LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಗೋವಿಂದರಾಜನಗರ ಕನ್ನಡ ಜಾನಪದ ಸಮ್ಮೇಳನದ ಲಾಂಛನ ಬಿಡುಗಡೆ

ಬೆಂಗಳೂರು: ಕನ್ನಡ ಜಾನಪದ ಪರಿಷತ್ ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರದ ಡಾ.ರಾಜಕುಮಾರ್ ವಾರ್ಡಿನ ಅಗ್ರಹಾರ ದಾಸರಹಳ್ಳಿಯ ಡಾ.ಬಿ.ಆರ್ ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಜನವರಿ 4ನೇ ತಾರೀಖಿನಂದು ನಡೆಯಲಿರುವ ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರದ ರಾಜ್ಯಮಟ್ಟದ ಪ್ರಪ್ರಥಮ ಕನ್ನಡ ಜಾನಪದ ಸಮ್ಮೇಳನದಲ್ಲಿ ಎಲ್ಲರೂ ಭಾಗಿಯಾಗುವ ಮೂಲಕ ಕನ್ನಡ ಜಾನಪದ ಸಮ್ಮೇಳನವನ್ನು ಯಶಸ್ವಿಗೊಳಿಸಬೇಕೆಂದು ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರದ ಶಾಸಕ ಪ್ರಿಯಕಷ್ಣ ಹೇಳಿದರು.

ಗೋವಿಂದರಾಜನಗರ ಕ್ಷೇತ್ರ ವ್ಯಾಪ್ತಿಯ ಮೂಡಲಪಾಳ್ಯದಲ್ಲಿ ಕನ್ನಡ ಜಾನಪದ ಪರಿಷತ್ ಗೋವಿಂದರಾಜನಗರ ಕ್ಷೇತ್ರದ ಕನ್ನಡ ಜಾನಪದ ಸಮ್ಮೇಳನದ ಲಾಂಛನ ಅನಾವರಣಗೊಳಿಸಿ ಮಾತನಾಡಿದರು. ಜನಪದ ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ಜವಾಬ್ದಾರಿ ಪ್ರತಿಯೊಬ್ಬರ ಮೇಲಿದೆ ಮರೆಯಾಗುತ್ತಿರುವ ಜಾನಪದ ಶ್ರೀಮಂತಿಕೆಯನ್ನು ಮುಂದಿನ ಪೀಳಿಗೆಗೆ ಕೊಂಡೊಯ್ಯುವ ಕೆಲಸ ಆಗಬೇಕಾಗಿದೆ ಜಾನಪದ ಸಮ್ಮೇಳನವನ್ನು ವೈವಿಧ್ಯಮಯವಾಗಿ ಆಚರಿಸುವ ಮೂಲಕ ಮಾದರಿ ಸಮ್ಮೇಳನಕ್ಕೆ ಎಲ್ಲರೂ ಸಾಕ್ಷಿಯಾಗಬೇಕೆಂದರು.

ಗೋವಿಂದರಾಜನಗರ ಕನ್ನಡ ಜಾನಪದ ಪರಿಷತ್ತಿನ ಅಧ್ಯಕ್ಷ ರ. ನರಸಿಂಹಮೂರ್ತಿ ಮಾತನಾಡಿ, ಕನ್ನಡ ಜಾನಪದ ಸಮ್ಮೇಳನ ಜರುಗುವ ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರ ಧಾರ್ಮಿಕ, ಶಿಕ್ಷಣ ಮತ್ತು ಸಹಕಾರಕ್ಕೆ ಹೆಸರುವಾಸಿಯಾಗಿದೆ. ನಾಡು-ನುಡಿ-ನೆಲ-ಜಲ-ಸಂಸ್ಕೃತಿ-ಪರಂಪರೆಯಿಂದ ಸಂಪದ್ಭರಿತವಾಗಿದೆ. ಈ ಜಾನಪದ ಸಮ್ಮೇಳನದಲ್ಲಿ ನಾಡಿನ ವಿವಿಧ ಭಾಗಗಳಿಂದ ಜಾನಪದ ಕಲಾವಿದರು, ಸಾಹಿತಿಗಳು, ಬರಹಗಾರರು ವಿಶೇಷ ಉಪನ್ಯಾಸ ಗೋಷ್ಠಿ ನಡೆಸಿಕೊಡುವರು.

ಖ್ಯಾತ ಜಾನಪದ ಗಾಯಕರು ಹಾಗೂ ಕಲಾವಿದರಿಂದ ಜಾನಪದ ಗಾಯನ, ಜಾನಪದ ನೃತ್ಯ ಕಾರ್ಯಕ್ರಮ ಆಯೋಜನೆ ಮಾಡಲಾಗುವದು. ಈ ಸಮ್ಮೇಳನಕ್ಕೆ ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಎಲ್ಲ ಶಾಲಾ, ಕಾಲೇಜು ವಿದ್ಯಾರ್ಥಿಗಳು, ಶಿಕ್ಷಕರು, ಸಾಹಿತಿಗಳು, ಕಲಾವಿದರು, ಕನ್ನಡಾಭಿಮಾನಿಗಳು, ಸಂಘ-ಸಂಸ್ಥೆಗಳ ಅಧ್ಯಕ್ಷರು ಪದಾಧಿಕಾರಿಗಳು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವ ಮೂಲಕ ಸಮ್ಮೇಳನವನ್ನು ಯಶಸ್ವಿಗೊಳಿಸಬೇಕೆಂದರು.
ಈ ಸಂದರ್ಭದಲ್ಲಿ ಹುಣಸೂರು ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕರಾದ ಶ್ರೀ ಹೆಚ್ ಪಿ ಮಂಜುನಾಥ್, ಬಿಬಿಎಂಪಿ ಮಾಜಿ ಸದಸ್ಯರಾದ ಉಮಾಶಂಕರ್, ಡಾ.ರಾಜಕುಮಾರ್ ವಾರ್ಡ್ ಅಧ್ಯಕ್ಷರಾದ ಪುರುಷೋತ್ತಮ್, ಡಾ.ಬಿ.ಆರ್ ಅಂಬೇಡ್ಕರ್ ಅನುಯಾಯಿಗಳ ವಿಚಾರ ವೇದಿಕೆ ರಾಜ್ಯ ಕಾರ್ಯದರ್ಶಿ ಕೆ ವಿ ಸಂದೀಪ್, ಗೋವಿಂದರಾಜನಗರ ಘಟಕದ ಕನ್ನಡ ಜಾನಪದ ಪರಿಷತ್ತಿನ ಪದಾಧಿಕಾರಿಗಳಾದ ಅಶ್ವಥ್ ನಾರಾಯಣ್, ಕೇಶವ ರಾಜ್, ಶಿವಶಂಕರ್, ಸವಿತಾ, ರಾಮಾಂಜನೇಯ ಮುಖಂಡರಾದ ಗುರುಶಂಕರ್, ಹರ್ಷ, ಕೇಶವ ಮೂರ್ತಿ, ರಾಮಚಂದ್ರ, ಪ್ರವೀಣ್ ಮತ್ತಿತರರು ಹಾಜರಿದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು