LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Bangalore Urban

ಕ್ಷೇತ್ರದ ಅಭಿವೃದ್ಧಿಗೆ ಅನುದಾನದ ಕೊರತೆ ಇಲ್ಲ: ಸೋಮಶೇಖರ್

ಕೆಂಗೇರಿ: ಕ್ಷೇತ್ರದ ಅಭಿವೃದ್ಧಿ ವಿಷಯದಲ್ಲಿ ಯಾವುದೇ ರಾಜಿ ಇಲ್ಲದಂತೆ ಅನುದಾನವನ್ನು ಪಡೆದು ಸಂಪೂರ್ಣವಾಗಿ ಅಭಿವೃದ್ಧಿ ಕಾಮಗಾರಿಯನ್ನು ನಡೆಸಲಾಗುತ್ತದೆ ಎಂದು ಯಶವಂತಪುರ ವಿಧಾನಸಭಾ ಕ್ಷೇತ್ರದ ಶಾಸಕ ಎಸ್ ಟಿ ಸೋಮಶೇಖರ್ ಅವರು ತಿಳಿಸಿದರು.

ದೊಡ್ಡಬೆಲೆ ಮುಖ್ಯರಸ್ತೆಯ ಅಭಿವೃದ್ಧಿ ಕಾಮಗಾರಿಗೆ ದೊಡ್ಡಬೆಲೆ ಮುಖ್ಯರಸ್ತೆಯ ವೃಂದಾವನ ಲೇಔಟ್ ಕೆಂಗೇರಿ ಪ್ರಾದೇಶಿಕ ಕಾರ್ಯಾಗಾರದ ಮುಂಭಾಗದಲ್ಲಿ ಭೂಮಿ ಪೂಜೆಯನ್ನು ನೆರವೇರಿಸಿ ಮಾತನಾಡಿದ ಅವರು ರಾಜ್ಯ ಸರ್ಕಾರ ಯಶವಂತಪುರ ವಿಧಾನಸಭಾ ಕ್ಷೇತ್ರದ ಕ್ಷೇತ್ರದ ಹದಿನ್ಯೂಳು ಗ್ರಾಮ ಪಂಚಾಯತಿ ಮತ್ತು ಐದು ಬಿಬಿಎಂಪಿ ವಾರ್ಡ್ ಗಳ ಅಭಿವೃದ್ಧಿಗೆ ವಿಶೇಷವಾದ ಅನುದಾನವನ್ನು ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗು ಉಪ ಮುಖ್ಯಮಂತ್ರಿಗಳಾದ ಡಿಕೆ ಶಿವಕುಮಾರ್ ನೀಡಿದ್ದಾರೆ ಕ್ಷೇತ್ರದ ವ್ಯಾಪ್ತಿಯಲ್ಲಿ ಈಗಾಗಲೇ ಬೃಹತ್ ಪ್ರಮಾಣದ ನೀರಿನ ಪೈಪ್ ಅಳವಡಿಕೆ ಕಾಮಗಾರಿ ಪೂರ್ಣಗೊಂಡಿದೆ.

ಜಲಜೀವನ್ ವಿಷನ್ ಅಡಿಯಲ್ಲಿ ಗ್ರಾಮಗಳ ಮನೆ ಮನೆಗೆ ನಳ ನೀರನ್ನು ನೀಡಲಾಗುತ್ತಿದೆ ಗ್ರಾಮಗಳನ್ನು ಸಂಪರ್ಕಿಸುವ ರಸ್ತೆಗಳನ್ನು ಮೇಲ್ದರ್ಜೆಗೆ ಏರಿಸುವ ಪ್ರಕ್ರಿಯೆಯಲ್ಲಿ ತೊಡಗಿಸಿಕೊಳ್ಳಲಾಗಿದೆ ಎಂದರು.ಈ ಸಂದರ್ಭದಲ್ಲಿ ಬಂಡೇಮಠ ವಾರ್ಡ್ ಕಾಂಗ್ರೆಸ್ ಅದ್ಯಕ್ಷ ಟಿ ಪ್ರಭಾಕರ್ ಹೆಚ್ ಗೂಲ್ಲಹಳ್ಳಿ ಗ್ರಾಮ ಪಂಚಾಯತಿ ಅದ್ಯಕ್ಷ ಪಿ ನಾಗೇಶ್ ದೊಡ್ಡಬೆಲೆ ಗ್ರಾಮದ ಹಿರಿಯ ಕಾಂಗ್ರೆಸ್ ಮುಖಂಡ ನಾರಾಯಣಪ್ಪ ಹೆಚ್ ಗೂಲ್ಲಹಳ್ಳಿ ಗ್ರಾಮ ಪಂಚಾಯತಿ ಕಾಂಗ್ರೆಸ್ ಅದ್ಯಕ್ಷ ಶಿವಕುಮಾರ್ ಯೋಗಾನಂದ್ ಗ್ರಾಮ ಪಂಚಾಯತಿ ಸದಸ್ಯರಾದ ಮುನಿರಾಜ್ ನಾಗರಾಜ್ ಕೇಬಲ್ ಹರೀಶ್ ಶಾಹೀದ್ ಸೇರಿದಂತೆ ಹಲವಾರು ಮುಖಂಡರು ಭಾಗವಹಿಸಿದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು