LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಕೇರಳ ದೇಗುಲ ಕಾರ್ಯಕ್ರಮ ವೇಳೆ ಆನೆ ದಾಳಿ: ಸೊಂಡಿಲಿನಿಂದ ವ್ಯಕ್ತಿ ಬಿಸಾಡಿ ಆಕ್ರೋಶ; 20ಕ್ಕೂ ಹೆಚ್ಚು ಮಂದಿಗೆ ಗಾಯ

ಮಲಪ್ಪುರಂ: ಕೇರಳದ ಮಲಪ್ಪುರಂನಲ್ಲಿನ ದೇಗುಲವೊಂದರ ಧಾರ್ಮಿಕ ಉತ್ಸವದ ವೇಳೆ ಆನೆಯೊಂದು ದಾಳಿ ಮಾಡಿದ ಪರಿಣಾಮ ಕನಿಷ್ಠ 20 ಮಂದಿ ಗಾಯಗೊಂಡಿದ್ದಾರೆ.

ಕೇರಳದ ಮಲಪ್ಪುರಂನ ತಿರೂರಿನ ಬಿ.ಪಿ.ಅಂಗಡಿಯ ಜಾರಮ್ ಮೈದಾನದಲ್ಲಿ ಈ ಘಟನೆ ನಡೆದಿದ್ದು. ದೇಗುಲ ಉತ್ಸವಕ್ಕಾಗಿ ಸಿಂಗಾರಗೊಂಡು ನಿಂತಿದ್ದ ಆನೆಯೊಂದು ಏಕಾಏಕಿ ಆಕ್ರೋಶಗೊಂಡು ತನ್ನ ಮುಂದಿದ್ದ ವ್ಯಕ್ತಿ ಮೇಲೆ ಹಲ್ಲೆ ಮಾಡಿದೆ.

ವ್ಯಕ್ತಿಯನ್ನು ಸೊಂಡಿಲಿನಿಂದ ಎತ್ತಿಕೊಂಡ ಆನೆ ಏಕಾಏಕಿ ಬಟ್ಟೆ ಒಗೆಯುವಂತೆ ನೆಲಕ್ಕೆ ಒಗೆದಿದೆ. ಬಳಿಕ ಅಲ್ಲಿ ನೆರೆದಿದ್ದ ಜನರತ್ತ ಆನೆ ನುಗ್ಗಿದ್ದು ಈ ವೇಳೆ ಕನಿಷ್ಟ 20 ಮಂದಿ ಗಾಯಗೊಂಡಿದ್ದಾರೆ ಮತ್ತು ಈ ಪೈಕಿ ಇಬ್ಬರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.

ಮೂಲಗಳ ಪ್ರಕಾರ ಇಲ್ಲಿನ ಬಿಪಿ ಅಂಗಡಿಯಲ್ಲಿರುವ ಯಾಹೂ ತಂಗಳ್ ದೇಗುಲದಲ್ಲಿ ನಾಲ್ಕು ದಿನಗಳ ವಾರ್ಷಿಕ ಉತ್ಸವಗಳು ಅಥವಾ ನೇರ್ಚಾ ಕಾರ್ಯಕ್ರಮ ನಡೆಯುತ್ತಿತ್ತು. ಈ ವಿಶೇಷ ಕಾರ್ಯಕ್ರಮಕ್ಕಾಗಿ ತರಬೇತಿ ಪಡೆದ ಆನೆಗಳನ್ನು ಕರೆಸಲಾಗಿತ್ತು.

ಧಾರ್ಮಿಕ ಕಾರ್ಯಕ್ರಮದಲ್ಲಿ ಐದು ಆನೆಗಳು ಭಾಗಿಯಾಗಿದ್ದವು. ಆದರೆ ಕಾರ್ಯಕ್ರಮ ಮುಗಿಯುವ ಕೆಲವೇ ಗಂಟೆಗಳ ಮೊದಲು ಪಕ್ಕೋತ್ ಶ್ರೀಕುಟ್ಟನ್ ಎಂಬ ಹೆಸರಿನ ಆನೆಯು ದಿಢೀರ್ ಆಕ್ರೋಶಗೊಂಡು ದಾಳಿ ನಡೆಸಿದೆ. ಈ ಪೈಕಿ ಪಾಕತ್ ಶ್ರೀಕುಟ್ಟನ್ ಎಂಬ ಹೆಸರಿನ ಆನೆ ವ್ಯಕ್ತಿಯೊಬ್ಬನ ಮೇಲೆ ದಾಳಿ ಮಾಡಿ, ಸೊಂಡಿಲಿನಿಂದ ಎಳೆದು ಬಿಸಾಡಿದೆ. ಗಂಭೀರವಾಗಿ ಗಾಯಗೊಂಡ ವ್ಯಕ್ತಿಯನ್ನು ಕೊಟ್ಟಕಲ್‌ ಆಸ್ಪತ್ರೆಗೆ ದಾಖಲಿಸಲಾಗಿದೆ.

ಘಟನೆಯಿಂದ ಗಾಬರಿಗೊಂಡ ಜನರು ಓಡಲು ಪ್ರಾರಂಭಿಸಿದ್ದಾರೆ. ಇದರಿಂದ ಕಾಲ್ತುಳಿತವಾಗಿ 17 ಮಂದಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಗಾಯಾಳುಗಳು ತಿರೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮಾವುತರು ಹರಸಾಹಸಪಟ್ಟು ಆನೆಯನ್ನು ನಿಯಂತ್ರಣಕ್ಕೆ ತಂದಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು