LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಕೇರಳ 'ಮಿನಿ-ಪಾಕಿಸ್ತಾನ', ಅದಕ್ಕೆ ರಾಹುಲ್, ಪ್ರಿಯಾಂಕಾ ಗೆದ್ದರು: ಮಹಾ ಸಚಿವ ರಾಣೆ

ಪುಣೆ: ಮಹಾರಾಷ್ಟ್ರದ ಮೀನುಗಾರಿಕಾ ಸಚಿವ ನಿತೇಶ್ ರಾಣೆ ಅವರು ವಿವಾದಾತ್ಮಕ ಹೇಳಿಕೆ ನೀಡಿದ್ದು, ಕೇರಳ "ಮಿನಿ-ಪಾಕಿಸ್ತಾನ". ಅದಕ್ಕೆ ಕಾಂಗ್ರೆಸ್ ನಾಯಕರಾದ ಪ್ರಿಯಾಂಕಾ ಗಾಂಧಿ ವಾದ್ರಾ ಮತ್ತು ರಾಹುಲ್ ಗಾಂಧಿ ಅವರನ್ನು ಗೆಲ್ಲಿಸಲಾಗಿದೆ ಎಂದು ಭಾರತೀಯ ಜನತಾ ಪಕ್ಷದ(ಬಿಜೆಪಿ) ನಾಯಕ ಹೇಳಿದ್ದಾರೆ.

"ಕೇರಳ ಮಿನಿ ಪಾಕಿಸ್ತಾನವಾಗಿದೆ. ಅದಕ್ಕಾಗಿಯೇ ರಾಹುಲ್ ಗಾಂಧಿ ಮತ್ತು ಅವರ ಸಹೋದರಿ ಪ್ರಿಯಾಂಕಾ ಗಾಂಧಿ ಅಲ್ಲಿಂದ ಆಯ್ಕೆಯಾಗಿದ್ದಾರೆ. ಎಲ್ಲಾ ಭಯೋತ್ಪಾದಕರು ಅವರಿಗೆ ಮತ ಹಾಕುತ್ತಾರೆ. ಇದು ಸತ್ಯ. ಇವರೆಲ್ಲಾ ಭಯೋತ್ಪಾದಕರ ನೆರವಿನಿಂದ ಸಂಸದರಾಗಿದ್ದಾರೆ" ಎಂದು ರಾಣೆ ಹೇಳಿದ್ದಾರೆ.

ಪುಣೆ ಜಿಲ್ಲೆಯ ಪುರಂದರ ತಾಲೂಕಿನಲ್ಲಿ ಅಫ್ಜಲ್ ಖಾನ್ ಎದುರು ಛತ್ರಪತಿ ಶಿವಾಜಿಯ ಗೆಲುವಿನ ವರ್ಷಾಚರಣೆ ವೇಳೆ ರಾಣೆ ಈ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ತಮ್ಮ ಹೇಳಿಕೆಗೆ ತೀವ್ರ ವಿರೋಧ ವ್ಯಕ್ತವಾಗುತ್ತಿದ್ದಂತೆ ರಾಣೆ, ಕೇರಳ ಭಾರತದ ಭಾಗವಾಗಿದೆ ಎಂದು ಸ್ಪಷ್ಟಪಡಿಸಿದರು. ಆದರೆ ಕೇರಳನ್ನು ಪಾಕಿಸ್ತಾನಕ್ಕೆ ಹೋಲಿಸಿದ ಹೇಳಿಕೆಯನ್ನು ಸಮರ್ಥಿಸಲು "ಧಾರ್ಮಿಕ ಮತಾಂತರಗಳು" ಮತ್ತು "ಲವ್ ಜಿಹಾದ್" ನಂತಹ ವಿಷಯಗಳನ್ನು ಉಲ್ಲೇಖಿಸಿದ್ದು, ತಮ್ಮ ಹೇಳಿಕೆ ವಾಸ್ತವಿಕವಾಗಿದೆ ಎಂದಿದ್ದಾರೆ.

ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ನಾರಾಯಣ ರಾಣೆ ಅವರ ಪುತ್ರ ನಿತೇಶ್ ರಾಣೆ ಅವರು ಇತ್ತೀಚೆಗೆ ಮುಕ್ತಾಯಗೊಂಡ 2024 ರ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಕಂಕಾವ್ಲಿ ಕ್ಷೇತ್ರದಿಂದ ಗೆದ್ದಿದ್ದಾರೆ. ನೂತನ ಸಚಿವ ಸಂಪುಟದಲ್ಲಿ ರಾಣೆ ಅವರಿಗೆ ಮೀನುಗಾರಿಕೆ ಮತ್ತು ಬಂದರು ಖಾತೆ ನೀಡಲಾಗಿದೆ.

ಈ ಕುರಿತು ಪ್ರತಿಕ್ರಿಯಿಸಿರುವ ಕಾಂಗ್ರೆಸ್ ವಕ್ತಾರ ಅತುಲ್ ಲೋಂಧೆ ಪಾಟೀಲ್, ಪ್ರಧಾನಿ ನರೇಂದ್ರ ಮೋದಿ ಮತ್ತು ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ವಿರುದ್ಧ ವಾಗ್ದಾಳಿ ನಡೆಸಿದ್ದು, ರಾಣೆ ಸಂಪುಟದ ಭಾಗವಾಗಿ ಉಳಿಯುವ ಅಗತ್ಯವೇನೆಂದು ಪ್ರಶ್ನಿಸಿದ್ದಾರೆ.

"ನಿತೇಶ್ ರಾಣೆ ಅವರಿಂದ ಇನ್ನೇನು ನಿರೀಕ್ಷಿಸಬಹುದು? ಅವರು ಇದನ್ನು ಮಾಡಲು ಮಾತ್ರ ಸಚಿವರಾಗಿದ್ದಾರೆ. ಆದರೆ, ನಾನು ಪ್ರಧಾನಿ ನರೇಂದ್ರ ಮೋದಿ ಮತ್ತು ದೇವೇಂದ್ರ ಫಡ್ನವಿಸ್ ಅವರನ್ನು ಕೇಳಲು ಬಯಸುತ್ತೇನೆ. ಸಚಿವರಾಗಿರುವ ವ್ಯಕ್ತಿ(ರಾಣೆ) ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಭಾರತದ ಸಾರ್ವಭೌಮತ್ವ ಮತ್ತು ಐಕ್ಯತೆಯನ್ನು ಕಾಪಾಡಬೇಕಾದ ಸಚಿವರು ದೇಶದ ಒಂದು ರಾಜ್ಯವನ್ನು ಪಾಕಿಸ್ತಾನಕ್ಕೆ ಹೋಲಿಸಿ, ಅಲ್ಲಿನ ಮತದಾರರನ್ನು 'ಭಯೋತ್ಪಾದಕರು' ಎಂದು ಕರೆದಿದ್ದಾರೆ. ಅವರಿಗೆ ಸಚಿವ ಸ್ಥಾನದಲ್ಲಿ ಮುಂದುವರೆಯುವ ನೈತಿಕ ಹಕ್ಕಿದೆಯೇ?

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು