LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಗಾಂಧಿಯೇತರ ಕಾಂಗ್ರೆಸ್ ನಾಯಕರಿಗೆ ಗಾಂಧಿ ಕುಟುಂಬ ಎಂದಿಗೂ ಗೌರವ ನೀಡಿಲ್ಲ: ಪ್ರಲ್ಹಾದ ಜೋಶಿ

ಅಗರ್ತಲಾ: ಗಾಂಧಿ ಕುಟುಂಬವು ಗಾಂಧಿಯೇತರ ಇತರ ಕಾಂಗ್ರೆಸ್ ನಾಯಕರಿಗೆ ಎಂದಿಗೂ ಗೌರವ ನೀಡಿಲ್ಲ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಭಾನುವಾರ ಆರೋಪಿಸಿದ್ದಾರೆ.

ಭಾರತದ ಮೊದಲ ಸಿಖ್ ಪ್ರಧಾನಿ ಮನಮೋಹನ್ ಸಿಂಗ್ ಅವರ ಅಂತಿಮ ಸಂಸ್ಕಾರವನ್ನು ನಿಗದಿತ ಸ್ಥಳದಲ್ಲಿ ನಡೆಸುವ ಬದಲು ನಿಗಮಬೋಧ ಘಾಟ್‌ನಲ್ಲಿ ನಡೆಸುವ ಮೂಲಕ ಕೇಂದ್ರ ಸರ್ಕಾರ ಅವರಿಗೆ ಅಗೌರವ ತೋರಿದೆ ಎಂಬ ಕಾಂಗ್ರೆಸ್ ಆರೋಪವನ್ನು ತಳ್ಳಿಹಾಕಿದ ಅವರು, ಇದು 'ದುರದೃಷ್ಟಕರ ಮತ್ತು ರಾಜಕೀಯ ಪ್ರೇರಿತ' ಎಂದು ಹೇಳಿದರು.

'ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರೊಂದಿಗಿನ ನಮ್ಮ ಸೈದ್ಧಾಂತಿಕ ಮತ್ತು ರಾಜಕೀಯ ಭಿನ್ನಾಭಿಪ್ರಾಯಗಳ ಹೊರತಾಗಿಯೂ, ಅವರು ಅತ್ಯಂತ ಗೌರವಾನ್ವಿತ ವ್ಯಕ್ತಿಯಾಗಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರ ಆಶಯದಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸಿಂಗ್ ಅವರ ಅಂತ್ಯಕ್ರಿಯೆಗೆ ಸಂಪೂರ್ಣ ಸರ್ಕಾರಿ ಗೌರವವನ್ನು ನೀಡಲು ಸಾಧ್ಯವಿರುವ ಎಲ್ಲ ಉಪಕ್ರಮಗಳನ್ನು ಕೈಗೊಂಡಿದ್ದಾರೆ' ಎಂದು ಅವರು ಸುದ್ದಿಸಂಸ್ಥೆ ಪಿಟಿಐಗೆ ತಿಳಿಸಿದರು.

ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಮಾತ್ರವಲ್ಲದೆ, ಮಾಜಿ ಪ್ರಧಾನಿ ಪಿವಿ ನರಸಿಂಹರಾವ್ ಮತ್ತು ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರಿಗೂ ಕಾಂಗ್ರೆಸ್ ಸರಿಯಾದ ಗೌರವವನ್ನು ನೀಡಿಲ್ಲ ಎಂದು ದೂರಿದರು. ತನ್ನ ತಂದೆಯ ಮರಣದ ನಂತರ ಕಾಂಗ್ರೆಸ್ ಕಾರ್ಯಕಾರಿ ಸಮಿತಿಯ (ಸಿಡಬ್ಲ್ಯುಸಿ) ಸಭೆಯನ್ನು ನಡೆಸಿಲ್ಲ ಎಂದು ಕಾಂಗ್ರೆಸ್ ಅನ್ನು ಪ್ರಣಬ್ ಮುಖರ್ಜಿ ಅವರ ಪುತ್ರಿಯೇ ಟೀಕಿಸುತ್ತಿದ್ದಾರೆ.

ವಾಸ್ತವದಲ್ಲಿ, ಗಾಂಧಿ ಕುಟುಂಬವು ಗಾಂಧಿಯೇತರ ಕಾಂಗ್ರೆಸ್ ನಾಯಕರಿಗೆ ಎಂದಿಗೂ ಗೌರವ ನೀಡಿಲ್ಲ. ಅವರು ಮಾಜಿ ಪ್ರಧಾನಿ ಪಿವಿ ನರಸಿಂಹ ರಾವ್‌ಗೆ ಭಾರತ ರತ್ನ ಪ್ರಶಸ್ತಿಯನ್ನು ಮತ್ತು ಸರ್ದಾರ್ ವಲ್ಲಭಭಾಯಿ ಪಟೇಲ್‌ ಅವರಿಗೆ ಗೌರವವನ್ನು ಸಹ ನೀಡಿಲ್ಲ. ಈ ಎಲ್ಲದರ ಬಗ್ಗೆ ಗಾಂಧಿ ಕುಟುಂಬವು ಆತ್ಮಾವಲೋಕನ ಮಾಡಿಕೊಳ್ಳಬೇಕು ಎಂದು ಜೋಶಿ ಒತ್ತಾಯಿಸಿದರು.

ಕೇಂದ್ರ ಗ್ರಾಹಕ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣೆ ಮತ್ತು ಹೊಸ ಮತ್ತು ನವೀಕರಿಸಬಹುದಾದ ಇಂಧನ ಸಚಿವರಾದ ಜೋಶಿ ಅವರು, ತಮ್ಮ ಸಚಿವಾಲಯಗಳ ಕೇಂದ್ರ ಪ್ರಾಯೋಜಿತ ಯೋಜನೆಗಳನ್ನು ಪರಿಶೀಲಿಸಲು ತ್ರಿಪುರಾಕ್ಕೆ ಎರಡು ದಿನಗಳ ಭೇಟಿಯಲ್ಲಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು