LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Entertainment News

ಗಟ್ಟಿ ಕಥೆಯ ನಿರೀಕ್ಷೆಯ ಮುಂದೆ ಗರಿಬಿಚ್ಚಿತು `ಬಿಳಿಚುಕ್ಕಿ ಹಳ್ಳಿಹಕ್ಕಿ'!

ಕಂಟೆಂಟ್ ಓರಿಯಂಟೆಡ್ ಸಿನಿಮಾಗಳ ಗುಂಗು ಹತ್ತಿಸಿಕೊಂಡ ದೊಡ್ಡ ಪ್ರೇಕ್ಷಕ ವರ್ಗವೊಂದು ಕನ್ನಡದಲ್ಲಿದೆ. ಅದೇ ಧಾಟಿಯ ಚಿತ್ರವೊಂದು ಪಕ್ಕಾ ಕಮರ್ಶಿಯಲ್ ಪಥದಲ್ಲಿ ರೂಪುಗೊಂಡಿದೆಯೆಂದರೆ ಅದರ ಬಗೆಗೊಂದು ಕುತೂಹಲ ತಾನಾಗಿಯೇ ಮೂಡಿಕೊಳ್ಳುತ್ತೆ. ಸದ್ಯ ಅಂಥಾದ್ದೊಂದು ಕೌತುಕಕ್ಕೆ ಕಾರಣವಾಗಿರುವ ಚಿತ್ರ 'ಬಿಳಿಚುಕ್ಕಿ ಹಳ್ಳಿಹಕ್ಕಿ'. ಈ ಹಿಂದೆ `ಮಹಿರಾ' ಎಂಬ ಚಿತ್ರವನ್ನು ನಿರ್ದೇಶನ ಮಾಡಿ ಗಮನ ಸೆಳೆದಿದ್ದವರು ಮಹೇಶ್ ಗೌಡ.

ಇದೀಗ ಅವರುಸ್ವತಃ ನಿರ್ಮಾಣ, ನಿರ್ದೇಶನದ ಜವಾಬ್ದಾರಿ ಹೊತ್ತು ತಾವೇ ನಾಯಕನಾಗಿ ನಟಿಸಿರುವ ಚಿತ್ರ`ಬಿಳಿಚುಕ್ಕಿ ಹಳ್ಳಿಹಕ್ಕಿ'. ದಸರಾಹಬ್ಬಕ್ಕೆ ಶುಭ ಕೋರುವ ನಿಮಿತ್ತವಾಗಿ ಈ ಚಿತ್ರದ ಒಂದು ಪೋಸ್ಟರ್ ಅನಾವರಣಗೊಂಡಿದೆ. ಈ ಮೂಲಕ ಸದರಿ ಚಿತ್ರದತ್ತ ಪ್ರೇಕ್ಷಕರಚಿತ್ತ ಹೊರಳಿಕೊಂಡಿದೆ.
ಇಡೀ ದೇಶದಲ್ಲಿಯೇ ಮೊದಲ ಬಾರಿ ಈ ಸಿನಿಮಾ ಮೂಲಕ ವಿಟಿಲಿಗೋ ಅಂದರೆ, ತೊನ್ನಿನ ಭೂಮಿಕೆಯಲ್ಲಿ ತಯಾರಾದ ಚಿತ್ರವೆಂಬ ಹೆಗ್ಗಳಿಕೆ `ಬಿಳಿ
ಚುಕ್ಕಿ ಹಳ್ಳಿಹಕ್ಕಿ' ಚಿತ್ರಕ್ಕಿದೆ.

ಸಾಮಾನ್ಯವಾಗಿ ಇಂಥಾ ಕಥಾ ಹಂದರದಯಾವುದೇ ಸಿನಿಮಾದಲ್ಲಿ ಪಾತ್ರಧಾರಿಗಳು ಮೇಕಪ್ ಮೂಲಕ ಅದಕ್ಕೆ ಜೀವ ತುಂಬುತ್ತಾರೆ. ಆದರೆ, ಇಲ್ಲಿ ಸ್ವತಃ ವಿಟಿಲಿಗೋ ಬಾಧೆಗೀಡಾಗಿರುವ ಮಹೇಶ್ ಗೌಡ ಅವರೇ ನಾಯಕನ ಪಾತ್ರಕ್ಕೆ ಜೀವ ತುಂಬಿದ್ದಾರಂತೆ. ತೊನ್ನೆಂಬುದು ಅಪರಿಚಿತ ಕಾಯಿಲೆಯೇನಲ್ಲ. ಅದರ ಮನೋ ದೈಹಿಕ ಯಾತನೆಗಳಿವೆಯಲ್ಲಾ? ಅದು ಬೇರೆಯವರ ನಿಲುಕಿಗೆ ಸಲೀಸಾಗಿ ದಕ್ಕುವಂಥಾದ್ದಲ್ಲ.

ಇಷ್ಟೆಲ್ಲ ವಿವರ ಕೇಳಿದಾಕ್ಷಣ ಇದೊಂದು ಕಲಾತ್ಮಕ ಚಿತ್ರವೆಂಬ ಚಿತ್ರಣ ನಿಮ್ಮೊಳಗೆ ಮೂಡಿಕೊಂಡಿದ್ದರೆ, ಅದರಾಚೆಗೆ ಈ ಚಿತ್ರ ರೂಪುಗೊಂಡಿದೆ ಎಂಬುದು ಮಹೇಶ್ ಗೌಡರ ಭರವಸೆ. ಇಂಥಾದ್ದೊಂದು ಸೂಕ್ಷ್ಮ ಕಥೆಯನ್ನು ಪಕ್ಕಾ ಮನೋರಂಜನಾತ್ಮಕ ಅಂಶಗಳೊಂದಿಗೆ, ಕಮರ್ಶಿಯಲ್ ಧಾಟಿಯಲ್ಲಿಯೇ ಕಟ್ಟಿ ಕೊಡಲಾಗಿದೆಯಂತೆ. ರೊಮ್ಯಾಂಟಿಕ್ ಶೈಲಿಯಲ್ಲಿ ಸಾಗುವ ಈ ಚಿತ್ರದಲ್ಲಿ ಹಾಸ್ಯಕ್ಕೂ ಕೊರತೆಯೇನಿಲ್ಲ. ನಿಖರವಾಗಿ ಹೇಳಬೇಕೆಂದರೆ ನಗಿಸುತ್ತಲೇ ಅಳಿಸುವ,
ಬಹುಕಾಲ ಕಾಡುವ, ಎಲ್ಲ ವಯೋಮಾನದ, ಅಭಿರುಚಿಗಳ ಪ್ರೇಕ್ಷಕರಿಗೂ ಪಥ್ಯವಾಗುವಂತೆ ಈ ಚಿತ್ರವನ್ನು ಮಹೇಶ್ ಗೌಡ ರೂಪಿಸಿದ್ದಾರಂತೆ.

ಎರಡು ಪಾತ್ರಗಳನಡುವಿನ ಬಂಧದ ಸುತ್ತಾ ಸಾಗೋ ಈ ಕಥನ ಪ್ರೇಕ್ಷಕರಿಗೆ ಬೇರೆಯದ್ದೇ ಥರದ ಫೀಲ್ ಕೊಡಲಿದೆ ಎಂಬ ನಂಬಿಕೆ ಮಹೇಶ್ ಗೌಡ ಅವರಲ್ಲಿದೆ.
ಹೀಗೆ `ಬಿಳಿಚುಕ್ಕಿ ಹಳ್ಳಿಹಕ್ಕಿ' ಚಿತ್ರದ ಮೂಲಕ ಗಮನ ಸೆಳೆದಿರುವ ಮಹೇಶ್ ಗೌಡ ಲಂಡನ್‍ನಲ್ಲಿ ಎಂಬಿಎ ಪದವಿ ಪಡೆದುಕೊಂಡವರು. ಲಂಡನ್ ಫಿಲ್ಮ್ ಅಕಾಡೆಮಿಯಿಂದ ಫಿಲಂ ಮೇಕಿಂಗ್ ಕೋರ್ಸ್ ಅನ್ನೂ ಸಹ ಮಾಡಿಕೊಂಡಿದ್ದಾರೆ. ಬಹು ವರ್ಷಗಳ ಕಾಲ ಲಂಡನ್ನಿನಲ್ಲಿಯೇ ವಾಸವಿದ್ದ ಮಹೇಶ್ ಗೌಡ 2013ರಲ್ಲಿ ಸಿನಿಮಾ ರಂಗದಲ್ಲಿ ಏನಾದರೊಂದು ಸಾಧಿಸುವ ಕನಸಿನೊಂದಿಗೆ ಭಾರತಕ್ಕೆ ಮರಳಿದ್ದರು.

ಆರಂಭದಲ್ಲಿ ಒಂದಷ್ಟು ಪ್ರಯೋಗಗಳಿಗೆ ಒಡ್ಡಿಕೊಂಡು, ಹಿರಿಯ ನಿರ್ದೇಶಕ ಸುನೀಲ್ ಕುಮಾರ್ ದೇಸಾಯಿ ಗರಡಿಯಲ್ಲಿ ಪಳಗಿಕೊಂಡಿದ್ದರು. ಮಹಿರಾ ಚಿತ್ರ ನಿರ್ದೇಶನ ಮಾಡುವ ಮೂಲಕ ಕನಸಿನ ಹಾದಿಯಲ್ಲಿ ಮೊದಲ ಗುರುತು ಮೂಡಿಸಿದ್ದರು. ಇದೀಗ ಹೊನ್ನುಡಿ ಪ್ರೊಡಕ್ಷನ್ಸ್ ಬ್ಯಾನರಿನಡಿಯಲ್ಲಿ ಬಿಳಿಚುಕ್ಕಿ ಹಳ್ಳಿ ಹಕ್ಕಿ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ನಿರ್ದೇಶನದ ಜೊತೆಗೆ ನಾಯಕನಾಗಿ ನಟಿಸಿದ್ದಾರೆ. ನವೆಂಬರ್ ತಿಂಗಳಿನಲ್ಲಿ ಈ ಸಿನಿಮಾ ಬಗೆಗಿನ ಮತ್ತೊಂದಷ್ಟು ಅಚ್ಚರಿಯ ಸಂಗತಿಗಳು ಜಾಹೀರಾಗಲಿವೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು