LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Bangalore Rural

ಕ್ರೀಡಾ ಚಟುವಟಿಕೆಗಳ ಮೂಲಕ ವಿದ್ಯಾರ್ಥಿಗಳಲ್ಲಿ ದೈಹಿಕ ಮತ್ತು ಮಾನಸಿಕ ಆರೋಗ್ಯ ಹೆಚ್ಚಿಸುತ್ತದೆ

ದೊಡ್ಡಬಳ್ಳಾಪುರ : ಕ್ರೀಡೆಗಳು ವಿದ್ಯಾರ್ಥಿಗಳಲ್ಲಿ ದೈಹಿಕ ಮತ್ತು ಮಾನಸಿಕ ಆರೋಗ್ಯವನ್ನು ಸದೃಢಗೊಳಿಸುತ್ತದೆ ಎಂದು ವಿದ್ಯಾರ್ಥಿ ನಿಲಯದ ನಿಲಯದ ಮುಖ್ಯಸ್ಥೆ ಅವರು ರಾಧಾಮಣಿ ಅಭಿಪ್ರಾಯ ಪಟ್ಟರು.

ನಗರದ ಸಮಾಜ ಕಲ್ಯಾಣ ಇಲಾಖೆಯ ಸರ್ಕಾರಿ ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿ ನಿಲಯದಲ್ಲಿ ನಡೆದ ವಾರ್ಷಿಕ ಕ್ರಿಕೆಟ್ ಕ್ರೀಡಾಕೂಟವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಕ್ರೀಡೆಗಳು ವಿದ್ಯಾರ್ಥಿಗಳಲ್ಲಿ ದೈಹಿಕ ಮತ್ತು ಮಾನಸಿಕ ಆರೋಗ್ಯವನ್ನು ಸದೃಢಗೊಳಿಸುವುದಲ್ಲದೆ, ತಮ್ಮಲ್ಲಿ ಅಡಗಿರುವ ಸಾಮರ್ಥ್ಯವನ್ನು ತೋರಿಸಲು ಸೂಕ್ತ ವೇದಿಕೆಯಾಗುತ್ತದೆ. ಆಟದಲ್ಲಿ ಸೋಲು ಗೆಲುವುಗಳು ಸಾಮಾನ್ಯ. ಸೋಲು ಗೆಲುವನ್ನು ಸಮಾನವಾಗಿ ಸ್ವೀಕರಿಸಬೇಕು, ಆಗ ಮಾತ್ರ ಅವರು ಮುಂದೆ ಜಯಿಸಲು ಸಾಧ್ಯವಾಗುತ್ತದೆ ಎಂದು ಸಲಹೆ ನೀಡಿದರು.

ಸಮಾಜ ಕಲ್ಯಾಣ ಇಲಾಖೆಯ ಓಬಳೇಶ್ ಮಾತನಾಡಿ, ಪ್ರತಿಯೊಬ್ಬ ವಿದ್ಯಾರ್ಥಿಯು ಪಾಠದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಬೇಕು. ಕ್ರೀಡೆಗಳಲ್ಲಿ ಭಾಗವಹಿಸುವುದರಿಂದ ವಿದ್ಯಾರ್ಥಿಗಳಲ್ಲಿ ಶಿಸ್ತು ಮತ್ತು ಸಂಯಮ ಕಲಿಯಬಹುದು ಎಂದರು.ನಿಲಯದ ಜಿ.ಸಿ.ಮುನಿಕೃಷ್ಣ ಮಾತಾನಾಡಿ, ಕ್ರೀಡೆಗಳು ವಿದ್ಯಾರ್ಥಿಗಳಲ್ಲಿ ಸ್ಪರ್ಧಾ ಮನೋಭಾವವನ್ನು ತುಂಬಿಸಿ, ನಾಯಕತ್ವ ಗುಣವನ್ನು ಬೆಳೆಸುತ್ತದೆ ಮತ್ತು ಮನಸ್ಸಿಗೆ ಮನರಂಜನೆಯನ್ನು ನೀಡುತ್ತದೆ ಎಂದರು.

ಪಂದ್ಯದಲ್ಲಿ “ಸ್ಟಾರ್ ಬಾಯ್ಸ್” ತಂಡವು ವಿಜೇತವಾಯಿತು ಮತ್ತು “ಹಂಟರ್ಸ್” ತಂಡ ರನ್ನರ್ ಆಫ್ ಆಯಿತು. ಪಂದ್ಯದಲ್ಲಿ ಅತ್ಯುತ್ತಮ ಬ್ಯಾಟ್ಸ್ಮನ್ ಆಗಿ ಹೇಮಂತ್ ಮತ್ತು ಶಶಿಕಿರಣ್ ಹೊರಹೊಮ್ಮಿದರೆ, ಅತ್ಯುತ್ತಮ ಬೌಲರ್ ಆಗಿ ಪವನ್ ಪ್ರಶಸ್ತಿಯನ್ನು ಪಡೆದರು.ಈ ಸಂದರ್ಭದಲ್ಲಿ ಇಲಾಖೆಯ ಸಂದೀಪ್, ಶಾಂತಮ್ಮ, ಮುನಿ ರತ್ನಮ, ಮಂಜಮ್ಮ, ನೇತ್ರಾ, ಚಂದ್ರು ಮುಂತಾದವರು ಉಪಸ್ಥಿತರಿದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು