LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
National News

ಕ್ಯಾಲಿಫೋರ್ನಿಯಾ: ವಾಣಿಜ್ಯ ಕಟ್ಟಡಕ್ಕೆ ಲಘು ವಿಮಾನ ಡಿಕ್ಕಿ; ಇಬ್ಬರು ಸಾವು- 18 ಮಂದಿಗೆ ಗಾಯ

ಕ್ಯಾಲಿಫೋರ್ನಿಯಾ: ದಕ್ಷಿಣ ಕ್ಯಾಲಿಫೋರ್ನಿಯಾದಲ್ಲಿನ ವಾಣಿಜ್ಯ ಕಟ್ಟಡವೊಂದಕ್ಕೆ ಲಘು ವಿಮಾನ ಡಿಕ್ಕಿಯಾಗಿದೆ. ದುರಂತದಲ್ಲಿ ಇಬ್ಬರು ಮೃತಪಟ್ಟು, 18 ಮಂದಿ ಗಾಯಗೊಂಡಿದ್ದಾರೆ.

ಲಾಸ್‌ ಏಂಜಲೀಸ್‌ನಿಂದ ಆಗ್ನೇಯಕ್ಕೆ ಸುಮಾರು 40 ಕಿ.ಮೀ ದೂರದಲ್ಲಿರುವ ಪುಲ್ಲೆರ್ಟನ್‌ ಮುನಿಸಿಪಲ್‌ ವಿಮಾನ ನಿಲ್ದಾಣದ ಸಮೀಪ ಗುರುವಾರ ಮಧ್ಯಾಹ್ನ 2ರ ಸುಮಾರಿಗೆ ವಿಮಾನವು ಕಟ್ಟಡಕ್ಕೆ ಡಿಕ್ಕಿಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪೀಠೋಪಕರಣ ತಯಾರಿಕಾ ಕಂಪನಿಯ ಕಟ್ಟಡಕ್ಕೆ ಭಾರಿ ಹಾನಿಯಾಗಿದೆ.

ಅಪಘಾತದ ಸಮಯದಲ್ಲಿ ಸುಮಾರು 200 ಜನರು ಪೀಠೋಪಕರಣ ತಯಾರಿಕಾ ಘಟಕದೊಳಗೆ ಕೆಲಸ ಮಾಡುತ್ತಿದ್ದರು ಎಂದು ಅಪಘಾತದ ಸ್ಥಳದಲ್ಲಿದ್ದ ಪೊಲೀಸ್ ಅಧಿಕಾರಿಗಳು ಹಂಚಿಕೊಂಡಿದ್ದಾರೆ. ಸಣ್ಣ ವಿಮಾನವು ಈ ಬೃಹತ್ ಕಟ್ಟಡದ ಮೇಲ್ಛಾವಣಿಗೆ ಡಿಕ್ಕಿ ಹೊಡೆದು ಕನಿಷ್ಠ 18 ಜನರು ಗಾಯಗೊಂಡಿದ್ದಾರೆ. ಗಾಯಗೊಂಡವರಲ್ಲಿ ಹತ್ತು ಮಂದಿಯನ್ನು ಅಗತ್ಯ ಚಿಕಿತ್ಸೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ. ಉಳಿದ ಎಂಟು ಮಂದಿ ಅಪಘಾತ ಸ್ಥಳದಲ್ಲಿ ಚಿಕಿತ್ಸೆ ಪಡೆದು ಶೀಘ್ರದಲ್ಲೇ ಬಿಡುಗಡೆಗೊಂಡಿದ್ದಾರೆ.

ವಿಮಾನದಲ್ಲಿ ಎಷ್ಟು ಮಂದಿ ಇದ್ದರು, ಮೃತಪಟ್ಟಿರುವವರು ವಿಮಾನದಲ್ಲಿದ್ದವರೇ ಅಥವಾ ಘಟನಾ ಸ್ಥಳದಲ್ಲಿ ಇದ್ದವರೇ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಅಪಘಾತಕ್ಕೀಡಾದ ವಿಮಾನ 'Van’s RV-10' ಎಂದು ತಿಳಿಸಿರುವ ಫೆಡರಲ್‌ ವಿಮಾನಯಾನ ಅಧಿಕಾರಿಗಳು, ಘಟನೆ ಕುರಿತು ರಾಷ್ಟ್ರೀಯ ಸಾರಿಗೆ ಸುರಕ್ಷತಾ ಮಂಡಳಿಯೊಂದಿಗೆ ತನಿಖೆ ನಡೆಸುವುದಾಗಿ ಹೇಳಿದೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು