LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Belagavi

ಗುಂಡಿನ ದಾಳಿಗೆ ಯುವಕ ಬಲಿ; ನವಿಲು ಬೇಟೆಯಾಡುವಾಗ ಗುಂಡು ತಗುಲಿ ಸಾವು?

ಬೆಳಗಾವಿ: ಖಾನಾಪುರ ತಾಲ್ಲೂಕಿನ ಐತಿಹಾಸಿಕ ಹಲಸಿ ಗ್ರಾಮ ವ್ಯಾಪ್ತಿಯಲ್ಲಿ ಸೋಮವಾರ ನಸುಕಿನಲ್ಲಿ ಗುಂಡೇಟಿಗೆ ಯುವಕನೊಬ್ಬ ಬಲಿಯಾಗಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ.

ಯುವಕನ ಸಾವಿಗೆ ನವಿಲು ಬೇಟೆಗೂ ನಂಟು ಇದೆಯೇ ಅಥವಾ ಯುವಕರ ಗುಂಪೊಂದು ಹತ್ಯೆ ನಡೆಸಿದೆಯೇ? ಎಂಬುದು ಪೊಲೀಸರನ್ನು ಕಾಡುತ್ತಿರುವ ಮಿಲಿಯನ್ ಡಾಲರ್ ಪ್ರಶ್ನೆ. ಸೋಮವಾರ ಮುಂಜಾನೆ ಖಾನಾಪುರ ತಾಲೂಕಿನ ಹಲಸಿ ಎಂಬಲ್ಲಿ 31 ವರ್ಷದ ಅಲ್ತಾಫ್ ಹುಸೇನ್ ಮೃತಪಟ್ಟಿದ್ದಾರೆ.

ಘಟನೆಗೆ ಕಾರಣವೇನು ಎಂಬು ಎಂಬುದನ್ನುಕಂಡು ಹಿಡಿಯಲು ನಂದಗಡ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಸೋಮವಾರ ಬೆಳಗ್ಗೆ ಹಲಶಿ ನಿವಾಸಿ ಅಲ್ತಾಫ್ ಹುಸೇನ್ ಎಂಬ ವ್ಯಕ್ತಿಯ ಶವವನ್ನು ಯುವಕರ ಗುಂಪೊಂದು ಅವರ ಮನೆಗೆ ತಂದಿತು. ತಮ್ಮ ಪುತ್ರನಿಗೆ ಗುಂಡು ಹಾರಿಸಿ ಕೊಂದಿದ್ದಾರೆ ಎಂದು ತಂದೆ ಮಹಮದಗೌಸ್ ಮಕಾಂದರ್ ಆರೋಪಿಸಿದ್ದಾರೆ. ಮಹಮದ್ ಗೌಸ್ ಮಕಂದಾರ್ ನೀಡಿದ ದೂರಿನ ಮೇಲೆ ಆರು ಮಂದಿ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ದೂರು ನೀಡಿದ ಕೂಡಲೇ ಅಪರಾಧ ನಡೆದ ಸ್ಥಳಕ್ಕೆಬೈಲಹೊಂಗಲ ಡಿವೈಎಸ್ಪಿ ರವಿನಾಯಕ್, ನಂದಗಡ ಪೊಲೀಸ್ ಠಾಣೆಯ ಇನ್ಸ್ ಪೆಕ್ಟರ್ ಎಸ್ ಸಿ ಪಾಟೀಲ್ ಹಾಗೂ ಖಾನಾಪುರ ಠಾಣೆಯ ಇನ್ಸ್ ಪೆಕ್ಟರ್ ಮಂಜುನಾಥ ನಾಯ್ಕ್ ಪರಿಶೀಲನೆ ನಡೆಸಿದರು.

ಪ್ರಾಥಮಿಕ ವರದಿಯ ಪ್ರಕಾರ ಆರೋಪಿಗಳು ಮತ್ತು ಮೃತ ವ್ಯಕ್ತಿಗಳು ಬೇಟೆಗೆ ಹೋದ ಸಂದರ್ಭದಲ್ಲಿ ದುರಂತ ಸಂಭವಿಸಿರಬಹುದು ಎಂದು ಶಂಕಿಸಲಾಗಿದೆ. ಭಾನುವಾರ ರಾತ್ರಿ ಯುವಕರ ತಂಡವೊಂದು ಈ ಪ್ರದೇಶದಲ್ಲಿ ಬೇಟೆಯಾಡಲು ತೆರಳಿದ್ದು, ಈ ವೇಳೆ ಸಾವನ್ನಪ್ಪಿರುವ ಘಟನೆ ನಡೆದಿದೆ ಎನ್ನಲಾಗಿದೆ. ಮಹಮದಗೌಸ್ ಮಕಾಂದರ್ ಅವರು ತಮ್ಮ ಮಗನ ಸಾವು ಯೋಜಿತ ಕೊಲೆಯೇ ಹೊರತು ಆಕಸ್ಮಿಕವಲ್ಲ ಎಂದು ಶಂಕಿಸಿದ್ದಾರೆ.

ಪೊಲೀಸ್ ವರಿಷ್ಠಾಧಿಕಾರಿ ಡಾ.ಭೀಮಾಶಂಕರ್ ಗುಳೇದ್ ಅವರ ಮಾರ್ಗದರ್ಶನದಲ್ಲಿ ನಂದಗಡ ಪೊಲೀಸರು ಯುವಕನ ಸಾವಿನ ಹಿಂದಿನ ಸತ್ಯಾಸತ್ಯತೆ ಕಂಡು ಹಿಡಿಯಲು ತನಿಖೆ ಆರಂಭಿಸಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು