕೃತ ಯೋಜನೆಗಳ ಕುರಿತು ಮೂರು ದಿನಗಳ ವಿಶೇಷ ಛಾಯಾಚಿತ್ರ ಪ್ರದರ್ಶನ ಮತ್ತು ಜಾಗೃತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಕೇಂದ್ರ ಸರ್ಕಾರ ಬಡವರು, ದೀನ ದುರ್ಬಲರು, ಕೃಷಿ ಕಾರ್ಮಿಕರು, ಯುವಜನರು, ಗಿರಿಜನರು ಮತ್ತು ಮಹಿಳೆಯರನ್ನು ದೃಷ್ಟಿಯಲ್ಲಿ ಇಟ್ಟುಕೊಂಡು ಹಲವು ಮಹತ್ವದ ಯೋಜನೆಗಳನ್ನು ಜಾರಿ ಮಾಡಿ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುತ್ತಿದೆ. ಪ್ರತಿ ಮನೆಗೆ ಶುದ್ಧ ಕುಡಿಯುವ ನೀರು ಪೂರೈಕೆ ಮಾಡುವ ಜಲಜೀವನ್ ಮಿಷನ್, ಮಹಿಳೆಯರ ಆರೋಗ್ಯ ಮತ್ತು ಸ್ವಾಭಿಮಾನದ ಸಂಕೇತವಾಗಿ ಸ್ವಚ್ಛ ಭಾರತ್ ಯೋಜನೆಯಡಿಯ ವೈಯಕ್ತಿಕ ಶೌಚಾಲಯ ನಿರ್ಮಾಣ, ಮಹಿಳೆಯರು ಮತ್ತು ಮಕ್ಕಳಲ್ಲಿನ ಅಪೌಷ್ಟಿಕತೆ ನಿವಾರಣೆ ಮಾಡಲು ಮಾತೃವಂದನಾ ಮತ್ತು ಪೋಷಣ್ ಅಭಿಯಾನ ಮುಂತಾದ 70ಕ್ಕೂ ಹೆಚ್ಚು ಕಾರ್ಯಕ್ರಮ, ಯೋಜನೆಗಳನ್ನು ಕಳೆದ ಒಂದು ದಶಕದಲ್ಲಿ ಜಾರಿ ಮಾಡಲಾಗಿದೆ.

ದಶಕಗಳ ಹಿಂದೆಯೇ ದೇಶದಲ್ಲಿ ಬ್ಯಾಂಕುಗಳ ರಾಷ್ಟ್ರೀಕರಣವಾಗಿದ್ದರೂ ಬಡವರು, ಜನಸಾಮಾನ್ಯರೆಲ್ಲರೂ ಬ್ಯಾಂಕ್ ಗಳಲ್ಲಿ ಖಾತೆಗಳನ್ನು ಹೊಂದಲು ಜನಧನ್ ಯೋಜನೆ ಜಾರಿಯಾಗಬೇಕಾಯಿತು. ಕಳೆದ ಒಂದು ದಶಕದಲ್ಲಿ ಜನಧನ್ ಯೋಜನೆಯಡಿ 48 ಕೋಟಿ ಜನರು ಖಾತೆ ತೆರೆದಿದ್ದು, ಇದೊಂದು ದಾಖಲೆಯಾಗಿದೆ.
ಮುಖ್ಯವಾಗಿ ಗ್ರಾಮೀಣ ಭಾಗದ ಅಸಹಾಯಕ ವರ್ಗಗಳ ಶ್ರೇಯೋಭಿವೃದ್ಧಿಯಿಂದ ಈ ಯೋಜನೆಗಳನ್ನು ಜಾರಿ ಮಾಡಿದೆ.

ಕೇಂದ್ರ ಸರ್ಕಾರದ ವಿವಿಧ ಯೋಜನೆಗಳನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸಲು ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳು ಮತ್ತು ಸಿಬ್ಬಂದಿ ಪ್ರಾಮಾಣಿಕ ಪ್ರಯತ್ನ ಮಾಡಬೇಕು. ಸರ್ಕಾರದ ಯೋಜನೆಗಳು ಮತ್ತು ಕಾರ್ಯಕ್ರಮಗಳ ಕುರಿತು ವ್ಯಾಪಕ ಪ್ರಚಾರ ಮಾಡಿ ಜನರಲ್ಲಿ ಜಾಗೃತಿಯನ್ನೂ ಮೂಡಿಸಬೇಕು ಎಂದರು.ಇದೇ ಸಂದರ್ಭದಲ್ಲಿ ಕೇಂದ್ರ ಸರ್ಕಾರದ ಯೋಜನೆಗಳ ಕುರಿತು ಮಾಹಿತಿ ನೀಡಲಾಯಿತು. ಜೊತೆಗೆ ವಿವಿಧ ಫ್ಲೆಕ್ಸ್ ಬ್ಯಾನರ್, ಪ್ರದರ್ಶನ ಫಲಕ, ಸಾಕ್ಷ್ಯಚಿತ್ರ ಪ್ರದರ್ಶಿಸಿ ಅರಿವು ಮೂಡಿಸಲಾಯಿತು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು