LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Bangalore Urban

ಖಬರಸ್ತಾನಗಳಿಗೆ ಕಂದಾಯ ಭೂಮಿ

ಬೆಂಗಳೂರು: ವಕ್ಫ್ ಭೂ ವಿವಾದ ಬೆನ್ನಲ್ಲೇ ಮತ್ತೊಂದು ವಿವಾದ ಉದ್ಭವಿಸುವ ಸಾಧ್ಯತೆ ಇದೆ. ಮುಸ್ಲಿಮರ ಖಬರಸ್ತಾನಗಳಿಗೆ ಸರ್ಕಾರಿ, ಕಂದಾಯ ಭೂಮಿ ನೀಡಲು ಸರ್ಕಾರ ಮುಂದಾಗಿದೆ ಎನ್ನಲಾಗಿದ್ದು, ಈ ಸಂಬಂಧ ಪರ-ವಿರೋಧ ಚರ್ಚೆ ಶುರುವಾಗಿದೆ. ಈಗಾಗಲೇ ವಕ್ಫ್ ವಿಚಾರವಾಗಿ ದೊಡ್ಡ ಕದನವೇ ರಾಜ್ಯದಲ್ಲಿ ನಡೆಯುತ್ತಿದ್ದು, ಈಗ ಹೊಸದೊಂದು ವಿವಾದ ತಲೆದೋರಿದೆ.
ರಾಜ್ಯದ ೩೨೮ ಖಬರಸ್ತಾನಗಳಿಗೆ ಸರ್ಕಾರಿ ಭೂಮಿ ನೀಡುವ ಬಗ್ಗೆ ಸರ್ಕಾರ ತೀರ್ಮಾನ ಮಾಡಿದೆ. ಸರ್ಕಾರಿ
ಜಮೀನನ್ನು ಮಂಜುರಾತಿ ನೀಡಲು ಸರ್ಕಾರ ಮುಂದಾಗಿದೆ. ಸುಮಾರು ೨೭೫೦ ಎಕರೆ ಭೂಮಿ ಮಂಜುರಾತಿ ನೀಡಲು ತಯಾರಿ ನಡೆಸಿದ್ದು, ಸರ್ಕಾರಿ ಭೂಮಿಯನ್ನು ಖಬರಸ್ತಾನವಾಗಿ ಪರಿವರ್ತಿಸುವ ಯೋಜನೆ ಇದಾಗಿದೆ ಎಂದು ಹೇಳಲಾಗಿದೆ.
ಬೆಂಗಳೂರು, ರಾಯಚೂರು, ಕಲಬುರಗಿ, ಹಾಸನ, ದಕ್ಷಿಣಕನ್ನಡ, ಉಡುಪಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಯೋಜನೆ ಕಾರ್ಯಗತಗೊಳಿಸಲಾಗುತ್ತಿದೆ. ವಕ್ಫ್ ಅಧೀನದ ಮಸೀದಿ, ಪ್ರಾರ್ಥನಾ ಮಂದಿರದ ಅಧೀನದಲ್ಲಿರುವ ಖಬರಸ್ತಾನಗಳಿಗೆ ಜಮೀನು ನೀಡಲಾಗುತ್ತಿದೆ.
ಈ ಬಗ್ಗೆ ಈ ಹಿಂದೆಯೇ ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿಗೆ, ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಆದೇಶಿಸಿದ್ದರು. ಕಳೆದ ಎಪ್ರಿಲ್ ೧೬ರಂದು ಅಂದಿನ ಅಪರ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ , ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ರಾಜೇಂದ್ರ ಕುಮಾರ್ ಕಟಾರಿಯಗೆ ಸೂಚನೆ ನೀಡಿದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು